ಬೆಂಗಳೂರು: ಮೇ 31 ರೊಳಗೆ ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಪ್ರಸಕ್ತ ಹಣಕಾಸು ವರ್ಷದಲ್ಲಿ ಸುಮಾರು 10 ತಿಂಗಳುಗಳು ಬಾಕಿ ಇದೆ.
ಹೀಗಾಗಿ ಡಿಕೆ ಶಿವಕುಮಾರ್, ಸಮಾಜದ ದೊಡ್ಡ ವರ್ಗಕ್ಕೆ ಉತ್ತಮ ಪ್ರಯೋಜನ ನೀಡುವ ಮತ್ತು ತಕ್ಷಣವೇ ಪರಿಣಾಮ ಬೀರುವ ಗುರಿಯನ್ನು ಹೊಂದಿರುವ ಪ್ರಮುಖ ನೀತಿಯನ್ನು ಘೋಷಿಸುವತ್ತ ಗಮನಹರಿಸಬಹುದು ಎಂದು ಹೇಳಲಾಗಿದೆ.
ಶಿವಕುಮಾರ್ ಹೊಸ ಬಜೆಟ್ ಮಂಡಿಸುವ ಸಾಧ್ಯತೆಯಿಲ್ಲದಿದ್ದರೂ, ತಮ್ಮ ನೀತಿ ಆದ್ಯತೆಗಳು ಮತ್ತು ಪ್ರಮುಖ ಯೋಜನೆಗಳನ್ನು ಸರಿಹೊಂದಿಸಲು ಪೂರಕ ಬಜೆಟ್ ತರುವ ನಿರೀಕ್ಷೆಯಿದೆ.ಈ ವರ್ಷದ ಮಾರ್ಚ್ನಲ್ಲಿ, ಸಿದ್ದರಾಮಯ್ಯ 4.48 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದ್ದರು.
ಈಗ ಮೇ ತಿಂಗಳಲ್ಲಿ, ಶಿವಕುಮಾರ್ ಬಜೆಟ್ನಲ್ಲಿ ಯಾವುದೇ ಬದಲಾವಣೆಗಳನ್ನು ಮಾಡುವ ಸಾಧ್ಯತೆಯಿಲ್ಲ ಎಂದು ಕುಣಿಗಲ್ನ ಕಾಂಗ್ರೆಸ್ ಶಾಸಕ ಡಾ. ಎಚ್ಡಿ ರಂಗನಾಥ್ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ. ರೈತರ ಆರೋಗ್ಯದ ಬಗ್ಗೆ ಕೆಲಸ ಮಾಡಲು ತಮಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ. ಹೀಗಾಗಿ ನಾವು ಅದರ ಮೇಲೆ ಕೆಲಸ ಮಾಡುತ್ತಿದ್ದೇವೆ.
ರಾಜ್ಯಾದ್ಯಂತ ರೈತರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಶಿವಕುಮಾರ್ ಉತ್ಸುಕರಾಗಿದ್ದಾರೆ ಎಂದು ಅವರು ಹೇಳಿದರು. ಇದು ಶಿವಕುಮಾರ್ ಅವರ ನೆಚ್ಚಿನ ಯೋಜನೆಯಾಗಿದ್ದು,ಅವರು ಇದರ ಮೇಲೆ ಕೆಲಸ ಮಾಡುತ್ತಿದ್ದಾರೆ, ಇದನ್ನು ಅವರು ಮುಖ್ಯಮಂತ್ರಿಯಾದ ನಂತರ ಘೋಷಿಸಲಾಗುವುದು ಎಂದು ಅವರು ಹೇಳಿದರು.
10,000 ಸರ್ಕಾರಿ ಶಾಲೆಗಳನ್ನು ಕಾರ್ಪೊರೇಟ್ ಕಂಪನಿಗಳು, ಕೈಗಾರಿಕೋದ್ಯಮಿಗಳು ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು ದತ್ತು ಪಡೆಯುವಂತೆ
ನೀತಿಯನ್ನು ತರುವಲ್ಲಿ ಶಿವಕುಮಾರ್ ಉತ್ಸುಕರಾಗಿದ್ದಾರೆ. ತಮ್ಮ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಯ ಮೂಲಕ, ಶಿವಕುಮಾರ್ ಈ ಸರ್ಕಾರಿ ಶಾಲೆಗಳು ಉತ್ತಮ ಮೂಲಸೌಕರ್ಯವನ್ನು ಪಡೆಯಲು ಬಯಸುತ್ತಾರೆ ಎಂದು ಅವರು ಹೇಳಿದರು. ಶಿವಕುಮಾರ್ ಹೆಚ್ಚಿನ ಸಂಖ್ಯೆಯ ಮಕ್ಕಳು ಸರ್ಕಾರಿ ಶಾಲೆಗಳಿಗೆ ದಾಖಲಾಗುವುದನ್ನು ಖಚಿತಪಡಿಸಿಕೊಳ್ಳಲು ಬಯಸುತ್ತಾರೆ ಎಂದು ಹೇಳಿದರು.
ಶಿವಕುಮಾರ್ ಬಜೆಟ್ ಮಂಡಿಸದಿರಬಹುದು, ಬದಲಾಗಿ, ಅವರು ಆದಾಯ ಕ್ರೋಢೀಕರಣಕ್ಕೆ ಒತ್ತು ನೀಡುತ್ತಾರೆ ಮತ್ತು ಅಭಿವೃದ್ಧಿ ಕಾರ್ಯಗಳ ಮೇಲೆ ಕೇಂದ್ರೀಕರಿಸುತ್ತಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.