ಸಾಂದರ್ಭಿಕ ಚಿತ್ರ 
ಪದ್ಯ ಪರಿಷೆ

ಕವನ ಸುಂದರಿ: ನಾಗರೇಖಾ ಗಾಂವಕರ: ನಗುವನ್ನು ಹರಾಜಿಗಿಡಲಾಗಿದೆ

ಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ, ಕವನ ಸುಂದರಿ 


ನಗುವನ್ನು ಹರಾಜಿಗಿಡಲಾಗಿದೆ

ಈ ನಗರದಲ್ಲಿ ನಗುವನ್ನೂ ಹರಾಜಿಗೆ ಇಡುತ್ತಾರೆ
ಅದು ಸೂಸುವ ಕಂಪಿಗೂ
ಬಲೆ ನಿಗದಿ ಇದೆ.

 

ನಸುಗೆಂಪು ಕೆನ್ನೆಗಳ ಕಿರು ಮಂದಹಾಸ
ಕಾವಿಗೆ ಒಡೆಯುತ್ತವೆ ಮೊಟ್ಟೆಗಳು
ಸ್ಮೈಲ್ ಬಿಗ್ ಆಫರ್‌ಗಳಲ್ಲಿ
ಸೆಲ್ ಮೋರ್ ಎನ್ನುತ್ತವೆ..

 

ನಗುವಿನ ನಸೀಬು
ನಕ್ಕವಳ ನಸೀಬು ಎರಡೂ ಬದಲಾಗುವುದು
ಯಾರದೋ ಬೆರಳಿಗೆ ಮೀಟಿದ ತಂತಿ
ಚಡಪಡಿಸಿದಾಗ.
ಆ ನಗುವಲ್ಲಿ ಗಾಳಿ
ಮಳೆ, ಕೆಲವೊಮ್ಮೆ ಬೆಂಕಿಗಳು
ಅರಳಲೂಬಹುದು
ಇಲ್ಲ... ಬೆಳಕು
ಬೆಳದಿಂಗಳು ನಾಟ್ಯವಾಡಬಹುದು.

 

ಗೋಡೆಯಲ್ಲಿ ತೂಗುಬಿದ್ದ
ದರ್ಪಣ ಸುಂದರಿಯ ತುಟಿಯಂಚಲ್ಲಿ
ಟ್ರೈಫೋಲ್ಡ್ ಕನ್ನಡಿಗಳಲ್ಲಿ
ಪ್ರತಿಫಲಿಸಲೂಬಹುದು

 

ಯಾರೂ ಬೇಕಾದರೂ
ಕೊಂಡುಕೊಳ್ಳಬಹುದಂತೆ..

 

ಸಣ್ಣಗೆ ಉರಿಯುವ ಪೆಟ್ರೊಮ್ಯಾಕ್ಸ್
ಪಕ್ಕದಲ್ಲಿ ನಿಂತ ಸ್ಮಿತವದನೆ
ಮೊಗದ ದುಮ್ಮಾನ
ಸೆಲ್ ಮೋರ್ ಬರಹಗಳ ಹೊತ್ತ
ಗ್ಲೋಸಿ ಫ್ಲಾಯರ್‌ಗಳಲ್ಲಿ ಹುದುಗಿದಂತೆ.

 

ಬಾರ್ಗೆನು ಮಾಡುವುದು ಮರ್ಯಾದೆಯ
ಪ್ರಶ್ನೆ ಇಲ್ಲಿ !!
ನಾಜೂಕು ಹವಳದ ತುಟಿಗಳಲ್ಲಿ
ನಗು ತುಂಬಿಕೊಂಡ
ಯವನಿಕೆಯರು ನಿಮ್ಮನ್ನೆ ನೋಡುತ್ತಾರೆ..

 

ನೀವಿಲ್ಲಿ ನಗುವಿನ
ಹರಾಜಿನಲ್ಲಿ ಏನೂ ಬೇಕಾದರೂ ಕೊಳ್ಳಬಹುದು.
ಕಿಸೆಯಲ್ಲಿ ಹಣವಿರುವ ತನಕ
ಹರಾಜು ಮುಗಿದ ಮೇಲೆ ಈ
ನಗುವನ್ನು ದರ್ಪಣದಲ್ಲಿ ಬಂಧಿಸಿಡಲಾಗುತ್ತದೆ 

 



ಕವಯಿತ್ರಿ, ಕತೆಗಾರ್ತಿ ನಾಗರೇಖಾ ಗಾಂವಕರ ಅವರು ಮೂಲತಃ ಉತ್ತರ ಕನ್ನಡದವರು. ಕನ್ನಡ ಹಾಗೂ ಇಂಗ್ಲೀಷ್‌ ಸ್ನಾತಕೋತ್ತರ ಪದವೀಧರೆಯಾದ ಇವರು ಪ್ರಸ್ತುತ ದಾಂಡೇಲಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ‘ಏಣಿ’ ಕವನ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ಶಾರದಾ ರಾಮಲಿಂಗಪ್ಪ ದತ್ತಿ ಪ್ರಶಸ್ತಿ, ಬರ್ಫದ ಬೆಂಕಿ ಸಂಕಲನಕ್ಕೆ ಬೆಟಗೇರಿ ಕೃಷ್ಣಶರ್ಮ ಯುವ ಕಾವ್ಯ ಪ್ರಶಸ್ತಿ ಲಭಿಸಿದೆ. ಆಕಾಶವಾಣಿ ಧಾರವಾಡ, ಕಾರವಾರಗಳಲ್ಲಿ ಚಿಂತನ ಕಾರ್ಯಕ್ರಮಗಳಲ್ಲಿ ಕತಾವಾಚನ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಹೆಗ್ಗಳಿಕೆ ಅವರದು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT