ಸ್ವದೇಶಿ ನಿರ್ಮಾಣದ ಪರೀಕ್ಷಾರ್ಥ ಉಡಾವಣೆಯನ್ನು ಸೋಮವಾರ ಯಶಸ್ವಿಯಾಗಿ ಪೂರೈಸಿದ ಭಾರತ(ಫೋಟೋ-ಡಿಆರ್ ಡಿಒ) 
ವಿಜ್ಞಾನ-ತಂತ್ರಜ್ಞಾನ

ಅಗ್ನಿ-1 ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ

ದೇಶೀಯ ನಿರ್ಮಿತ ಪರಮಾಣು ಸಾಮರ್ಥ್ಯದ ಅಗ್ನಿ-1 ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆಯನ್ನು ಸೋಮವಾರ ಒಡಿಶಾ ಕರಾವಳಿಯಲ್ಲಿ...

ಭುವನೇಶ್ವರ: ದೇಶೀಯ ನಿರ್ಮಿತ ಪರಮಾಣು ಸಾಮರ್ಥ್ಯದ ಅಗ್ನಿ-1 ಕ್ಷಿಪಣಿಯ ಪರೀಕ್ಷಾರ್ಥ ಉಡಾವಣೆಯನ್ನು ಸೋಮವಾರ ಒಡಿಶಾ ಕರಾವಳಿಯಲ್ಲಿ ಭಾರತ ಯಶಸ್ವಿಯಾಗಿ ಪೂರೈಸಿದೆ.

700 ಕಿಲೋ ಮೀಟರ್ ದೂರದಲ್ಲಿರುವ ಗುರಿಯನ್ನು ಹೊಡೆಯುವ ಸಾಮರ್ಥ್ಯವನ್ನು ಈ ಕ್ಷಿಪಣಿ ಹೊಂದಿದ್ದು, ಮೇಲ್ಮೈಯಿಂದ ಮೇಲ್ಮೈ ಕ್ಷಿಪಣಿಯನ್ನು ಇಂದು ಬೆಳಗ್ಗೆ 9.11ರ ವೇಳೆಗೆ ಭುವನೇಶ್ವರದಿಂದ 150 ಕಿಲೋ ಮೀಟರ್ ದೂರದಲ್ಲಿರುವ ಅಬ್ದುಲ್ ಕಲಾಂ ದ್ವೀಪದ ಆಂತರಿಕ ಪರೀಕ್ಷಾ ಶ್ರೇಣಿಯಲ್ಲಿರುವ ಲಾಂಚ್ ಪ್ಯಾಡ್ ನಿಂದ ಉಡಾಯಿಸಲಾಯಿತು.

ವ್ಯೂಹಾತ್ಮಕ ಪಡೆ ಕಮಾಂಡ್ ನ ತರಬೇತಿಯ ಭಾಗವಾಗಿ ಈ ಪರೀಕ್ಷಾರ್ಥ ಉಡಾವಣೆ ಕೈಗೊಳ್ಳಲಾಗಿದ್ದು, ಪ್ರಯೋಗ ಯಶಸ್ವಿಯಾಯಿತು ಎಂದು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ ಡಿಒ)ದ ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯಮ ಶ್ರೇಣಿಯ ಖಂಡಾಂತರ ಕ್ಷಿಪಣಿಯನ್ನು ಡಿಆರ್ ಡಿಒ ಅಭಿವೃದ್ಧಿಪಡಿಸಿದ್ದು, ಅಗ್ನಿ-1 ಕ್ಷಿಪಣಿಗೆ ಅತ್ಯಾಧುನಿಕ ಸಂಚರಣೆ ವ್ಯವಸ್ಥೆಯನ್ನು ಅಳವಡಿಸಿರಲಾಗುತ್ತದೆ. ಇದರ ಮೂಲಕ ನಿಖರತೆಯ ಒಂದು ಉನ್ನತ ಮಟ್ಟದ ಗುರಿ ತಲುಪುತ್ತದೆ.

ಈ ಕ್ಷಿಪಣಿಯು ಸಾವಿರ ಕೆ.ಜಿ ತೂಕದ ಪೇಲೋಡ್ ಅಥವಾ ಪರಮಾಣು ಸಿಡಿತಲೆಯನ್ನು ಹೊತ್ತೊಯ್ಯುವ ಸಾಮರ್ಥ್ಯ ಹೊಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT