ಐಆರ್​ಎನ್​ಎಸ್​ಎಸ್ 1ಜಿ ಉಪಗ್ರಹ ಉಡಾವಣೆ (ಸಂಗ್ರಹ ಚಿತ್ರ) 
ವಿಜ್ಞಾನ-ತಂತ್ರಜ್ಞಾನ

ಐಆರ್​ಎನ್​ಎಸ್​ಎಸ್ 1ಜಿ ಉಪಗ್ರಹ ಉಡಾವಣೆ ಯಶಸ್ವಿ

ಭಾರತದ ಮೊಟ್ಟ ಮೊದಲ ಪ್ರಾದೇಶಿಕ ದಿಕ್ಸೂಚಿ ಉಪಗ್ರಹ ವ್ಯವಸ್ಥೆಯ 7ನೇ ಮತ್ತು ಅಂತಿಮ ಉಪಗ್ರಹ ಐಆರ್​ಎನ್​ಎಸ್​ಎಸ್-1ಜಿ ಯನ್ನು ಗುರುವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದ್ದು, ಉಪಗ್ರಹ ಯಶಸ್ವಿಯಾಗಿ ನಿಗದಿತ ಕಕ್ಷೆ ತಲುಪಿದೆ..

ಶ್ರೀಹರಿಕೋಟಾ: ಭಾರತದ ಮೊಟ್ಟ ಮೊದಲ ಪ್ರಾದೇಶಿಕ ದಿಕ್ಸೂಚಿ ಉಪಗ್ರಹ ವ್ಯವಸ್ಥೆಯ 7ನೇ ಮತ್ತು ಅಂತಿಮ ಉಪಗ್ರಹ ಐಆರ್​ಎನ್​ಎಸ್​ಎಸ್-1ಜಿ ಯನ್ನು ಗುರುವಾರ ಮಧ್ಯಾಹ್ನ  ಯಶಸ್ವಿಯಾಗಿ ಉಡಾವಣೆ ಮಾಡಲಾಗಿದ್ದು, ಉಪಗ್ರಹ ಯಶಸ್ವಿಯಾಗಿ ನಿಗದಿತ ಕಕ್ಷೆ ತಲುಪಿದೆ.

ಗುರುವಾರ ಮಧ್ಯಾಹ್ನ ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಅಂತರಿಕ್ಷ ಕೇಂದ್ರದಿಂದ ಇಸ್ರೋ ಸಂಸ್ಥೆ ಮಹತ್ವಾಕಾಂಕ್ಷಿ ಯೋಜನೆ ಐಆರ್​ಎನ್​ಎಸ್​ಎಸ್-1ಜಿ ಯನ್ನು  ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಸುಮಾರು 1,425 ಕೆ.ಜಿ. ತೂಕದ ಐಆರ್​ಎನ್​ಎಸ್​ಎಸ್-1ಜಿ ಉಪಗ್ರಹವನ್ನು ಪಿಎಸ್​ಎಲ್​ವಿ-ಸಿ33 ರಾಕೆಟ್ ಮೂಲಕವಾಗಿ ಯಶಸ್ವಿಯಾಗಿ  ಅಂತರಿಕ್ಷಕ್ಕೆ ರವಾನಿಸಲಾಗಿದೆ. ಅಂತೆಯೇ ಉಪಗ್ರಹ ಯಶಸ್ವಿಯಾಗಿ ಕಕ್ಷೆ ತಲುಪಿದ್ದು, ಇನ್ನು ಕೆಲವೇ ದಿನಗಳಲ್ಲಿ ತನ್ನ ಕಾರ್ಯಾರಂಭ ಮಾಡಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಪ್ರಸ್ತುತ ಉಡಾವಣೆಯಾಗಿರುವ ಐಆರ್​ಎನ್​ಎಸ್​ಎಸ್-1ಜಿ ಉಪಗ್ರಹ ಈಗಾಗಲೇ ಉಡಾಯಿಸಲಾಗಿರುವ ಐಆರ್​ಎನ್​ಎಸ್​ಎಸ್ 1ಎ, 1ಬಿ, 1ಸಿ, 1ಡಿ, 1ಇ ಮತ್ತು 1ಎಫ್  ಉಪಗ್ರಹಗಳೊಂದಿಗೆ ಕಾರ್ಯ ನಿರ್ವಹಿಸಲಿದ್ದು, ಭಾರತದಾದ್ಯಂತ ಪ್ರಾದೇಶಿಕ ಸಂಚಾರ ಮಾರ್ಗಸೂಚಿಗೆ ತಂತ್ರಜ್ಞಾನ ಸಹಕಾರವನ್ನು ನೀಡಲಿದೆ. ಈ ಹಿಂದೆ ಐಆರ್​ಎನ್​ಎಸ್​ಎಸ್ 1ಎ  ಉಪಗ್ರಹವನ್ನು 2013ರ ಜುಲೈ 1ರಂದು, 1ಬಿಯನ್ನು 2014ರ ಏಪ್ರಿಲ್ 4ರಂದು, 1ಸಿ ಉಪಗ್ರಹವನ್ನು 2014ರ ಅಕ್ಟೋಬರ್ 16 ರಂದು, 1 ಡಿ ಉಪಗ್ರಹವನ್ನು 2015ರ ಮಾರ್ಚ್ 28ರಂದು ಹಾಗೂ  1ಇ ಉಪಗ್ರಹವನ್ನು ಜನವರಿ 20ರಂದು ಮತ್ತು ಮಾರ್ಚ್ 10ರಂದು 1 ಎಫ್ ಉಪಗ್ರಹವನ್ನು ಯಶಸ್ವಿಯಾಗಿ ಉಡಾಯಿಸಲಾಗಿತ್ತು.

ಉಪಗ್ರಹ ಉಡಾವಣೆಗೆ ಸಾಕ್ಷಿಯಾದ ಪ್ರಧಾನಿ ಮೋದಿ
ಇನ್ನು ಇಸ್ರೋದ ಈ ಮಹತ್ವಾಕಾಂಕ್ಷಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಾಕ್ಷಿಯಾದರು. ಉಪಗ್ರಹ ಉಡಾವಣೆಯನ್ನು ವೀಕ್ಷಿಸಿ ಮೋದಿ ಯೋಜನೆಯ ಯಶಸ್ಸಿಗೆ  ಕಾರಣಕರ್ತರಾದ ಇಸ್ರೋದ ವಿಜ್ಞಾನಿಗಳನ್ನು ಅಭಿನಂದಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

SCROLL FOR NEXT