ಪಿಎಸ್ಎಲ್ವಿ-ಸಿ37 
ವಿಜ್ಞಾನ-ತಂತ್ರಜ್ಞಾನ

ಏಕಕಾಲಕ್ಕೆ ಒಂದೇ ರಾಕೆಟ್ ನಿಂದ 103 ಉಪಗ್ರಹ ಉಡಾವಣೆಗೆ ಇಸ್ರೋ ಸಜ್ಜು

ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಮತ್ತೊಂದು ಐತಿಹಾಸಿಕ ಸಾಹಸಕ್ಕೆ ಸಜ್ಜಾಗಿದ್ದು, ಏಕಕಾಲಕ್ಕೆ 83 ಉಪಗ್ರಹ ಉಡಾವಣೆ ಬದಲಿಗೆ ಒಟ್ಟಾರೆ...

ಬೆಂಗಳೂರು: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ, ಇದೀಗ ಮತ್ತೊಂದು ಐತಿಹಾಸಿಕ ಸಾಹಸಕ್ಕೆ ಸಜ್ಜಾಗಿದ್ದು, ಏಕಕಾಲಕ್ಕೆ 83 ಉಪಗ್ರಹ ಉಡಾವಣೆ ಬದಲಿಗೆ ಒಂದೇ ರಾಕೆಟ್ ನಿಂದ 103 ಉಪಗ್ರಹ ಉಡಾವಣೆ ಮಾಡಲು ಸಿದ್ಧತೆ ನಡೆಸಿದೆ.

ಭಾರತದ ಅತ್ಯಂತ ಯಶಸ್ವೀ ಉಡಾವಣಾ ನೌಕೆ ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್(ಪಿಎಸ್‌ಎಲ್‌ವಿ)-ಸಿ37 ಉಡಾವಣಾ ವಾಹಕದಿಂದ 103 ಉಪಗ್ರಹಗಳ ಉಡಾವಣೆ ಮಾಡಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ)ಯ ಲಿಕ್ವಿಡ್ ಪ್ರೊಪಲ್ಷನ್ ಸಿಸ್ಟಮ್ಸ್ ಸೆಂಟರ್ ನಿರ್ದೇಶಕ ಎಸ್ ಸೋಮನಾಥ್ ಅವರು ಹೇಳಿದ್ದಾರೆ.

ಕಳೆದ ವಾರವಷ್ಟೇ ಇಸ್ರೋ ಏಕಕಾಲಕ್ಕೆ 83 ಉಪಗ್ರಹ ಉಡಾವಣೆ ಮಾಡುವ ಯೋಜನೆಯನ್ನು ಹಾಕಿಕೊಂಡಿತ್ತು. ಇದೀಗ 20 ಹೆಚ್ಚುವರಿ ಉಪಗ್ರಹಗಳು ಸೇರ್ಪಡೆಯಾಗಿರುವುದರಿಂದ ಜನವರಿ ಬದಲಿಗೆ ಫೆಬ್ರವರಿಯ ಮೊದಲ ವಾರದಲ್ಲಿ ಉಡಾವಣೆ ನಡೆಸಲಾಗುವುದು ಎಂದು ಸೋಮನಾಥ್ ತಿಳಿಸಿದ್ದಾರೆ.

ಇಸ್ರೇಲ್, ಕಜಕಿಸ್ತಾನ್, ನೆದರ್ಲ್ಯಾಂಡ್, ಸ್ವೀಜರ್ಲ್ಯಾಂಡ್ ಮತ್ತು ಅಮೆರಿಕ ಜರ್ಮನಿ ಸೇರಿದಂತೆ ಮೂರು ಸ್ವದೇಶಿ ಉಪಗ್ರಹಗಳಾದ ಕಾರ್ಟೋಸ್ಯಾಟ್-2 ಸಿರೀಸ್, 730 ಕೆಜಿ, ಐಎನ್ಎಸ್-1ಎ ಮತ್ತು ಐಎನ್ಎಸ್-1ಬಿ 30 ಕೆಜಿಯ ಉಪಗ್ರಹಗಳನ್ನು ಏಕಕಾಲಕ್ಕೆ ಇಸ್ರೋ ಉಡಾವಣೆ ಮಾಡಲಿದೆ.

ಈ ಹಿಂದೆ ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಏಕಕಾಲಕ್ಕೆ ಬರೋಬ್ಬರಿ 20 ಉಪಗ್ರಹಗಳನ್ನು ಉಡಾವಣೆ ಮಾಡಿ ಇತಿಹಾಸ ನಿರ್ಮಿಸಿತ್ತು.

ಇದರೊಂದಿಗೆ ಇಸ್ರೋ ಒಂದೇ ರಾಕೆಟ್‌ನಲ್ಲಿ ಅತಿ ಹೆಚ್ಚು ಉಪಗ್ರಹಗಳನ್ನು ಉಡಾಯಿಸಿದ ವಿಶ್ವದ 2ನೇ ರಾಷ್ಟ್ರ ಎಂಬ ಹೆಗ್ಗಳಿಕಿಗೆ ಪಾತ್ರವಾಗಿತ್ತು. ಇದೀಗ ಏಕಕಾಲದಲ್ಲಿ 103 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾಯಿಸಿದ್ದೆ ಆದರೆ ಏಕಕಾಲಕ್ಕೆ ಅತೀ ಹೆಚ್ಚು ಉಪಗ್ರಹಗಳನ್ನು ಉಡಾಯಿಸಿದ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಅಗ್ರಸ್ಥಾನಕ್ಕೇರಲಿದೆ.

ಈ ಹಿಂದೆ ಒಂದೇ ರಾಕೆಟ್‌ನಲ್ಲಿ ಅತಿ ಹೆಚ್ಚು ಸಂಖ್ಯೆಯ ಉಪಗ್ರಹಗಳ ಉಡಾವಣೆ ಮಾಡಿದ ದಾಖಲೆ ರಷ್ಯಾ ಹೆಸರಲ್ಲಿದ್ದು, ರಷ್ಯಾದ ಡ್ನೆಪರ್ ಸಿಲೋ ರಾಕೆಟ್ ಮೂಲಕ 2014ರ ಜೂನ್ 19  ರಂದು 33 ಉಪಗ್ರಹಗಳನ್ನು ಒಂದೇ ಬಾರಿ ಉಡಾವಣೆ ಮಾಡಲಾಗಿತ್ತು. ಇದಕ್ಕೂ ಮೊದಲು 2013ರ ನವೆಂಬರ್‌ನಲ್ಲಿ 32 ಉಪಗ್ರಹಗಳನ್ನು ಉಡಾವಣೆ ಮಾಡಿತ್ತು. ಇದರಲ್ಲಿ 5 ಕಿಲೋದಿಂದ  ಹಿಡಿದು 100 ಕಿಲೋಗ್ರಾಂವರೆಗೆ ತೂಕವಿರುವ ಉಪಗ್ರಹಗಳಿದ್ದವು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT