ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್, ಸಿಎಂ ಸಿದ್ದರಾಮಯ್ಯ  
ರಾಜಕೀಯ

ಪತ್ನಿಗೆ ಅನಾರೋಗ್ಯ: ಇಂದೋರ್ ರಾಜ್ಯಪಾಲ ಗೆಹ್ಲೋಟ್; ಸಿಎಂ ಸಿದ್ದರಾಮಯ್ಯ ಮುಂದಿರುವ ಆಯ್ಕೆಗಳೇನು?

ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ನಿನ್ನೆ ಬುಧವಾರ ತಡರಾತ್ರಿ ದಿಢೀರ್ ಆಗಿ ಇಂದೋರ್ ಪ್ರಯಾಣ ಬೆಳೆಸಿದ್ದು ಇಂದು ಬೆಳಗ್ಗೆ ತಲುಪಿದ್ದಾರೆ.

ಬೆಂಗಳೂರು: ತಮ್ಮ ಪತ್ನಿಯ ಆರೋಗ್ಯದಲ್ಲಿ ಏರಪೇರು ಉಂಟಾಗಿರುವ ಕಾರಣ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ನಿನ್ನೆ ಬುಧವಾರ ತಡರಾತ್ರಿ ದಿಢೀರ್ ಆಗಿ ಇಂದೋರ್ ಪ್ರಯಾಣ ಬೆಳೆಸಿದ್ದು ಇಂದು ಬೆಳಗ್ಗೆ ತಲುಪಿದ್ದಾರೆ. ಅವರ ಮರಳಿ ಬರುವ ಸಮಯ ನಿಗದಿ ಆಗಿಲ್ಲ ಎಂದು ಲೋಕಭವನದ ಮೂಲಗಳು ತಿಳಿಸಿದ್ದು, ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ಸಲ್ಲಿಕೆ ಮುಂದೂಡಲ್ಪಡುತ್ತದೆಯೇ ಎಂಬ ಮಾತುಗಳು ಕೇಳಿಬರುತ್ತಿವೆ.

ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ಪತ್ರ ನೀಡಲು ನಿರ್ಧರಿಸಿದ್ದಾರೆ. ಖುದ್ದು ಭೇಟಿಗೆ ರಾಜ್ಯಪಾಲರು ಲಭ್ಯ ಇಲ್ಲದೇ ಇರುವುದರಿಂದ ಅವರ ಕಚೇರಿಗೆ ರಾಜೀನಾಮೆ ಪತ್ರ ಸಲ್ಲಿಸುವ ಸಾಧ್ಯತೆಯಿದೆ.

‘ರಾಜ್ಯಪಾಲರ ಪತ್ನಿ ಅನಾರೋಗ್ಯಗೊಂಡಿರುವ ಮಾಹಿತಿ ಕಳೆದ ರಾತ್ರಿ ಬಂತು. ತಕ್ಷಣವೆ ರಾಜ್ಯಪಾಲರು ಇಂದೋರ್ ಗೆ ತೆರಳಿದ್ದಾರೆ. ಪತ್ನಿಯ ಆರೋಗ್ಯ ಸುಧಾರಿಸಿದ ನಂತರವೇ ಅವರ ವಾಪಸ್ ಆಗಬಹುದು. ಈ ಬಗ್ಗೆ ಖಚಿತ ಮಾಹಿತಿ ಇಲ್ಲ’ ಎಂದು ಲೋಕಭವನದ ಮೂಲಗಳು ಹೇಳಿವೆ.

ಹಾಗಾದರೆ ರಾಜೀನಾಮೆ ಸಲ್ಲಿಕೆಗೆ ಬೇರೆ ಆಯ್ಕೆಗಳಿಲ್ಲವೇ?

‘ಸಿದ್ದರಾಮಯ್ಯ ಅವರು ಲೋಕಭವನಕ್ಕೆ ಬಂದು ಮುಖ್ಯಮಂತ್ರಿ ಸ್ಥಾನಕ್ಕೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಬಹುದು. ಅದನ್ನು ಲೋಕಭವನದಿಂದ ರಾಜ್ಯಪಾಲರಿಗೆ ಕಳುಹಿಸಲಾಗುವುದು. ಅವರ ಅಲ್ಲಿಂದಲೇ ಈ ಬಗ್ಗೆ ಮುಂದಿನ ಕ್ರಮವನ್ನು ಸೂಚಿಸಬಹುದು. ಇಂದೋರ್ ನಿಂದ ವಾಪಸ್ ಬಂ ದ ಬಳಿಕ ಸಿದ್ದರಾಮಯ್ಯ

ಅವರನ್ನು ಲೋಕಭವನಕ್ಕೆ ಕರೆಸಿಕೊಂಡು ರಾಜ್ಯಪಾಲರು ಮಾತುಕತೆ ನಡೆಸಬಹುದು’ ಎಂದೂ ಮೂಲಗಳು ಹೇಳಿವೆ. ರಾಜ್ಯಪಾಲರು ಇಂದೋರ್ ನಿಂದ ಯಾವಾಗ ವಾಪಸ್ಸಾಗುತ್ತಾರೆ ಎಂಬ ಬಗ್ಗೆ ಮಾಹಿತಿಯಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾರ್: ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT