ಡಿಕೆ.ಶಿವಕುಮಾರ್  
ರಾಜಕೀಯ

KPSC ಹಗರಣ: ನಮ್ಮ ರಹಸ್ಯ ದಾಖಲೆಗಳ ನಿಧಿ ಬಗ್ಗೆ ಅವರಿಗೆ ಕಲ್ಪನೆಯೂ ಇಲ್ಲ, CID ತನಿಖೆ ಮುಗಿಯಲಿ, ದಾಖಲೆ ಸಮೇತ ಉತ್ತರ ಕೊಡ್ತೀವಿ; ವಿಪಕ್ಷಗಳ ಆರೋಪಕ್ಕೆ ಡಿಕೆಶಿ ತಿರುಗೇಟು

ಅವರು ಕನಸು ಕಾಣಲಿ, ಹಗಲುಗನಸು ಕಾಣಲಿ. ನಮ್ಮ ಬಳಿ ಏನಿದೆ ಎಂಬುದು ಅವರ ಕಲ್ಪನೆಯಲ್ಲೂ ಇಲ್ಲ. ನಮ್ಮ ‘ಗುಪ್ತ ನಿಧಿ’ಯಲ್ಲಿ ಏನಿದೆ ಎಂಬುದು ಅವರಿಗೆ ತಿಳಿದಿಲ್ಲ ಎಂದು ಮಾರ್ಮಿಕವಾಗಿ ನುಡಿದರು.

ಬೆಂಗಳೂರು: ಕೆಪಿಎಸ್‌ಸಿ ಹಗರಣದ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸುತ್ತಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಬಳಿ ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದ ಹಗರಣಗಳ ದಾಖಲೆಗಳ ‘ರಹಸ್ಯ ನಿಧಿ’ (Secret Reserve) ಇದೆ. ಇದರ ಅರಿವಿಲ್ಲದ ವಿರೋಧ ಪಕ್ಷದ ನಾಯಕರು ಹಗಲುಗನಸು ಕಾಣುವುದನ್ನು ನಿಲ್ಲಿಸಬೇಕು" ಎಂದು ಲೇವಡಿ ಮಾಡಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಯಲ್ಲಿ ಪ್ರಿಯಾಂಕ್ ಖರ್ಗೆ ಅವರು ಸಚಿವರಾಗಿದ್ದ ಅವಧಿಯಲ್ಲಿ 24 ಸಹಾಯಕ ಕಾರ್ಯಪಾಲಕ ಎಂಜಿನಿಯರ್ (AEE) ಹುದ್ದೆಗಳ ನೇಮಕಾತಿಯಲ್ಲಿ ಒಎಂಆರ್ (OMR) ಶೀಟ್ ತಿರುಚುವಿಕೆ ಸೇರಿದಂತೆ ದೊಡ್ಡ ಮಟ್ಟದ ಅಕ್ರಮ ನಡೆದಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಗೃಹ ಸಚಿವರ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ಬಿಜೆಪಿ ಪದೇಪದೆ ಒತ್ತಾಯಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಶಿವಕುಮಾರ್, ಪ್ರತಿಪಕ್ಷದವರು ಕನಸು ಕಾಣುತ್ತಲೇ ಇರಬಹುದು. ಆದರೆ, ಸರ್ಕಾರದ ಬಳಿ ಆರೋಪಗಳಿಗೆ ತಕ್ಕ ಉತ್ತರ ನೀಡಲು ಸಾಕಷ್ಟು ಮಾಹಿತಿ ಮತ್ತು ದಾಖಲೆಗಳಿವೆ ಎಂದು ಹೇಳಿದರು.

ಅವರು ಕನಸು ಕಾಣಲಿ, ಹಗಲುಗನಸು ಕಾಣಲಿ. ನಮ್ಮ ಬಳಿ ಏನಿದೆ ಎಂಬುದು ಅವರ ಕಲ್ಪನೆಯಲ್ಲೂ ಇಲ್ಲ. ನಮ್ಮ ‘ಗುಪ್ತ ನಿಧಿ’ಯಲ್ಲಿ ಏನಿದೆ ಎಂಬುದು ಅವರಿಗೆ ತಿಳಿದಿಲ್ಲ ಎಂದು ಮಾರ್ಮಿಕವಾಗಿ ನುಡಿದರು.

ಇದೇ ವೇಳೆ ಪ್ರತಿಪಕ್ಷದ ಆರೋಪಗಳ ತಂತ್ರದ ಬಗ್ಗೆ ವ್ಯಂಗ್ಯವಾಡಿದ ಅವರು, ಸರ್ಕಾರದ ಬಳಿ ಇರುವ ವಾಸ್ತವಾಂಶಗಳನ್ನು ತಿಳಿಯದೆ, ಆರೋಪಗಳನ್ನು ಮಾಡುವ ಮೂಲಕ ಬಿಜೆಪಿ ‘ಹಿಟ್ ವಿಕೆಟ್’ ರಾಜಕಾರಣಕ್ಕೆ ಸಿಲುಕದಂತೆ ಎಚ್ಚರಿಕೆ ವಹಿಸಬೇಕು.

ಅವರು ಯಾವ ಬಾಂಬ್ ಬೇಕಾದರೂ ಹಾಕಲಿ. ನಾನು ಯಾವುದೇ ಆತುರದಲ್ಲಿಲ್ಲ. ನಾನು ವೈಯಕ್ತಿಕ ವಿಚಾರಗಳಿಗೆ ಹೋಗುವುದಿಲ್ಲ. ಕೆಪಿಎಸ್‌ಸಿ ಅಧ್ಯಕ್ಷರನ್ನು ನೇಮಕ ಮಾಡಿದ್ದು ಯಾರು? ಇದರಲ್ಲಿ ಯಾರೆಲ್ಲ ಭಾಗಿಯಾಗಿದ್ದರು? ಯಾರು ಹೊಣೆಗಾರರು? ಯಾರು ಪಾಲ್ಗೊಂಡಿದ್ದರು? ಭೂಮಿ ಖರೀದಿ ಸೇರಿದಂತೆ ಹಲವು ಆರೋಪಗಳಿವೆ ಎಂದು ಹೇಳಿದರು.

ಸರ್ಕಾರದ ಆದ್ಯತೆ ಅಭಿವೃದ್ಧಿ, ರೈತರ ಕಲ್ಯಾಣ ಹಾಗೂ ನೇಮಕಾತಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾರದರ್ಶಕತೆ ಕಾಪಾಡುವುದಾಗಿದೆ. ಕೆಪಿಎಸ್‌ಸಿ ಸೇರಿದಂತೆ ನೇಮಕಾತಿ ಸಂಸ್ಥೆಗಳು ನಡೆಸುವ ಪರೀಕ್ಷೆಗಳ ವಿಶ್ವಾಸಾರ್ಹತೆ ಕಾಪಾಡಲು ಸರ್ಕಾರ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ. ನೀಟ್‌ಗೆ ಸಂಬಂಧಿಸಿದ ಪ್ರಕ್ರಿಯೆಯಲ್ಲೂ ಪರೀಕ್ಷೆಗಳ ಪಾರದರ್ಶಕತೆ ಮತ್ತು ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಜಾಗತಿಕ ಕನ್ನಡಿಗರಿಗೆ ಎರಡು ರಾಜ್ಯೋತ್ಸವ ಪ್ರಶಸ್ತಿ

ಇದೇ ವೇಳೆ ಅಮೆರಿಕದಲ್ಲಿ ನಡೆದ ಅಕ್ಕ ವಿಶ್ವ ಕನ್ನಡ ಸಮ್ಮೇಳನದಲ್ಲಿ ವರ್ಚುವಲ್ ಮೂಲಕ ಭಾಗವಹಿಸಿದ್ದ ಕುರಿತು ಮಾತನಾಡಿದ ಶಿವಕುಮಾರ್ ಅವರು, ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು ಜಗತ್ತಿನಾದ್ಯಂತ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ರಾಯಭಾರಿಗಳಂತೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಮುಂದಿನ ವರ್ಷದಿಂದ ಕನ್ನಡವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆಸಲು ಮಹತ್ವದ ಕೊಡುಗೆ ನೀಡಿರುವ ವಿದೇಶದಲ್ಲಿರುವ ಇಬ್ಬರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಲು ಸರ್ಕಾರ ಉದ್ದೇಶಿಸಿದೆ ಎಂದು ತಿಳಿಸಿದರು.

ವಿವಿಧ ದೇಶಗಳಲ್ಲಿ ನೆಲೆಸಿರುವ ಹಾಗೂ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಪ್ರಚಾರಕ್ಕೆ ಗಣನೀಯ ಕೊಡುಗೆ ನೀಡಿರುವ ಪ್ರತಿನಿಧಿಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು ಎಂದು ಹೇಳಿದರು.

ಸಿಎಂ ದೆಹಲಿ ಪ್ರವಾಸ ರದ್ದು

ಈ ನಡುವೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸೋಮವಾರದಿಂದ ಕೈಗೊಳ್ಳಬೇಕಿದ್ದ ಎರಡು ದಿನಗಳ ನವದೆಹಲಿಯ ಪ್ರವಾಸವನ್ನು ರದ್ದುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

West asia conflict: ಬೆದರಿಕೆಗೆ ಮಣಿಯಲ್ಲ, ದಾಳಿ ನಿಲ್ಲದ ಹೊರತು ಹಾರ್ಮುಜ್ ಜಲಸಂಧಿ ತೆರೆಯಲ್ಲ: ಅಮೆರಿಕಾಕ್ಕೆ Iran ಖಡಕ್ ಸಂದೇಶ..!

ದೆಹಲಿ ಹಾಸ್ಟೆಲ್ ದುರಂತ: ಸಾವಿನ ಸಂಖ್ಯೆ 6ಕ್ಕೆ ಏರಿಕೆ; 11 ಮಂದಿ ರಕ್ಷಣೆ, ಮುಂದುವರಿದ ರಕ್ಷಣಾ ಕಾರ್ಯಾಚರಣೆ

ರಸ್ತೆ ಸಾರ್ವಜನಿಕ ಆಸ್ತಿ, ಕಾರು ಮಾಲೀಕರ ಸ್ವತ್ತಲ್ಲ: ಸಂಚಾರ ದಟ್ಟಣೆ ಕಡಿಮೆಯಾಗಬೇಕಾದರೆ ಪಾರ್ಕಿಂಗ್ ನಿಯಂತ್ರಣ ಅಗತ್ಯ; ಸಚಿವ ಕೃಷ್ಣ ಬೈರೇಗೌಡ (INTERVIEW)

Bigg Boss Kannada 13 ಆರಂಭ; ಎಲ್ಲಾ 16 ಸ್ಪರ್ಧಿಗಳ ಸಂಪೂರ್ಣ ವಿವರ ಇಲ್ಲಿದೆ ನೋಡಿ!

KPSC ಹಗರಣ: ಶಾಂತಾ ಹೊಸಮನಿಗಾಗಿ ಸಿಐಡಿ ಶೋಧ; ಬಂಧನ ವಾರಂಟ್‌ಗೆ ಕೋರ್ಟ್ ಗೆ ಮನವಿ ಸಾಧ್ಯತೆ!