ಬಸವರಾಜ ರಾಯರೆಡ್ಡಿ  
ರಾಜಕೀಯ

'ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಹೇಳುವುದರಲ್ಲಿ ತಪ್ಪೇನಿದೆ, ಅದು ಅವರ ಅಭಿಪ್ರಾಯ'; Video

ಇತ್ತೀಚೆಗೆ ನಡೆದ ಒಬಿಸಿ ಸಮಾವೇಶದಲ್ಲಿ ಶಾಸಕ ಪ್ರದೀಪ್‌ ಈಶ್ವರ್‌ ಅವರು ನೀಡಿದ ಹೇಳಿಕೆ ಕುರಿತು ವರದಿಗಾರರು ಕೇಳಿದ ಪ್ರಶ್ನೆಗೆ ಇಂದು ಸಚಿವ ಬಸವರಾಜ ರಾಯರೆಡ್ಡಿ ಉತ್ತರಿಸುತ್ತಿದ್ದರು.

ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳುವುದರಲ್ಲಿ ತಪ್ಪೇನಿದೆ? ಎಲ್ಲರಿಗೂ ಅವರದ್ದೇ ಆದ ಅಭಿಪ್ರಾಯಗಳಿರುತ್ತವೆ: ಶಾಸಕ ಪ್ರದೀಪ್‌ ಈಶ್ವರ್‌ ಅವರು ಮಾಜಿ ಮುಖ್ಯಮಂತ್ರಿಯನ್ನು ರಾಜ್ಯದ ‘ಮುಂದಿನ ಮುಖ್ಯಮಂತ್ರಿ’ ಎಂದು ಉಲ್ಲೇಖಿಸಿರುವ ಕುರಿತು ರಾಜ್ಯ ಸಚಿವ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯಿಸಿದ್ದಾರೆ.

ಇತ್ತೀಚೆಗೆ ನಡೆದ ಒಬಿಸಿ ಸಮಾವೇಶದಲ್ಲಿ ಶಾಸಕ ಪ್ರದೀಪ್‌ ಈಶ್ವರ್‌ ಅವರು ನೀಡಿದ ಹೇಳಿಕೆ ಕುರಿತು ವರದಿಗಾರರು ಕೇಳಿದ ಪ್ರಶ್ನೆಗೆ ಇಂದು ಸಚಿವ ಬಸವರಾಜ ರಾಯರೆಡ್ಡಿ ಉತ್ತರಿಸುತ್ತಿದ್ದರು.

ಪ್ರದೀಪ್ ಈಶ್ವರ್ ಹಾಗೆ ಹೇಳಿದ್ದರೆ ಅದರಲ್ಲಿ ತಪ್ಪೇನಿದೆ? ಅವರು ತಮ್ಮ ವೈಯಕ್ತಿಕ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಇದು ಪಕ್ಷ ನಿರ್ಧರಿಸಬೇಕಾದ ವಿಚಾರ. ಪಕ್ಷವೇ ನಿರ್ಧರಿಸಬೇಕು. ವೈಯಕ್ತಿಕವಾಗಿ ನಾನು ಯಾರನ್ನು ಮೆಚ್ಚುತ್ತೇನೆ ಎಂಬುದನ್ನು ಹೇಳುತ್ತೇನೆ. ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಹೇಳುವುದರಲ್ಲಿ ತಪ್ಪೇನಿದೆ? ಎಲ್ಲರಿಗೂ ಅವರದ್ದೇ ಆದ ಅಭಿಪ್ರಾಯಗಳಿರುತ್ತವೆ ಎಂದರು.

ಇತ್ತೀಚೆಗೆ ನಡೆದ ಒಬಿಸಿ ಸಮಾವೇಶದಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್‌ ಈಶ್ವರ್‌ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ವಾಗತಿಸುವ ವೇಳೆ ರಾಜ್ಯದ “ಮುಂದಿನ ಮುಖ್ಯಮಂತ್ರಿ” ಎಂದು ಉಲ್ಲೇಖಿಸಿದ್ದರು.

ಇದೇ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರು ಕರ್ನಾಟಕದ ಸಾಮಾಜಿಕ-ಆರ್ಥಿಕ ಸಮೀಕ್ಷೆಯನ್ನು ಜಾರಿಗೊಳಿಸುವಂತೆ ಮತ್ತೊಮ್ಮೆ ಒತ್ತಾಯಿಸಿ, ಶೇ.75ರಷ್ಟು ಮೀಸಲಾತಿಗೆ ಆಗ್ರಹಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದರ್ಶನ್‌ಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್: 59ನೇ ಸಿಹೆಚ್ ಹೆಚ್ ಕೋರ್ಟ್ ಆದೇಶ ರದ್ದು!

ಯುಕ್ರೇನ್ ವಿರುದ್ಧದ ಯುದ್ಧ: ಭಾರತದ ಶಾಂತಿ ಪ್ರಯತ್ನಗಳನ್ನು ಸ್ವಾಗತಿಸುತ್ತೇವೆ- ರಷ್ಯಾ; ಆ.11 ರಂದು ಮೋದಿ-ಪುಟಿನ್ ದ್ವಿಪಕ್ಷೀಯ ಮಾತುಕತೆ

‘ನಮಗೆ ಸೇಡು ಬೇಡ, ನ್ಯಾಯ ಬೇಕು’: ಮಣಿಪುರ ಸಂಗೀತ ಶಿಕ್ಷಕನ ಪತ್ನಿ ಕಣ್ಣೀರು

ಚಿಕ್ಕಬಳ್ಳಾಪುರ: ಗಂಡನನ್ನು ಬಿಟ್ಟು ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆ ಸಾವು; ಮೊಬೈಲ್ನೊಂದಿಗೆ ಪ್ರಿಯಕರ ಶಬ್ಬೀರ್ ಪರಾರಿ!

ಬಡ ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ಸಂಜು ಸ್ಯಾಮ್ಸನ್; 1 ಸಾವಿರ UPSC ಆಕಾಂಕ್ಷಿಗಳಿಗೆ ಸ್ಕಾಲರ್‌ಶಿಪ್!