ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಕಾಂಗ್ರೆಸ್ ನಾಯಕರು  
ರಾಜಕೀಯ

'ಎದೆಗುಂದಬೇಡಿ, ಧೈರ್ಯವಾಗಿರಿ': ED ದಾಳಿ ಬೆನ್ನಲ್ಲೇ ಸಚಿವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಸಿಎಂ ಸೇರಿ ಕಾಂಗ್ರೆಸ್ ನಾಯಕರ ಭೇಟಿ, ಅಭಯ; Video

ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸತೀಶ್ ಅವರ ಬೆಂಗಳೂರು ಮತ್ತು ಬೆಳಗಾವಿ ಜಿಲ್ಲೆಯಲ್ಲಿರುವ ನಿವಾಸದ ಮೇಲೆ ಎರಡು ದಿನಗಳ ಕಾಲ ದಾಳಿ ನಡೆಸಿದ್ದರು. ಅಷ್ಟೇ ಅಲ್ಲದೆ, ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಹಾಗೂ ಪುತ್ರ ರಾಹುಲ್ ಅವರಿಗೆ ಸಂಬಂಧಿಸಿದಂತಹ ಸ್ಥಳಗಳ ಮೇಲೂ ದಾಳಿ ನಡೆಸಿದ್ದರು.

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಇಡಿ ದಾಳಿಯ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಸಚಿವರ ನಿವಾಸಕ್ಕೆ ಆಗಮಿಸಿದ್ದಾರೆ. ಸತೀಶ್ ಬೆನ್ನಿಗೆ ಕೈ ನಾಯಕರು ನಿಂತಿದ್ದು, ಸ್ವತಃ ಸಿಎಂ ಡಿಕೆ ಶಿವಕುಮಾರ್ ಅವರು ಜಾರಕಿಹೊಳಿ ನಿವಾಸಕ್ಕೆ ನಿನ್ನೆ ತಡ ರಾತ್ರಿ ತೆರಳಿ ಮಾತುಕತೆ ನಡೆಸಿದ್ದಾರೆ.

ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸತೀಶ್ ಅವರ ಬೆಂಗಳೂರು ಮತ್ತು ಬೆಳಗಾವಿ ಜಿಲ್ಲೆಯಲ್ಲಿರುವ ನಿವಾಸದ ಮೇಲೆ ಎರಡು ದಿನಗಳ ಕಾಲ ದಾಳಿ ನಡೆಸಿದ್ದರು. ಅಷ್ಟೇ ಅಲ್ಲದೆ, ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಹಾಗೂ ಪುತ್ರ ರಾಹುಲ್ ಅವರಿಗೆ ಸಂಬಂಧಿಸಿದಂತಹ ಸ್ಥಳಗಳ ಮೇಲೂ ದಾಳಿ ನಡೆಸಿದ್ದರು.

ಈ ದಾಳಿಯನ್ನು ರಾಜಕೀಯ ಪ್ರೇರಿತ ಎಂದು ಕಾಂಗ್ರೆಸ್ ಟೀಕಿಸಿದೆ. ನಿನ್ನೆ ರಾತ್ರಿ ಕೆಪಿಸಿಸಿ ಅಧ್ಯಕ್ಷರಾದ ಬಿಕೆ ಹರಿಪ್ರಸಾದ್, ಸಚಿವರು ಮತ್ತು ಇತರ ನಾಯಕರು ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ಸತೀಶ್ ಜಾರಕಿಹೊಳಿ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ. ಈ ನಡುವೆ ಸಿಎಂ ಡಿಕೆ ಶಿವಕುಮಾರ್ ಅವರು ಸಹ ನಿನ್ನೆ ತಡರಾತ್ರಿ ಸತೀಶ್ ಜಾರಕಿಹೊಳಿ ನಿವಾಸಕ್ಕೆ ಭೇಟಿ ನೀಡಿ ಅಭಯ ನೀಡಿದ್ದಾರೆ.

ಕುತೂಹಲ ಕೆರಳಿಸಿದ ತಡ ರಾತ್ರಿ ಭೇಟಿ

ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಇಡಿ ದಾಳಿ ನಡೆಸಿ ದೊಡ್ಡ ಪ್ರಮಾಣದ ಹಣವನ್ನು ಸೀಜ್ ಮಾಡಿದೆ. ಅಲ್ಲದೆ, ಕೆಲವೊಂದು ಮಹತ್ವದ ದಾಖಲೆಗಳನ್ನು ಸಂಗ್ರಹ ಮಾಡಿದೆ. ಇಡಿ ದಾಳಿ ಮುಕ್ತಾಯಗೊಂಡ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಸೇರಿದಂತೆ ಹಿರಿಯ ಸಚಿವರು, ಶಾಸಕರು ಜಾರಕಿಹೊಳಿ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿ ಧೈರ್ಯ ತುಂಬಿದ್ದಾರೆ. ಬಳಿಕ ಸ್ವತಃ ಡಿಕೆ ಶಿವಕುಮಾರ್ ಅವರು ತಡ ರಾತ್ರಿ ಒಂದು ಗಂಟೆ ಸುಮಾರಿಗೆ ಸತೀಶ್ ಮನೆಗೆ ಭೇಟಿ ನೀಡಿದ್ದಾರೆ. ಜಾರಕಿಹೊಳಿ ಅವರ ಸರ್ಕಾರಿ ನಿವಾಸಕ್ಕೆ ಆಗಮಿಸಿದ ಡಿಕೆಶಿ ಸುಮಾರು ಒಂದು ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಇಡಿ ದಾಳಿಯ ವಿಚಾರವಾಗಿ ಚರ್ಚೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

BRICS Business Forum 2026: ಭಾರತದ ಮಾರುಕಟ್ಟೆ ಬೃಹತ್, ವೇಗವಾಗಿ ಬೆಳೆಯುತ್ತಿದೆ; ಬಲಿಷ್ಠ ಆರ್ಥಿಕ ಸಹಭಾಗಿತ್ವಕ್ಕೆ ಸೂಕ್ತ ರಾಷ್ಟ್ರ: ವಿದೇಶಾಂಗ ಸಚಿವ ಜೈಶಂಕರ್

ಭಾರತ–ಚೀನಾ ಸಂಬಂಧ; ಭೂಮಿಯ ಲೋಹಗಳು, ವೀಸಾ, ಹೂಡಿಕೆ; ಕ್ಸಿ-ಜಿನ್ ಪಿಂಗ್-ಪ್ರಧಾನಿ ಮೋದಿ ಮಾತುಕತೆ ಅಜೆಂಡಾ ಏನು?

BRICS ಶೃಂಗಸಭೆ: ದೆಹಲಿಗೆ ಆಗಮಿಸಿದ Vladimir Putin; ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಮಾತುಕತೆ, ಭಾರತ-ರಷ್ಯಾ ಸ್ನೇಹಕ್ಕೆ ಮತ್ತಷ್ಟು ಬಲ..!

'Brand Bengaluru'ಯೋಜನೆಗೆ ಬಿಗ್ ಬೂಸ್ಟ್: ಸಿಲಿಕಾನ್ ಸಿಟಿ ಟ್ರಾಫಿಕ್ ಕಿರಿಕಿರಿಗೆ ಮುಕ್ತಿ ನೀಡಲು GBA ಮಾಸ್ಟರ್ ಪ್ಲ್ಯಾನ್!

ಮಧು ಬಂಗಾರಪ್ಪ ದಿನಕ್ಕೊಂದು ಶೂ ಹಾಕ್ತಾರೆ, ಶಾಲಾ ಮಕ್ಕಳಿಗೆ ಕಿತ್ತೋಗಿರೋ ಶೂ ಕೊಡ್ತಾರೆ; ಚಿಂದಿ ಆಯುವವರು ಕೂಡ ಅದನ್ನು ತಗೊಳ್ಳಲ್ಲ- ಶ್ರೀರಾಮುಲು