ಕಲೆ 
ಪದ್ಯ ಪರಿಷೆ

ಕವನ ಸುಂದರಿ: ಎಸ್. ನಾಗಶ್ರೀ: ಬಿಕ್ಕು

ಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ- ಕವನ ಸುಂದರಿ 


ಬಿಕ್ಕು

ರಸ್ತೆಯಲಿ ಒಬ್ಬಳೇ ನಡೆವಾಗ
ನೆನಪಾದ ತಮಾಷೆ
ತುಟಿಗೆ ಅಗುಳು ಮೆತ್ತಿದಂತೆ
ಕಸಿವಿಸಿಯಲಿ ಕೊಡವಿ
ಯಾರೆಂದೋ ತೋರಿ ಕೈಬೀಸಿ
ಹತ್ತಿರಾದರೆ, ಅಪರಿಚಿತ ಹುಡುಗ 
ಸುತ್ತ ಗಮನಿಸುವ ಕಣ್ಣುಗಳು
ಜನಜಂಗುಳಿಯ ಮಧ್ಯೆಯೇ
ತೀರಾ ಒತ್ತರಿಸಿ ಬಂದ ಅಳು
ಕಡಿಮೆ ಬಿದ್ದ ಟಿಕೇಟು ಕಾಸು
ಎಡವಿದಾಗ ಹರಿದ ಅಂಗಿ
ಸದಾ ಮೇಲಾಟ ತೋರಿದವರ 
ಅಣಕು ನೋಟ
ಕಿತ್ತ ಉಂಗುಷ್ಟದ ತೇಪೆ ಚಪ್ಪಲಿ
ಜಾತ್ರೆಯಂತಹ ಮದುವೆಗೆ 
ತಪ್ಪು ಅಂದಾಜಿನಲಿ ತೊಟ್ಟ ಸಾದಾ ಅರಿವೆ
ನಿಶ್ಯಬ್ದ ಕೋಣೆಯಲಿ ಶಮನವಾಗದ ಬಿಕ್ಕಳಿಕೆ
ಮುಜುಗರಕ್ಕೆ ಮುಗಿಲಷ್ಟು ಹರಹು

 

ಚಳಿಯಲಿ ಮುದುರಿ
ಮರೆಯಲಾಗದೆ ಉಗುರು ಕಡಿದು ಕಡಿದು
ನೋವು ಒತ್ತರಿಸಿದ ಬೆರಳು
ಅರ್ಧರಾತ್ರಿಯಲಿ ಆರ್ತನಾದ
ಮೂಕವಾದ ಜೀವಗಳು
ಒಳಗೆ ನರಳುವುದು ಇಂತದ್ದೇ
ನೆನಪುಗಳ ಜೊತೆಗೆ
ಬರಿದೇ ಮಾತುಗಳಲಿ
ಸೂಕ್ಷ್ಮ ನಟಿಸುವುದು ಬೇರೆ
ಇಲ್ಲಿ ಹಗಲಿನ ಗಾಯಗಳಿಗೆ
ಕಣ್ಣೀರಿನ ಉಪ್ಪು ಮಾಯಿಸುವ
ಸೂಕ್ಷ್ಮಗಳೇ ಬೇರೆ 



ಕವಯಿತ್ರಿ ಎಸ್. ನಾಗಶ್ರೀ ಮೂಲತಃ ಮೈಸೂರಿನವರು. ಈಗ ಬೆಂಗಳೂರಿನಲ್ಲಿ ವಾಸ. ಓದಿದ್ದು ICWA ಆದರೂ ಪ್ರವೃತ್ತಿ ಸಾಹಿತ್ಯವನ್ನೇ ಪ್ರೀತಿಸುವ ಮನೋಭಾವವುಳ್ಳವರು. ಬರವಣಿಗೆಯಲ್ಲಿ ತೊಡಗಿಕೊಂಡಿರುವ ಇವರ ಕಥೆಗಳು, ಕವನಗಳು ಪತ್ರಿಕೆಗಳಲ್ಲಿ, ನಿಯತಕಾಲಿಕೆಗಳಲ್ಲಿ ಪ್ರಕಟಗೊಳ್ಳುತ್ತಿರುತ್ತವೆ. ಕಾರ್ಯಕ್ರಮ ನಿರೂಪಣೆಯಲ್ಲೂ ಹೆಸರು ಮಾಡಿರುವ ನಾಗಶ್ರೀ ಬೆಂಗಳೂರು ಆಕಾಶವಾಣಿಯಲ್ಲಿ ರೇಡಿಯೊ ಕಾರ್ಯಕ್ರಮ ನಡೆಸಿಕೊಡುತ್ತಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

SCROLL FOR NEXT