ಬೆಂಗಳೂರು: ಮೂರು ದಿನಗಳ ಭೇಟಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷರಾದ ನಂತರ ಮೊದಲ ಬಾರಿಗೆ ಕರ್ನಾಟಕ ರಾಜಧಾನಿ ಬೆಂಗಳೂರಿಗೆ ಆಗಮಿಸಿರುವ ನಿತಿನ್ ನಬಿನ್ ಅವರು ಇಂದು ಬೆಳಗ್ಗೆ ಬಿಜೆಪಿ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಉಪಾಹಾರ ಸವಿದರು.
ಕಳೆದ ರಾತ್ರಿ ಬೆಂಗಳೂರಿಗೆ ಆಗಮಿಸಿದ ನಿತಿನ್ ನಬಿನ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಸ್ವಾಗತಿಸಿದರು. ಅವರ ಭೇಟಿಯನ್ನು ಅತ್ಯಂತ ಸರಳವಾಗಿ ಇರಿಸಲಾಗಿದ್ದು, ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಘೋಷಣೆ ಮತ್ತು 2028ರ ಚುನಾವಣೆಯ ಮೆಗಾ ಪ್ಲಾನ್ ಸಿದ್ಧತೆಯೆಂದು ಬಣ್ಣಿಸಲಾಗುತ್ತಿದೆ.
ಇಂದು ಬೆಳಗ್ಗೆ ನೇರವಾಗಿ ಬೆಂಗಳೂರಿನ ಡಾಲರ್ಸ್ ಕಾಲನಿಯಲ್ಲಿರುವ ಬಿ ಎಸ್ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ ನಿತಿನ್ ನಬಿನ್ ಅವರಿಗೆ ಸ್ವಾಗತ ಕೋರಿ ಚಹಾ-ಕಾಫಿ ವ್ಯವಸ್ಥೆ ಮಾಡಲಾಯಿತು. ದೋಸೆ, ಪೊಂಗಲ್, ಉಪ್ಪಿಟ್ಟು ಉಪಾಹಾರಕ್ಕೆ ಇದ್ದವು. ರಾಜ್ಯ ಬಿಜೆಪಿ ಕೋರ್ ಕಮಿಟಿಯ ಸದಸ್ಯರೆಲ್ಲರೂ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಹಾಜರಿದ್ದರು. ಶಾಸಕರು ಮತ್ತು ಸಂಸದರಿಗೆ ಮಾತ್ರ ಬಿ ಎಸ್ ವೈ ನಿವಾಸದೊಳಗೆ ಭೇಟಿಗೆ ಅವಕಾಶ ನೀಡಲಾಗಿತ್ತು.
ಇಂದು ಅಪಹಾಹ್ನ ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಲಿದೆ.