ಹೆಚ್.ಸಿ. ಬಾಲಕೃಷ್ಣ, ನಿಖಿಲ್ ಕುಮಾರಸ್ವಾಮಿ ಸಾಂದರ್ಭಿಕ ಚಿತ್ರ 
ರಾಜಕೀಯ

ದೇವೇಗೌಡರ ಕುಟುಂಬ ನಿಂದಿಸಿದ್ದಕ್ಕಾಗಿ 'ಕಾಂಟ್ರಾಕ್ಟ್' ರೂಪದಲ್ಲಿ ಬಾಲಕೃಷ್ಣಗೆ ಸಚಿವ ಸ್ಥಾನ: ನಿಖಿಲ್ ಕುಮಾರಸ್ವಾಮಿ

ಹೆಚ್. ಸಿ. ಬಾಲಕೃಷ್ಣ ಸಚಿವ ಸ್ಥಾನ ಸಿಕ್ಕಾಗ ಜನಸೇವೆ ಮಾಡುವುದನ್ನು ಬಿಟ್ಟು ಮತ್ತೆ ದೇವೇಗೌಡರ ಕುಟುಂಬದ ವಿರುದ್ಧ ಮಾತನಾಡುತ್ತಿದ್ದಾರೆ. ಜನ ಇದನ್ನು ಸಹಿಸುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು

ಮಾಲೂರು: ದೇವೇಗೌಡರ ಕುಟುಂಬವನ್ನು ಅತಿಯಾಗಿ ನಿಂದಿಸಿದ್ದಕ್ಕಾಗಿಯೇ ಮಾಗಡಿ ಶಾಸಕ ಹೆಚ್. ಸಿ. ಬಾಲಕೃಷ್ಣ ಅವರಿಗೆ ಕಾಂಟ್ರಾಕ್ಟ್ ರೂಪದಲ್ಲಿ ಸಚಿವ ಸ್ಥಾನ ನೀಡಲಾಗಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಶನಿವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್. ಸಿ. ಬಾಲಕೃಷ್ಣ ಸಚಿವ ಸ್ಥಾನ ಸಿಕ್ಕಾಗ ಜನಸೇವೆ ಮಾಡುವುದನ್ನು ಬಿಟ್ಟು ಮತ್ತೆ ದೇವೇಗೌಡರ ಕುಟುಂಬದ ವಿರುದ್ಧ ಮಾತನಾಡುತ್ತಿದ್ದಾರೆ. ಜನ ಇದನ್ನು ಸಹಿಸುವುದಿಲ್ಲ. ರಾಜಕೀಯ ನಿಂದನೆ ಬಿಟ್ಟು ಕೆಲಸ ಮತ್ತು ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆ ಮಾಡಲಿ ಎಂದರು.

ಇನ್ನು ನೈಸ್ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ಪ್ರತಿಕ್ರಿಯಿಸಿದ ನಿಖಿಲ್ ಕುಮಾರಸ್ವಾಮಿ, ಈ ಯೋಜನೆಯಿಂದಾಗಿ ರೈತರಿಗೆ ದೊಡ್ಡ ಮಟ್ಟದ ಅನ್ಯಾಯವಾಗಿದೆ. ವಾರದಲ್ಲಿ ಇದನ್ನು ಬಹಿರಂಗ ಮಾಡುತ್ತೇವೆ. ರೈತರಿಗೆ ನ್ಯಾಯ ಕೊಡಿಸಲು ನಿರಂತರ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.

ಕೈಗಾರಿಕೆಗಳ ಸ್ಥಾಪನೆ ವಿಚಾರದಲ್ಲಿ ರಾಜ್ಯ ಸರ್ಕಾರ ಕೇಂದ್ರ ಬೃಹತ್ ಕೈಗಾರಿಕೆ ಸಚಿವೆ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಭೂಮಿ, ವಿದ್ಯುತ್ , ನೀರು ಮತ್ತಿತರ ಮೂಲಸೌಕರ್ಯ ಒದಗಿಸುವ ವಿಚಾರದಲ್ಲಿ ಅಸಹಕಾರ ತೋರುತ್ತಾ, ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಂಗಾಳ Bypoll, ಕ್ಷಣಕ್ಕೊಂದು ತಿರುವು: ನಾಮಪತ್ರ ಹಿಂತೆಗೆತ ಘೋಷಿಸಿದ್ದ ರೆಜಿನಗರ್ ಟಿಎಂಸಿ ಅಭ್ಯರ್ಥಿ ಆಲಂ ಚೌಧರಿ ಯು-ಟರ್ನ್!

'ಪುರುಷರಿಗೂ ಪಿರಿಯಡ್ಸ್ ಆಗಲಿ ಎಂದು ಸಾವಿರ ಬಾರಿ ಪ್ರಾರ್ಥಿಸಿದ್ದೇನೆ': ರಶ್ಮಿಕಾ ನಂತರ ನಟಿ ಶ್ರುತಿ ಹಾಸನ್ ಬೋಲ್ಡ್ ಮಾತು!

ಟೂರಿಂಗ್ ಟಾಕೀಸ್ ಟೀಕೆ: ಕಾಮಾಲೆ ಕಣ್ಣಿಗೆ ಕಾಣೋದೆಲ್ಲ ಹಳದಿ; ಅಶೋಕಣ್ಣ ಲೇಜಿ, ಯೂಸ್ ಲೆಸ್ ಸ್ಟಾರ್! ಸಚಿವ ಹೆಚ್. ಸಿ. ಬಾಲಕೃಷ್ಣ ತಿರುಗೇಟು

ಕರಾವಳಿ-ಮಲೆನಾಡು ಪ್ರವಾಸೋದ್ಯಮಕ್ಕೆ ಬಂಪರ್: 500 ಕೋಟಿ ರೂ ಅನುದಾನ; ಹೂಡಿಕೆದಾರರಿಗೆ ರೆಡ್ ಕಾರ್ಪೆಟ್

Deepika Padukone-ರಣವೀರ್ ಸಿಂಗ್ ದಂಪತಿಗೆ ಹೆಣ್ಣು ಮಗು ಜನನ; ಪೋಸ್ಟ್ ಮೂಲಕ ಸಂತಸ!