ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಮಿಷನ್ ಯೋಜನೆ ಗಗನ್ ಯಾನ್! 
ವಿಜ್ಞಾನ-ತಂತ್ರಜ್ಞಾನ

ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಮಿಷನ್ ಗಗನ್ ಯಾನ್ ಗೆ ಸಿದ್ಧತೆ

ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಯೋಜನೆಗೆ ಸಕಲ ಸಿದ್ಧತೆಗಳೂ ನಡೆದಿದ್ದು, ಮೂವರು ಜನರನ್ನು 7 ದಿನಗಳ ಕಾಲ ಬಾಹ್ಯಾಕಾಶಕ್ಕೆ ಕಳಿಸಲಾಗುತ್ತದೆ.

ನವದೆಹಲಿ: ಭಾರತದ ಮೊದಲ ಮಾನವ ಸಹಿತ ಬಾಹ್ಯಾಕಾಶ ಯೋಜನೆಗೆ ಸಕಲ ಸಿದ್ಧತೆಗಳೂ ನಡೆದಿದ್ದು, ಮೂವರು ಜನರನ್ನು 7 ದಿನಗಳ ಕಾಲ ಬಾಹ್ಯಾಕಾಶಕ್ಕೆ ಕಳಿಸಲಾಗುತ್ತದೆ. 
 ಸ್ಪೇಸ್ ಕ್ರಾಫ್ಟ್ ನ್ನು ಸುಮಾರು 300-400 ಕಿಮೀ ನಷ್ಟು ಕೆಳಮಟ್ಟದ ಭೂಕಕ್ಷೆಯಲ್ಲಿರಿಸಲಾಗುತ್ತದೆ. ಈ ಯೋಜನೆ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಬಾಹ್ಯಾಕಾಶ ಸಚಿವ ಜಿತೇಂದ್ರ ಸಿಂಗ್ "ಜಿಎಸ್ಎಲ್ ವಿ ಎಂಕೆ  III ಉಡಾವಣಾ ವಾಹನವನ್ನು ಮಾನವ ಸಹಿತ ಬಾಹ್ಯಾಕಾಶ ಯೋಜನೆಗೆ ಬಳಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. 
ಮಾನವ ಸಹಿತ ಬಾಹ್ಯಾಕಾಶ  ಯೋಜನೆ ಜಾರಿಗೂ ಮುನ್ನ ಇದೇ ಮಾದರಿಯ ಎರಡು ಮಾನವ ರಹಿತ ಗಗನ್ ಯಾನ್ ಯೋಜನೆಗಳನ್ನು ಕೈಗೊಳ್ಳಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.  ಯೋಜನೆ 2022 ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು, ಒಟ್ಟಾರೆ 10,000 ಕೋಟಿ ರೂಪಾಯಿ ಖರ್ಚಾಗಲಿದೆ ಎಂದು ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. 
ಮಾನವ ಸಹಿತ ಬಾಹ್ಯಾಕಾಶ ಯೋಜನೆಯನ್ನು ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT