ಸಂಗ್ರಹ ಚಿತ್ರ 
ವಿಜ್ಞಾನ-ತಂತ್ರಜ್ಞಾನ

"ಸುಳ್ಳು ಸುದ್ದಿ" ತಡೆಯಲು ಫೇಸ್ ಬುಕ್ ನಿಂದ "ಜರ್ನಲಿಸಮ್ ಪ್ರಾಜೆಕ್ಟ್"!

ಸುದ್ದಿ ಸಂಸ್ಥೆಗಳ ನಡುವಿನ ಬಾಂಧವ್ಯ ವೃದ್ದಿಗಾಗಿ ಖ್ಯಾತ ಸಾಮಾಜಿಕ ಜಾಲತಾಣ ಫೇಸ್ ಬುಕ್ ಹೊಸ ಪತ್ರಿಕೋಧ್ಯಮ ಯೋಜನೆ (ಜರ್ನಲಿಸಮ್ ಪ್ರಾಜೆಕ್ಟ್) ಅನ್ನು ಬಿಡುಗಡೆ ಮಾಡಿದ್ದು, ಇದು ವ್ಯಾಪಕವಾಗಿ ಹಬ್ಬುವ ಸುಳ್ಳು ಸುದ್ದಿಗಳನ್ನು ತಡೆಯಲು ಸಹಕಾರಿಯಾಗಲಿದೆ ಎಂದು ಹೇಳಲಾಗುತ್ತಿದೆ.

ನವದೆಹಲಿ: ಸುದ್ದಿ ಸಂಸ್ಥೆಗಳ ನಡುವಿನ ಬಾಂಧವ್ಯ ವೃದ್ದಿಗಾಗಿ ಖ್ಯಾತ ಸಾಮಾಜಿಕ ಜಾಲತಾಣ ಫೇಸ್ ಬುಕ್ ಹೊಸ ಪತ್ರಿಕೋಧ್ಯಮ ಯೋಜನೆ (ಜರ್ನಲಿಸಮ್ ಪ್ರಾಜೆಕ್ಟ್) ಅನ್ನು ಬಿಡುಗಡೆ ಮಾಡಿದ್ದು, ಇದು ವ್ಯಾಪಕವಾಗಿ ಹಬ್ಬುವ  ಸುಳ್ಳು ಸುದ್ದಿಗಳನ್ನು ತಡೆಯಲು ಸಹಕಾರಿಯಾಗಲಿದೆ ಎಂದು ಹೇಳಲಾಗುತ್ತಿದೆ.

ವಿಶ್ವದ ಅತೀ ದೊಡ್ಡ ಸಾಮಾಜಿಕ ಜಾಲತಾಣವಾಗಿರುವ ಫೇಸ್ ಬುಕ್ ತನ್ನ ಮೂಲಕ ಸುಳ್ಳು ಮಾಹಿತಿ ಹರಡುವುದನ್ನು ತಡೆಗಟ್ಟಲು ಪತ್ರಿಕೋದ್ಯಮ ಪ್ರಾಜೆಕ್ಟ್ ಅನ್ನು ಬಿಡುಗಡೆ ಮಾಡಿದ್ದು, ಜಾಲತಾಣ ಮಾಹಿತಿ ವಿನಿಮಯ ಕುರಿತು  ಚರ್ಚಿಸುತ್ತದೆ. ಫೇಸ್ ಬುಕ್ ಹೇಳಿಕೊಂಡಿರುವಂತೆ ತನ್ನ ನೂತನ ಯೋಜನೆಯಲ್ಲಿ ಸುಳ್ಳು ಸುದ್ದಿಗಳನ್ನು ಕಂಡುಹಿಡಿಯಲು ಮತ್ತು ಅದನ್ನು ನ್ಯೂಸ್ ಫೀಡ್ ನಿಂದ ತೆಗೆದು ಹಾಕಲು ನೆರವಾಗಲಿದೆ ಎಂದು ಹೇಳಿಕೊಂಡಿದೆ.

ಫೇಸ್ ಬುಕ್ ಬಳಕೆದಾರರಿಗೆ ಪ್ರತಿನಿತ್ಯ ನೂರಾರು ಸುದ್ದಿಗಳು ಕಾಣಸಿಗುತ್ತವೆ. ಹೀಗೆ ಬರುವ ಬಹುತೇಕ ಸುದ್ದಿಗಳಲ್ಲಿ ಹಲವು ಸುದ್ದಿಗಳು ಸುಳ್ಳುಸುದ್ದಿಗಳಾಗಿರುತ್ತವೆ. ಇದು ಸುಳ್ಳು ಸುದ್ದಿ ಎಂದು ತಿಳಿದಾಗ ನಾವು ಸಾಮಾನ್ಯವಾಗಿ  ಇದು ಸುಳ್ಳು ಸುದ್ದಿ ಎಂದು ಕಮೆಂಟ್ ಮಾಡಿ ಅಥವಾ ಅದನ್ನು ನಮ್ಮ ವಾಲ್ ನಿಂದ ಡಿಲೀಟ್ ಮಾಡುತ್ತೇವೆ. ಇಲ್ಲವಾದರೆ ಅದರ ಬಗ್ಗೆ ಗಮನವೇ ಕೊಡದೇ ಅದನ್ನು ನಿರ್ಲಕ್ಷಿಸಿ ಮುಂದಿನ ಸುದ್ದಿಗಳಿಗೆ ತೆರಳುತ್ತೇವೆ. ಕೆಲ  ಖಾತೆದಾರರಿಗೆ ಇದು ಇರುಸು-ಮುರುಸು ತರುತ್ತದೆ. ಕೆಲವರು ಇದರ ಬಗ್ಗೆ ಚರ್ಚೆ ಮಾಡಿದರೆ ಮತ್ತೆ ಕೆಲವು ಸಮಯ ವ್ಯರ್ಥ ಎಂದು ಭಾವಿಸುತ್ತಾರೆ.

ಹೀಗಾಗಿ ಇಂತಹ ಸುಳ್ಳು ಸುದ್ದಿಗಳನ್ನು ನಿಯಂತ್ರಿಸುವ ಉದ್ದೇಶದಿಂದಲೇ ಫೇಸ್ ಬುಕ್ ನೂತನ ಜರ್ನಲಿಸಂ ಪ್ರಾಜೆಕ್ಟ್ ಅನ್ನು ಜಾರಿಗೆ ತಂದಿದ್ದು, ಈ ನೂತನ ವ್ಯವಸ್ಥೆಯಲ್ಲಿ ಹೆಚ್ಚು ಖಾತೆದಾರರು ಒಂದು ಸುದ್ದಿಯನ್ನು ಸುಳ್ಳು ಸುದ್ದಿ  ಎಂದು ನಿರ್ಧರಿಸಿದರೆ ಅದನ್ನು ಸುಳ್ಳು ಸುದ್ದಿ ಪಟ್ಟಿಗೆ ಸೇರಿಸಿ ಹೆಚ್ಚು ಪ್ರಚಾರವಾಗದಂತೆ ತಡೆಯಲಾಗುತ್ತದೆ. ಆ ಮೂಲಕ ಆ ಸುಳ್ಳು ಸುದ್ದಿ ಹೆಚ್ಚು ಜನ ಓದದಂತೆ ತಡೆಯುವ ವಿಶಿಷ್ಟ ಯೋಜನೆಯನ್ನು ಫೇಸ್ ಬುಕ್ ಜಾರಿ ತಂದಿದೆ.

ಇನ್ನು ಈ ಬಗ್ಗೆ ಮಾತನಾಡಿರುವ ಪ್ರಾಜೆಕ್ಟ್ ನಿರ್ದೇಶಕ ಫಿಡ್ಜಿ ಸಿಮೋ "ಆರೋಗ್ಯಕರ ಸ್ಪರ್ಧೆ ಏರ್ಪಡಲು ಹೊಸ ಕಾರ್ಯಕ್ರಮವನ್ನು ಪರಿಚಯಿಸುತ್ತಿದ್ದೇವೆ. ಇದಕ್ಕಾಗಿ ಸುದ್ದಿ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಿದ್ದೇವೆ ಎಂದು  ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮತ್ತೊಂದು ಗುಡ್ ನ್ಯೂಸ್: ಕದನ ವಿರಾಮದ ನಂತರ ಹಾರ್ಮುಜ್ ದಾಟಿದ ಎಲ್‌ಪಿಜಿ ಹೊತ್ತ ಭಾರತದ ಹಡಗು

5 ವರ್ಷದ ಬಾಲಕನ ಜೊತೆ ಅಸ್ವಾಭಾವಿಕ s*x; ವಸತಿ ಶಾಲೆ ವಿದ್ಯಾರ್ಥಿಯ ಗಂಟಲು ಸೀಳಿದ ಗಾರ್ಡ್!

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

SCROLL FOR NEXT