ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಮಿಷನ್ ಯೋಜನೆ ಗಗನ್ ಯಾನ್! 
ವಿಜ್ಞಾನ-ತಂತ್ರಜ್ಞಾನ

ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಮಿಷನ್ ಗಗನ್ ಯಾನ್ ಗೆ ಸಿದ್ಧತೆ

ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಯೋಜನೆಗೆ ಸಕಲ ಸಿದ್ಧತೆಗಳೂ ನಡೆದಿದ್ದು, ಮೂವರು ಜನರನ್ನು 7 ದಿನಗಳ ಕಾಲ ಬಾಹ್ಯಾಕಾಶಕ್ಕೆ ಕಳಿಸಲಾಗುತ್ತದೆ.

ನವದೆಹಲಿ: ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಯೋಜನೆಗೆ ಸಕಲ ಸಿದ್ಧತೆಗಳೂ ನಡೆದಿದ್ದು, ಮೂವರು ಜನರನ್ನು 7 ದಿನಗಳ ಕಾಲ ಬಾಹ್ಯಾಕಾಶಕ್ಕೆ ಕಳಿಸಲಾಗುತ್ತದೆ. 
 ಸ್ಪೇಸ್ ಕ್ರಾಫ್ಟ್ ನ್ನು ಸುಮಾರು 300-400 ಕಿಮೀ ನಷ್ಟು ಕೆಳಮಟ್ಟದ ಭೂಕಕ್ಷೆಯಲ್ಲಿರಿಸಲಾಗುತ್ತದೆ. ಈ ಯೋಜನೆ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಬಾಹ್ಯಾಕಾಶ ಸಚಿವ ಜಿತೇಂದ್ರ ಸಿಂಗ್ "ಜಿಎಸ್ಎಲ್ ವಿ ಎಂಕೆ  III ಉಡಾವಣಾ ವಾಹನವನ್ನು ಮಾನವ ಸಹಿತ ಬಾಹ್ಯಾಕಾಶ ಯೋಜನೆಗೆ ಬಳಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. 
ಮಾನವ ಸಹಿತ ಬಾಹ್ಯಾಕಾಶ  ಯೋಜನೆ ಜಾರಿಗೂ ಮುನ್ನ ಇದೇ ಮಾದರಿಯ ಎರಡು ಮಾನವ ರಹಿತ ಗಗನ್ ಯಾನ್ ಯೋಜನೆಗಳನ್ನು ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.  ಯೋಜನೆ 2022 ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು, ಒಟ್ಟಾರೆ 10,000 ಕೋಟಿ ರೂಪಾಯಿ ಖರ್ಚಾಗಲಿದೆ ಎಂದು ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. 
ಮಾನವ ಸಹಿತ ಬಾಹ್ಯಾಕಾಶ ಯೋಜನೆಯನ್ನು ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT