ಸಾಂದರ್ಭಿಕ ಚಿತ್ರ 
ಪದ್ಯ ಪರಿಷೆ

ಕವನ ಸುಂದರಿ: ಬಿ.ವಿ ಭಾರತಿ: ನೆನಪಿದೆಯಾ...

ಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ- ಕವನ ಸುಂದರಿ

ನೆನಪಿದೆಯಾ..

ಕತ್ತಲಾವರಿಸಿದ ಆ ಹೊತ್ತು
ಇಬ್ಬರೇ ಇದ್ದದ್ದು 
ಬರೀ ಆಕಾಶ ಹೊದ್ದದ್ದು
ನೆನಪಿದೆಯಾ ನಿನಗೆ?

 

ಹುಟ್ಟೆನ್ನುವುದು ಆದಿಯಾಗದ
ಸಾವೆನ್ನುವುದು ಅಂತ್ಯವೂ ಆಗದ
ಘಳಿಗೆಗಳ ಪರಾಗಸ್ಪರ್ಶ ಮಾಡುತ್ತಿದ್ದ
ನಿನ್ನೆದುರು ಮಂಡಿಯೂರಿ ನಾ ಬೊಗಸೆಯೊಡ್ಡಿದ್ದೆ

 

ರಾತ್ರಿಯೊಂದು ಉನ್ಮತ್ತವಾಗಲು
ಬೆಳದಿಂಗಳು, ತಂಗಾಳಿ 
ಏನೆಲ್ಲ ಇರಬೇಕೆನ್ನುವವರಿಗೆ
ನೀನೆಂಬ ನೀನು ಎಂದೂ ಎದುರಾಗಿರಲಿಕ್ಕಿಲ್ಲ

 

ಒಡ್ಡಿದ ಬೊಗಸೆಯಲ್ಲಿಟ್ಟ ಕ್ಷಣಗಳು
ಮಿಂಚು ಹುಳುಗಳಂತೆ ಹೊತ್ತಿ ಆರುತ್ತಿದ್ದವು,
ನಾನು-ನೀನು ಉರಿದು ಇಲ್ಲವಾದೆವು
ರಾತ್ರಿಯೊಂದು ಬೆಳಕಾಗಿತ್ತು ಹೀಗೆ ...




ಕವಯಿತ್ರಿ ಬಿ.ವಿ ಭಾರತಿ ಅವರು ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದವರು. ಬಿ.ಕಾಂ ಪದವೀಧರೆಯಾಗಿರುವ ಇವರಿಗೆ ಕವಿತೆ ರಚನೆ, ಅನುವಾದ, ಪ್ರವಾಸ ಹವ್ಯಾಸಗಳಾಗಿವೆ. ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿರುವ ಇವರು ಸಾಸಿವೆ ತಂದವಳು, ಮಿಸಳ್ ಭಾಜಿ, ಕಿಚನ್‌ ಕವಿತೆಗಳು, ಜಸ್ಟ್‌ ಮಾತ್‌ ಮಾತಲ್ಲಿ, ಆನು ನಿನ್ನ ಹಾಡಿದಲ್ಲದೆ ಸೈರಿಸಲಾರೆನಯ್ಯ ಇವರ ಪ್ರಮುಖ ಕೃತಿಗಳು. ಇವರ ಸಾಸಿವೆ ತಂದವಳು ಕೃತಿಗೆ ಶಿವಮೊಗ್ಗ ಕರ್ನಾಟಕ ಸಂಘದ ಎಂ ಕೆ ಇಂದಿರಾ ಪ್ರಶಸ್ತಿ ಹಾಗೂ ಮಿಸಾಳ್ ಬಾಜಿ ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT