ಕಲೆ 
ಪದ್ಯ ಪರಿಷೆ

ಕವನ ಸುಂದರಿ: ಎಸ್. ನಾಗಶ್ರೀ: ಬಿಕ್ಕು

ಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ- ಕವನ ಸುಂದರಿ 


ಬಿಕ್ಕು

ರಸ್ತೆಯಲಿ ಒಬ್ಬಳೇ ನಡೆವಾಗ
ನೆನಪಾದ ತಮಾಷೆ
ತುಟಿಗೆ ಅಗುಳು ಮೆತ್ತಿದಂತೆ
ಕಸಿವಿಸಿಯಲಿ ಕೊಡವಿ
ಯಾರೆಂದೋ ತೋರಿ ಕೈಬೀಸಿ
ಹತ್ತಿರಾದರೆ, ಅಪರಿಚಿತ ಹುಡುಗ 
ಸುತ್ತ ಗಮನಿಸುವ ಕಣ್ಣುಗಳು
ಜನಜಂಗುಳಿಯ ಮಧ್ಯೆಯೇ
ತೀರಾ ಒತ್ತರಿಸಿ ಬಂದ ಅಳು
ಕಡಿಮೆ ಬಿದ್ದ ಟಿಕೇಟು ಕಾಸು
ಎಡವಿದಾಗ ಹರಿದ ಅಂಗಿ
ಸದಾ ಮೇಲಾಟ ತೋರಿದವರ 
ಅಣಕು ನೋಟ
ಕಿತ್ತ ಉಂಗುಷ್ಟದ ತೇಪೆ ಚಪ್ಪಲಿ
ಜಾತ್ರೆಯಂತಹ ಮದುವೆಗೆ 
ತಪ್ಪು ಅಂದಾಜಿನಲಿ ತೊಟ್ಟ ಸಾದಾ ಅರಿವೆ
ನಿಶ್ಯಬ್ದ ಕೋಣೆಯಲಿ ಶಮನವಾಗದ ಬಿಕ್ಕಳಿಕೆ
ಮುಜುಗರಕ್ಕೆ ಮುಗಿಲಷ್ಟು ಹರಹು

 

ಚಳಿಯಲಿ ಮುದುರಿ
ಮರೆಯಲಾಗದೆ ಉಗುರು ಕಡಿದು ಕಡಿದು
ನೋವು ಒತ್ತರಿಸಿದ ಬೆರಳು
ಅರ್ಧರಾತ್ರಿಯಲಿ ಆರ್ತನಾದ
ಮೂಕವಾದ ಜೀವಗಳು
ಒಳಗೆ ನರಳುವುದು ಇಂತದ್ದೇ
ನೆನಪುಗಳ ಜೊತೆಗೆ
ಬರಿದೇ ಮಾತುಗಳಲಿ
ಸೂಕ್ಷ್ಮ ನಟಿಸುವುದು ಬೇರೆ
ಇಲ್ಲಿ ಹಗಲಿನ ಗಾಯಗಳಿಗೆ
ಕಣ್ಣೀರಿನ ಉಪ್ಪು ಮಾಯಿಸುವ
ಸೂಕ್ಷ್ಮಗಳೇ ಬೇರೆ 



ಕವಯಿತ್ರಿ ಎಸ್. ನಾಗಶ್ರೀ ಮೂಲತಃ ಮೈಸೂರಿನವರು. ಈಗ ಬೆಂಗಳೂರಿನಲ್ಲಿ ವಾಸ. ಓದಿದ್ದು ICWA ಆದರೂ ಪ್ರವೃತ್ತಿ ಸಾಹಿತ್ಯವನ್ನೇ ಪ್ರೀತಿಸುವ ಮನೋಭಾವವುಳ್ಳವರು. ಬರವಣಿಗೆಯಲ್ಲಿ ತೊಡಗಿಕೊಂಡಿರುವ ಇವರ ಕಥೆಗಳು, ಕವನಗಳು ಪತ್ರಿಕೆಗಳಲ್ಲಿ, ನಿಯತಕಾಲಿಕೆಗಳಲ್ಲಿ ಪ್ರಕಟಗೊಳ್ಳುತ್ತಿರುತ್ತವೆ. ಕಾರ್ಯಕ್ರಮ ನಿರೂಪಣೆಯಲ್ಲೂ ಹೆಸರು ಮಾಡಿರುವ ನಾಗಶ್ರೀ ಬೆಂಗಳೂರು ಆಕಾಶವಾಣಿಯಲ್ಲಿ ರೇಡಿಯೊ ಕಾರ್ಯಕ್ರಮ ನಡೆಸಿಕೊಡುತ್ತಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT