ಪ್ರಿಯಾಂಕ್ ಖರ್ಗೆ 
ರಾಜಕೀಯ

KPSC ಹಗರಣ: ಬಸವರಾಜ್ ಕನ್ನಾಳೆ ಬಗ್ಗೆ ಮೌನವೇಕೆ? ಕೂಗಾಡಿ ಸತ್ಯ ಮುಚ್ಚಿಡಲು ಸಾಧ್ಯವಿಲ್ಲ; ರಾಜೀನಾಮೆಗೆ ಆಗ್ರಹಿಸುತ್ತಿರುವ BJPಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಗಟ್ಟಿಯಾಗಿ ಕೂಗಾಡಿದ ಮಾತ್ರಕ್ಕೆ ಸತ್ಯವನ್ನು ಮುಚ್ಚಿಹಾಕಲು ಸಾಧ್ಯವಿಲ್ಲ. ಆದ್ದರಿಂದ, ನನ್ನ ರಾಜೀನಾಮೆಯನ್ನು ಒತ್ತಾಯಿಸುವ ಬದಲು, ಬಿಜೆಪಿ ಈ ಕೆಳಗಿನ ಕೆಲವು ಸರಳ ಪ್ರಶ್ನೆಗಳಿಗೆ ಉತ್ತರಿಸಲಿ...

ಬೆಂಗಳೂರು: KPSC ಹಗರಣ ಪ್ರಕರಣದಲ್ಲಿ ತಮ್ಮ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಜೋರಾಗಿ ಕೂಗಾಡುವುದರಿಂದ ಸತ್ಯವನ್ನು ಎಂದಿಗೂ ಮುಚ್ಚಿಡಲು ಸಾಧ್ಯವಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಪ್ರಿಯಾಂಕ್ ಖರ್ಗೆಯವರು, ನನ್ನ ರಾಜೀನಾಮೆಗಾಗಿ ಹಠ ಹಿಡಿದಿರುವ ಬಿಜೆಪಿ ನಾಯಕರ ನೈತಿಕತೆಯನ್ನು ಪ್ರಶ್ನಿಸಿ, ಈ ಹಗರಣದ ಮುಖ್ಯ ಆರೋಪಿಗಳಾದ ಬಸವರಾಜ ಕನ್ನಾಳೆ ಮತ್ತು ಕೆಪಿಎಸ್‌ಸಿಯ ಅಮಾನತುಗೊಂಡ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ವಿಷಯದಲ್ಲಿ ಬಿಜೆಪಿ ಮೌನವಾಗಿರುವುದೇಗೆ ಎಂದು ಕೇಳಿದ್ದಾರೆ.

ಗಟ್ಟಿಯಾಗಿ ಕೂಗಾಡಿದ ಮಾತ್ರಕ್ಕೆ ಸತ್ಯವನ್ನು ಮುಚ್ಚಿಹಾಕಲು ಸಾಧ್ಯವಿಲ್ಲ. ಆದ್ದರಿಂದ, ನನ್ನ ರಾಜೀನಾಮೆಯನ್ನು ಒತ್ತಾಯಿಸುವ ಬದಲು, ಬಿಜೆಪಿ ಈ ಕೆಳಗಿನ ಕೆಲವು ಸರಳ ಪ್ರಶ್ನೆಗಳಿಗೆ ಉತ್ತರಿಸಲಿ...

KPSC ಹಗರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ಬಸವರಾಜ ಕನ್ನಾಳೆ ಅವರ ವಿಷಯದಲ್ಲಿ ಬಿಜೆಪಿ ನಾಯಕರು ಏಕೆ ಮೌನವಾಗಿದ್ದಾರೆ? ಅವರು ಬಿಜೆಪಿಯ ಅಧಿಕೃತ ಸಭೆಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರವಾಸಗಳಲ್ಲಿ ಬಿಜೆಪಿ ನಾಯಕರೊಂದಿಗೆ ಕಾಣಿಸಿಕೊಳ್ಳುತ್ತಾರೆ.

ಅವರ "ಅಪ್ಪಾಜಿ"ಯ ಆಶೀರ್ವಾದ ಪಡೆಯುತ್ತಿರುವುದು ಕಂಡುಬರುತ್ತದೆ. ಬಿಜೆಪಿ ನಾಯಕರು ಅವರ ಹುಟ್ಟುಹಬ್ಬದ ಆಚರಣೆಗಳಲ್ಲಿ ಭಾಗವಹಿಸುತ್ತಾರೆ. ಅವರ ಉದ್ಯಮಗಳಿಗೆ ಚಾಲನೆ ನೀಡುವುದನ್ನು ಹಾಗೂ ಅವರಿಗೆ ಅತ್ಯಂತ ಪ್ರೀತಿಯಿಂದ ತಿನಿಸುವುದನ್ನು ಕಾಣಬಹುದು.

ಹೀಗಿರುವಾಗ ಬಿಜೆಪಿಗರು ನನ್ನ ರಾಜೀನಾಮೆಗೆ ಮಾತ್ರ ಒತ್ತಾಯಿಸುತ್ತಾರೆ. ದೇಶದಿಂದ ಪರಾರಿಯಾಗಲು ಬಸವರಾಜ ಕನ್ನಾಳೆ ನಡೆಸಿದರೆನ್ನಲಾದ ಪ್ರಯತ್ನದ ಬಗ್ಗೆ ಬಿಜೆಪಿ ನಾಯಕರು ಏಕೆ ಮೌನವಾಗಿದ್ದಾರೆ? ಶಿವಶಂಕರಪ್ಪ ಸಾಹುಕಾರ್ ವಿಷಯ ಬಂದಾಗ ಅವರ ಬಾಯಿ ಏಕೆ ಮುಚ್ಚಿಕೊಂಡಿದೆ?

ಮತ್ತು ಇನ್ನೂ ದೊಡ್ಡ ಪ್ರಶ್ನೆಯೊಂದಿದೆ... ಜನರನ್ನು KPSC ಸದಸ್ಯರು ಮತ್ತು ಅಧ್ಯಕ್ಷರನ್ನಾಗಿ ಮಾಡಲು ಬಿಜೆಪಿ ನಾಯಕರು ಎಷ್ಟು ಹಣ ಪಡೆದಿದ್ದಾರೆ? ವಾಸ್ತವವಾಗಿ ಎಷ್ಟು ಬಿಜೆಪಿ ನಾಯಕರು KPSC ಹಗರಣದ ಬಗ್ಗೆ ಮಾತನಾಡಿದ್ದಾರೆ ಅಥವಾ ಹೊಣೆಗಾರಿಕೆಯನ್ನು ಒತ್ತಾಯಿಸಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ ಕಟ್ಟಡ ದುರಂತ: ಮೃತರ ಸಂಖ್ಯೆ 7ಕ್ಕೆ ಏರಿಕೆ; ತಲೆಮರೆಸಿಕೊಂಡಿರುವ PG ಮಾಲೀಕನ ವಿರುದ್ಧ Lookout Notice ಜಾರಿ, ಇಂದು High courtನಲ್ಲಿ ತುರ್ತು ವಿಚಾರಣೆ..!

‘ಓವರ್‌ಟೇಕ್‌ ಎಡವಟ್ಟು, ಮೂರೇ ಸೆಕೆಂಡ್ ನಲ್ಲಿ ದುರಂತ!’; ಮಂಡ್ಯದಲ್ಲಿ ಭೀಕರ ಕಾರು ಅಪಘಾತ: ಮಹಿಳೆ ಸಾವು, Video Viral

ಬಿಜೆಪಿಯವರು 'ಹಣ ಕೊಟ್ಟು ಪಾದಯಾತ್ರೆ' ನಡೆಸ್ತಾ ಇದ್ದಾರೆ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ವಾಗ್ದಾಳಿ! Video

Devi Awards 2026: ಮಹಿಳೆಯರನ್ನು ಕೇವಲ ಫಲಾನುಭವಿಗಳಾಗಿ ನೋಡುವ ಬದಲು ಅಭಿವೃದ್ಧಿಯ ಪಾಲುದಾರರು, ನಾಯಕಿಯರನ್ನಾಗಿ ಪರಿಗಣಿಸಬೇಕು- ಒಡಿಶಾ ಡಿಸಿಎಂ

West asia conflict: ಬೆದರಿಕೆಗೆ ಮಣಿಯಲ್ಲ, ದಾಳಿ ನಿಲ್ಲದ ಹೊರತು ಹಾರ್ಮುಜ್ ಜಲಸಂಧಿ ತೆರೆಯಲ್ಲ: ಅಮೆರಿಕಾಕ್ಕೆ Iran ಖಡಕ್ ಸಂದೇಶ..!