ಸಂಗ್ರಹ ಚಿತ್ರ 
ವಿಜ್ಞಾನ-ತಂತ್ರಜ್ಞಾನ

ಸ್ಟಾರ್ಟ್‍ಅಪ್‍ಗೆ ನಾಸ್ಕಾಂ 10 ಅಂಶಗಳ ಕಾರ್ಯತಂತ್ರ

ಸ್ಟಾರ್ಟ್‍ಅಪ್ ಕ್ಷೇತ್ರದಲ್ಲಿ ಭಾರತ ವೇಗವಾಗಿ ಮುನ್ನಡೆಯುತ್ತಿದೆ. ಕಳೆದ ವರ್ಷ ವಿಶ್ವದಲ್ಲಿ ನಾಲ್ಕನೆ ಸ್ಥಾನದಲ್ಲಿದ್ದದು ಈ ವರ್ಷ 3ನೇ ಸ್ಥಾನಕ್ಕೆ ಏರಿದೆ...

ಬೆಂಗಳೂರು: ಸ್ಟಾರ್ಟ್‍ಅಪ್ ಕ್ಷೇತ್ರದಲ್ಲಿ ಭಾರತ ವೇಗವಾಗಿ ಮುನ್ನಡೆಯುತ್ತಿದೆ. ಕಳೆದ ವರ್ಷ ವಿಶ್ವದಲ್ಲಿ ನಾಲ್ಕನೆ ಸ್ಥಾನದಲ್ಲಿದ್ದದು ಈ ವರ್ಷ 3ನೇ ಸ್ಥಾನಕ್ಕೆ ಏರಿದೆ ಎಂದು ದೇಶದ ಸಾಫ್ಟ್ ವೇರ್  ಕಂಪನಿಗಳ ಒಕ್ಕೂಟ ನಾಸ್ಕಾಂ ಅಧ್ಯಕ್ಷ ಆರ್.ಚಂದ್ರಶೇಖರ್ ಹೇಳಿದರು.

ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಈ ವರ್ಷದಲ್ಲಿ ಭಾರತದಲ್ಲಿ ಇದುವರೆಗೂ ಸ್ಟಾರ್ಟ್‍ಅಪ್ ಗಳಲ್ಲಿ 500 ಕೋಟಿ ಡಾಲರ್ ಬಂಡವಾಳ ಹೂಡಿಕೆಯಾಗಿದೆ. ಈ  ಕಂಪನಿಗಳಲ್ಲಿ 80 ರಿಂದ 85 ಸಾವಿರ ಜನ ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು. ಹೆಚ್ಚು ಹೆಚ್ಚು ಜನ ಇಂಟರ್‍ನೆಟ್ ಸಂಪರ್ಕ ಪಡೆಯುತ್ತಿರುವುದರಿಂದ ತಂತ್ರಜ್ಞಾನ ಕ್ಷೇತ್ರದಲ್ಲಿ ಸ್ಟಾರ್ಟ್‍ಅಪ್  ಗಳು ಬೆಳೆಯಲು ಸಾಕಷ್ಟು ಅವಕಾಶಗಳಿವೆ ಎಂದ ಅವರು, ಸರ್ಕಾರದ ನೀತಿಗಳನ್ನು ಇದಕ್ಕೆ ಅನುಗುಣವಾಗಿ ರೂಪಿಸುವ ಅಗತ್ಯವಿದೆ ಎಂದರು.

ಸ್ಟಾರ್ಟ್‍ಅಪ್‍ಗಳಿಗೆ ಬಂಡವಾಳ ಕಲ್ಪಿಸುವುದು, ತೆರಿಗೆ ನೀತಿ, ಬ್ರಾಂಡ್ ಇಂಡಿಯಾ ಮಾಡುವುದು ಸೇರಿದಂತೆ ಹತ್ತು ಪ್ರಮುಖ ಅಂಶಗಳನ್ನು ಒಳಗೊಂಡ ಮನವಿಯನ್ನು ಕೇಂದ್ರ ಸರ್ಕಾರಕ್ಕೆ  ಸಲ್ಲಿಸಲಾಗುವುದು ಎಂದು ಚಂದ್ರಶೇಖರ್ ತಿಳಿಸಿದರು. ನಾಸ್ಕಾಂ ಪ್ರಾಡಕ್ಟ್ ಕೌನ್ಸಿಲ್ ಅಧ್ಯಕ್ಷರಾದ ರವಿ ಗುರುರಾಜ್ ಮಾತನಾಡಿ, ಭಾರತದಲ್ಲಿ ಸ್ಟಾರ್ಟ್‍ಅಪ್‍ಗಳ ಸ್ಥಾಪನೆ ಶೇ.123ರಷ್ಟು  ವೇಗದಲ್ಲಿ ಪ್ರಗತಿ ಕಾಣುತ್ತಿದೆ. 30 ವರ್ಷದೊಳಗಿನವರು ಹೆಚ್ಚಾಗಿ ಸಂಸ್ಥೆಗಳನ್ನು ಆರಂಭಿಸುತ್ತಿದ್ದಾರೆ ಎಂದು ತಿಳಿಸಿದರು. ಭಾರತದಲ್ಲಿ ಬೆಂಗಳೂರು, ಮುಂಬೈ ಮತ್ತು ನವದೆಹಲಿ  ಮುಂಚೂಣಿಯಲ್ಲಿದೆ.

ಪ್ರತಿದಿನ 3ರಿಂದ 4 ಸ್ಟಾರ್ಟ್‍ಅಪ್‍ಗಳನ್ನು ಆರಂಭಿಸಲಾಗುತ್ತಿದೆ ಎಂದ ಅವರು, ಪ್ರತಿ ವಾರ 95 ದಶಲಕ್ಷ ಡಾಲರ್ ಹೂಡಿಕೆಯಾಗುತ್ತಿದೆ ಎಂದು ತಿಳಿಸಿದರು. ನಾಸ್ಕಾಂನ ಪ್ರಾಡಕ್ಟ್ ಶೃಂಗಸಭೆ ಮೂರು ದಿನಗಳ ಕಾಲ ನಗರದ ಖಾಸಗಿ ಹೋಟೆಲ್‍ನಲ್ಲಿ ನಡೆಯುತ್ತಿದ್ದು ದೇಶ ಸೇರಿದಂತೆ ವಿದೇಶಿಗಳ ನೂರಾರು ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT