ಪ್ರಿಯಾಂಕ್ ಖರ್ಗೆ 
ರಾಜಕೀಯ

ಅಲ್ಪರಿಗೆ ಐಶ್ವರ್ಯ ಬಂದರೆ ಮಧ್ಯರಾತ್ರಿಯಲ್ಲಿ ಕೊಡೆ ಹಿಡಿದರಂತೆ...ಪ್ರಿಯಾಂಕ್ ಖರ್ಗೆ ಝೀರೋ ಟ್ರಾಫಿಕ್‌ ಕುರಿತು ಬಿಸಿ ಪಾಟೀಲ್ ವ್ಯಂಗ್ಯ

ಹೋಂ ಮಿನಿಸ್ಟ್ರಿಗೆ ಜೀರೋ ಟ್ರಾಫಿಕ್ ಇಲ್ಲ ಎನ್ನುವುದು ನನ್ನ ಅಭಿಪ್ರಾಯ ಮತ್ತು ನನಗೆ ಗೊತ್ತಿರುವ ವಿಷಯ ಇದು ಯಾವಾಗಿನಿಂದ ಬಂತು. ಇದರಿಂದ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿ ಏರ್ಪೋರ್ಟ್ ಹೋಗುವಂತ ಪ್ರಯಾಣಿಕರು ಪರದಾಡುವಂತಾಯಿತು.

ಬೆಂಗಳೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿಮಾನ ನಿಲ್ದಾಣಕ್ಕೆ ತೆರಳುವ ವೇಳೆ ಝೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು ಎಂದು ಆರೋಪಿಸಿರುವ ಮಾಜಿ ಸಚಿವ ಬಿ.ಸಿ. ಪಾಟೀಲ್, ಈ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಬಿ.ಸಿ. ಪಾಟೀಲ್, ಮಂಗಳವಾರ ಬೆಳಗ್ಗೆ ಸುಮಾರು 5.30ರ ವೇಳೆಗೆ ಬೆಂಗಳೂರಿನಿಂದ ವಿಮಾನ ನಿಲ್ದಾಣದತ್ತ ತೆರಳುತ್ತಿದ್ದಾಗ ಸಂಚಾರ ಪೊಲೀಸರು ರಸ್ತೆಯನ್ನು ತಡೆದು ‘ಝೀರೋ ಟ್ರಾಫಿಕ್’ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು ಎಂದು ಹೇಳಿದ್ದಾರೆ.

ಯಾರು ತೆರಳುತ್ತಿದ್ದಾರೆ ಎಂದು ಪೊಲೀಸರನ್ನು ಪ್ರಶ್ನಿಸಿದಾಗ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದಾರೆ ಎಂದು ತಿಳಿಸಿದ್ದರು.

ಹೋಂ ಮಿನಿಸ್ಟ್ರಿಗೆ ಜೀರೋ ಟ್ರಾಫಿಕ್ ಇಲ್ಲ ಎನ್ನುವುದು ನನ್ನ ಅಭಿಪ್ರಾಯ ಮತ್ತು ನನಗೆ ಗೊತ್ತಿರುವ ವಿಷಯ ಇದು ಯಾವಾಗಿನಿಂದ ಬಂತು. ಇದರಿಂದ ಸಂಪೂರ್ಣ ಟ್ರಾಫಿಕ್ ಜಾಮ್ ಆಗಿ ಏರ್ಪೋರ್ಟ್ ಹೋಗುವಂತ ಪ್ರಯಾಣಿಕರು ಪರದಾಡುವಂತಾಯಿತು. ಅಲ್ಪರಿಗೆ ಐಶ್ವರ್ಯ ಬಂದರೆ ಮಧ್ಯರಾತ್ರಿಲಿ ಕೊಡೆ ಹಿಡಿದಿದ್ದರು ಅಂತ ಹೇಳ್ತಾರೆ ಹಾಗಾಯ್ತು ಈ ರಾಜ್ಯದ ಗೃಹಮಂತ್ರಿ ಕತೆ ಎಂದು ವ್ಯಂಗ್ಯವಾಡಿದ್ದಾರೆ.

ಸಾಕಷ್ಟು ಪ್ರಯಾಣಿಕರು ಫ್ಲೈಟ್ ತಪ್ಪಿ ಹೋಗುತ್ತೆ ಅಂತ ಪರದಾಡ್ತಾ ಇದ್ರು ಇದು ಎಐಸಿಸಿ ಅಧ್ಯಕ್ಷ ರ ಮಗ ಎನ್ನುವುದಕ್ಕೆ ವಿಶೇಷ ಸೌಲಭ್ಯವೇ ಇನ್ನು ಮುಂದಾದರೂ ಮುಖ್ಯಮಂತ್ರಿಗಳು ಇಂತಹ ಗೃಹ ಮಂತ್ರಿ ಗೆ ಸೂಕ್ತ ತಿಳುವಳಿಕೆಯನ್ನು ನೀಡಿ ಕಾನೂನು ಬದ್ಧವಾಗಿ ನಡೆದುಕೊಳ್ಳಲು ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ದೇಶ ಸಂತಸದಿಂದ ತುಂಬಿದೆ, ಆದರೆ ಕೆಲವರು ಸುಳ್ಳು ಹೇಳಿ ಜನರಲ್ಲಿ ನಿರಾಶೆ ಮೂಡಿಸಲು ಯತ್ನಿಸುತ್ತಿದ್ದಾರೆ': ವಿಡಿಯೊ ಮೂಲಕ ಪ್ರಧಾನಿ ಮೋದಿ ಹೇಳಿದ್ದೇನು? ; Video

ಸುಮ್ಮನೆ ಬಿಡಲ್ಲ, ಇರಾನ್‌ಗೆ ತಕ್ಕ ಶಾಸ್ತಿ: ಟ್ರಂಪ್ ಕಠಿಣ ಎಚ್ಚರಿಕೆ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಯುದ್ಧಾತಂಕ..!

Commercial Cylinder Rate: ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಹೆಚ್ಚಳ; ಪರಿಷ್ಕೃತ ದರ ಇಂದಿನಿಂದಲೇ ಜಾರಿ

New York’s Times Squareನಲ್ಲಿ ರಕ್ತಪಾತ: ದಾರಿಹೋಕರಿಗೆ ಚೂರಿ ಇರಿತ, ಆತಂಕ ಸೃಷ್ಟಿಸಿದ್ದ ಮಹಿಳೆ ಪೊಲೀಸರ ಗುಂಡಿಗೆ ಬಲಿ..!

ರೆಸಾರ್ಟ್‌ನಲ್ಲಿ AEE ಪರೀಕ್ಷೆ ಬರೆಸಿದ ಪ್ರಿಯಾಂಕ್‌: ಮಿಸ್ಟರ್‌ ಖರ್ಗೆ- ನನ್ನ ಹತ್ರ ನಿಮ್ಮ ಆಟ ನಡೆಯಲ್ಲ; ಕುಮಾರಸ್ವಾಮಿ ವಾಗ್ದಾಳಿ