ಕಲೆ 
ಪದ್ಯ ಪರಿಷೆ

ಕವನ ಸುಂದರಿ: ತೇಜಶ್ರೀ: ಚಿಟ್ಟೆಗಳನರಳಿಸಿತು ಹೂಬಳ್ಳಿ

ಭಾರತ, ಭುವನ ಸುಂದರಿ ಮುಕುಟ ತೊಟ್ಟು ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ, ಹೆಣ್ಣಿನ ಅಂದಚಂದವಲ್ಲದೆ ಅವಳ ಅಂತರಂಗ ದೈವವನ್ನೂ ಗುರುತಿಸುವ, ಗೌರವಿಸುವ ಪ್ರಯತ್ನ- ಕವನ ಸುಂದರಿ 


ಚಿಟ್ಟೆಗಳನರಳಿಸಿತು ಹೂಬಳ್ಳಿ

ಜೋತು ಬಿದ್ದ ಗೊಂಚಲು
ಹೂಗೊಂಚಲೊಳಗೆ ದುಂಬಿಗಳೆಲ್ಲ
ತುಂಬಿ ಹಾಡುತ್ತ

 

ಸಂಗೀತ ಕೇಳಿ
ಆರೋಹಣ ಅವರೋಹಣದ ಆಲಾಪ!
ಎಷ್ಟು ಕಾಲದ ರಿಯಾಜು ಇದು
ಇಷ್ಟೆಲ್ಲ ರಾಗಗಳ ಮೈದುಂಬಿಕೊಂಡು

 

ನಿಡಿನಿಡಿದು ಕೈಯಿ ಮೈಯಿ ಚಾಚುತ್ತ
ಮುನ್‌ಮುಂದಕ್ಕೆ ಬಳ್ಳಿ ಲೋಕ ಮುಟ್ಟುವ ಪರಿಯೇನು!
ಎಲೆ ಎಲೆ! ಪಚ್ಚೆ ಎಸಳು ಬಿರಿದು ಹಿಗ್ಗುವುದೇನು!
ಪುಷ್ಪವತಿಯೇ ಹುಲುಸೇನು!

 

ತುಂತುಂ ತುಂಬಿ ಹೂಗಳ ತುಂಬಿ
ಮುಖವೊಡ್ಡಿ ಪುಷ್ಪರಸವ ಈಡಾಡಿ
ಹೊಸಸೃಷ್ಟಿಯ ಹೊತ್ತು ಹಾರುವುದೇನು!

 

ಚಿಟ್ಟೆದುಂಬಿಭ್ರಮರಗಳ ಅರಳಿಸಿದ ಹೂಬಳ್ಳಿಯೇ
ನೋಡು
ನೀನೇ ಅರಳಿಸಿರುವ ಈ ಕವಿತೆಯನ್ನೂ.

 



ಎಂ.ಎ.(ಇಂಗ್ಲಿಷ್) ಮತ್ತು ಭಾಷಾಂತರ ಡಿಪ್ಲೊಮಾ ಪದವೀಧರೆ ಆಗಿರುವ ಕವಯಿತ್ರಿ ತೇಜಶ್ರೀ ಅವರು ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಒಂದು ವರ್ಷ ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯದ 'ಟ್ಯಾಗೋರ್ ಪೀಠ'ದಲ್ಲಿ ಸಂಶೋಧನಾ ಸಹಾಯಕಿಯಾಗಿ ಕಾರ್ಯ ನಿರ್ವಹಿಸಿ‌ರುವ ಶ್ರೇಯ ಅವರದು. ಲಯ, ತಿಳಿಗೊಳ, ಕತ್ತಲೆಯ ಬೆಳಗು, ಅವನರಿವಲ್ಲಿ, ಉಸುಬುಂಡೆ, ಮಾಗಿಕಾಲದ ಸಾಲುಗಳು ಕವನ ಸಂಕಲನಗಳು, ಕವಿ ರವೀಂದ್ರ, ಬೆಟ್ಟದ ಮೇಲಿನ ಬೆಳಕು ಕೃತಿಗಳನ್ನು ಅವರು ಹೊರತಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT