ಸಿಡಿಲಿನ ಮುನ್ಸೂಚನೆ ನೀಡಬಲ್ಲ ಮೊಬೈಲ್ ಆ್ಯಪ್ ಬಿಡುಗಡೆ 
ವಿಜ್ಞಾನ-ತಂತ್ರಜ್ಞಾನ

ಸಿಡಿಲಿನ ಮುನ್ಸೂಚನೆ ನೀಡಬಲ್ಲ ಮೊಬೈಲ್ ಆ್ಯಪ್ ಬಿಡುಗಡೆ

ಮಳೆಗಾಲದಲ್ಲಿ ಸಿಡಿಲಿನ ಆರ್ಭಟ ಸಾಮಾನ್ಯವಾಗಿರುತ್ತದೆ. ಇತ್ತೀಚೆಗೆ ರಾಜ್ಯದಲ್ಲಿ ಸಿಡಿಲಿಗೆ ಬಲಿಯಾಗುವವರ ಸಂಖ್ಯೆಯೂ ಹೆಚ್ಚುತ್ತಿದೆ.

ಬೆಂಗಳೂರು: ಮಳೆಗಾಲದಲ್ಲಿ ಸಿಡಿಲಿನ ಆರ್ಭಟ ಸಾಮಾನ್ಯವಾಗಿರುತ್ತದೆ. ಇತ್ತೀಚೆಗೆ ರಾಜ್ಯದಲ್ಲಿ ಸಿಡಿಲಿಗೆ ಬಲಿಯಾಗುವವರ ಸಂಖ್ಯೆಯೂ ಹೆಚ್ಚುತ್ತಿದೆ. ಇದಕ್ಕೆ ಉತ್ತರವೆನ್ನುವಂತೆ ಸಿಡಿಲು ಹಾಗೂ ಬಿಸಿ ಗಾಳಿಯ ಮುನ್ಸೂಚನೆಯನ್ನು ಪಡೆಯಬಹುದಾದಂತಹ ನೂತನ ಮೊಬೈಲ್ ಆ್ಯಪನ್ನು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬಿಡುಗಡೆ ಮಾಡಿದೆ.
ಮಳೆಯ ಮುನ್ಸೂಚನೆ ತಿಳಿದುಕೊಳ್ಳುವಂತೆಯೇ ಇದನ್ನು ಬಳಸಿ ಇನ್ನು ಸಿಡಿಲಿನ ಮುನ್ಸೂಚನೆಯನ್ನೂ ತಿಳಿಯಬಹುದಾಗಿದೆ. ಹೀಗೆ ಮುಂಚಿತವಾಗಿ ಅಪಾಯದ ಬಗ್ಗೆ ತಿಳಿದು ಮುನ್ನೆಚ್ಚರಿಕೆ ವಹಿಸಲು ಸಹಕಾರಿಯಾಗುವಂತೆ ಆ್ಯಪನ್ನು ರಚಿಸಲಾಗಿದೆ.
ಸಿಡಿಲಿನಿಂದುಟಾಗುವ ಸಾವನ್ನು ತಪ್ಪಿಸುವಲ್ಲಿ ಇದು ಪ್ರಮುಖವಾಗಿ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗಿದೆ.
ಇದುವರೆಗೆ ಮುಂಗಾರು, ಹಿಂಗಾರಿನ ಮಳೆ ವಿವರಗಳು, ಅದರ ಮುನ್ಸೂಚನೆ ನಿಡಬಲ್ಲ ಆ್ಯಪ್ ಮಾತ್ರ ಲಭ್ಯವಿತ್ತು. ಇದೀಗ ಸಿಡಿಲು ಮತ್ತು ಬಿಸಿಗಾಳಿಯ ಮುನ್ಸೂಚನೆ ಒದಗಿಸುವ ಆ್ಯಪ್ ಲಭ್ಯವಾಗುತ್ತಿರುವುದು ನಾಗರಿಕರಿಗೆ ಸಾಕಷ್ಟು ಅನುಕೂಲ ಕಲ್ಪಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶದಲ್ಲಿ ಇಂಧನ ಕೊರತೆ ಇಲ್ಲ, ಆದ್ರೆ...: ಪ್ರಧಾನಿ ಮೋದಿ ಹೇಳಿಕೆಗೆ ಕಾರಣ ನೀಡಿದ IGoM

ದಶಕದ ಬಳಿಕ ಭುವನೇಶ್ವರ್ ಸಿಡಿಸಿದ ಸಿಕ್ಸ್​ ಮೌಲ್ಯ '99 ಲಕ್ಷ ರೂ.’; MI ಪಂದ್ಯ RCB ಗೆಲ್ಲೋದಿಲ್ಲ ಎಂಬ ಭವಿಷ್ಯ ಸುಳ್ಳಾಗಿಸಿದ ಭುವಿ, Video!

Explainer: ಮಿತವ್ಯಯಕ್ಕೆ ಮೋದಿ ಕರೆ: ಕಷ್ಟದ ದಿನಗಳೋ? ಫಾರೆನ್ಸ್ ಉಳಿಕೆಯ ಮರ್ಮವೋ..? 72ಬಿಲಿಯನ್ $ ಹಿಂದಿನ ರಹಸ್ಯ

Video: ಆರಂಭದಲ್ಲೇ TVK ಸರ್ಕಾರಕ್ಕೆ ವಿಘ್ನ: ತಮಿಳುನಾಡಿನ ಏಕೈಕ ಮಹಿಳಾ ಸಚಿವೆ ಎಸ್. ಕೀರ್ತನಾ ಪ್ರಮಾಣವಚನಕ್ಕೆ ಬ್ರೇಕ್, Video!

ಪಟೇಲ್ ಹುಡುಗಿಯರು ಬೇರೆ ಜಾತಿ ಹುಡುಗರನ್ನು ಮದುವೆಯಾಗುತ್ತಿದ್ದಾರೆ, ಏಕೆಂದರೆ...: UP ರಾಜ್ಯಪಾಲರ ಪುತ್ರಿ ಶಾಕಿಂಗ್ ಹೇಳಿಕೆ

SCROLL FOR NEXT