ರಾಜಕೀಯ

ಬಿಜೆಪಿ ವರಿಷ್ಠ ಯಡಿಯೂರಪ್ಪ ನಿವಾಸದಲ್ಲಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಬ್ರೇಕ್ ಫಾಸ್ಟ್ ಮೀಟಿಂಗ್, ಯಾರೆಲ್ಲಾ ಭಾಗವಹಿಸಿದ್ದರು?-Video

ಕಳೆದ ರಾತ್ರಿ ಬೆಂಗಳೂರಿಗೆ ಆಗಮಿಸಿದ ನಿತಿನ್ ನಬಿನ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಸ್ವಾಗತಿಸಿದರು.

ಬೆಂಗಳೂರು: ಮೂರು ದಿನಗಳ ಭೇಟಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷರಾದ ನಂತರ ಮೊದಲ ಬಾರಿಗೆ ಕರ್ನಾಟಕ ರಾಜಧಾನಿ ಬೆಂಗಳೂರಿಗೆ ಆಗಮಿಸಿರುವ ನಿತಿನ್ ನಬಿನ್ ಅವರು ಇಂದು ಬೆಳಗ್ಗೆ ಬಿಜೆಪಿ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಉಪಾಹಾರ ಸವಿದರು.

ಕಳೆದ ರಾತ್ರಿ ಬೆಂಗಳೂರಿಗೆ ಆಗಮಿಸಿದ ನಿತಿನ್ ನಬಿನ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಕರ್ನಾಟಕ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್ ಸ್ವಾಗತಿಸಿದರು. ಅವರ ಭೇಟಿಯನ್ನು ಅತ್ಯಂತ ಸರಳವಾಗಿ ಇರಿಸಲಾಗಿದ್ದು, ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಘೋಷಣೆ ಮತ್ತು 2028ರ ಚುನಾವಣೆಯ ಮೆಗಾ ಪ್ಲಾನ್ ಸಿದ್ಧತೆಯೆಂದು ಬಣ್ಣಿಸಲಾಗುತ್ತಿದೆ.

ಇಂದು ಬೆಳಗ್ಗೆ ನೇರವಾಗಿ ಬೆಂಗಳೂರಿನ ಡಾಲರ್ಸ್ ಕಾಲನಿಯಲ್ಲಿರುವ ಬಿ ಎಸ್ ಯಡಿಯೂರಪ್ಪ ನಿವಾಸಕ್ಕೆ ಆಗಮಿಸಿದ ನಿತಿನ್ ನಬಿನ್ ಅವರಿಗೆ ಸ್ವಾಗತ ಕೋರಿ ಚಹಾ-ಕಾಫಿ ವ್ಯವಸ್ಥೆ ಮಾಡಲಾಯಿತು. ದೋಸೆ, ಪೊಂಗಲ್, ಉಪ್ಪಿಟ್ಟು ಉಪಾಹಾರಕ್ಕೆ ಇದ್ದವು. ರಾಜ್ಯ ಬಿಜೆಪಿ ಕೋರ್ ಕಮಿಟಿಯ ಸದಸ್ಯರೆಲ್ಲರೂ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಹಾಜರಿದ್ದರು. ಶಾಸಕರು ಮತ್ತು ಸಂಸದರಿಗೆ ಮಾತ್ರ ಬಿ ಎಸ್ ವೈ ನಿವಾಸದೊಳಗೆ ಭೇಟಿಗೆ ಅವಕಾಶ ನೀಡಲಾಗಿತ್ತು.

ಇಂದು ಅಪಹಾಹ್ನ ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಬೋಲಾ ಭೀತಿ: ಡಿಆರ್‌ಸಿ, ಉಗಾಂಡಾ, ದಕ್ಷಿಣ ಸುಡಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

ಅಮೆರಿಕ-ಇರಾನ್ ಮಾತುಕತೆಯಲ್ಲಿ ಮಹತ್ವದ ಪ್ರಗತಿ: ಶಾಂತಿ ಒಪ್ಪಂದ ಅಂತಿಮ ಹಂತದಲ್ಲಿದೆ ಎಂದ ಡೊನಾಲ್ಟ್ ಟ್ರಂಪ್, ಹಾರ್ಮುಜ್ ಜಲಸಂಧಿ ಪುನರಾರಂಭ ನಿರೀಕ್ಷೆ

ಅಮೆರಿಕ ಶ್ವೇತಭವನ ಬಳಿ ಮತ್ತೆ ಗುಂಡಿನ ದಾಳಿ: ಪ್ರತಿದಾಳಿಗೆ ಬಂದೂಕುಧಾರಿ ಸಾವು-Video

ಮಧ್ಯಪ್ರಾಚ್ಯ ಸಂಘರ್ಷ: ತುರ್ತು ಸಭೆ ಕರೆದ ಡೊನಾಲ್ಡ್ ಟ್ರಂಪ್; ವಾಷಿಂಗ್ಟನ್‌ಗೆ ಜೆಡಿ ವ್ಯಾನ್ಸ್ ದಿಢೀರ್ ವಾಪಸ್ಸು, ಕುತೂಹಲ ಮೂಡಿಸಿದ ಬೆಳವಣಿಗೆ..!

‘ಕಾಕ್‌ರೋಚ್ ಜನತಾ ಪಾರ್ಟಿ’ ಖಾತೆ ಬ್ಲಾಕ್: “BJPಗೆ ಭಯವೇಕೆ: ಪಿಣರಾಯಿ ವಿಜಯನ್ ಪ್ರಶ್ನೆ

SCROLL FOR NEXT