ಬಾಹುಬಲಿ 
ವಿಜ್ಞಾನ-ತಂತ್ರಜ್ಞಾನ

ಭಾರತದ ಬಹುನಿರೀಕ್ಷಿತ 'ಚಂದ್ರಯಾನ-2 ಉಡ್ಡಯನಕ್ಕೆ ಕೌಂಟ್ ಡೌನ್ ಶುರು

ಭಾರತದ ಮಹತ್ವಕಾಂಕ್ಷೆಯ ಚಂದ್ರಯಾನ-2 ಉಡ್ಡಯನಕ್ಕೆ ಕ್ಷಣಗಣನೆ ಆರಂಭವಾಗಿದೆ. ಚಂದ್ರಯಾನ -1ರ ಯಶಸ್ಸಿನ ದಶಕದ ಬಳಿಕ ಸೋಮವಾರ ಮುಂಜಾನೆ ಚಂದ್ರಯಾನ-2 ಉಡ್ಡಯನ ನಡೆಯಲಿದೆ.

ಬೆಂಗಳೂರು: ಭಾರತದ ಮಹತ್ವಕಾಂಕ್ಷೆಯ ಚಂದ್ರಯಾನ-2 ಉಡ್ಡಯನಕ್ಕೆ ಕ್ಷಣಗಣನೆ ಆರಂಭವಾಗಿದೆ. ಚಂದ್ರಯಾನ -1ರ ಯಶಸ್ಸಿನ ದಶಕದ ಬಳಿಕ ಸೋಮವಾರ ಮುಂಜಾನೆ ಚಂದ್ರಯಾನ-2 ಉಡ್ಡಯನ ನಡೆಯಲಿದೆ. 
ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ  ಮುಂಜಾನೆ  2-15ಕ್ಕೆ ಚಂದ್ರಯಾನ-2 ಅನುಷ್ಠಾನಗೊಳ್ಳುತ್ತಿದ್ದು, ರೋವರ್, ಲ್ಯಾಂಡರ್ ಹೊತ್ತು ಚಂದ್ರನತ್ತ ಚಿಮ್ಮಲಿದೆ. ಸೆಪ್ಟೆಂಬರ್ 6 ರಂದು ಚಂದ್ರನಲ್ಲಿ ಲ್ಯಾಂಡರ್ ಇಳಿಯಲಿದೆ. 
978 ಕೋಟಿ ರೂ. ವೆಚ್ಚದ ಈ ಯೋಜನೆಯನ್ನು ಭಾರತವೇ ಅಭಿವೃದ್ದಿಪಡಿಸಿದೆ.  ಚಂದ್ರಯಾನ -2 ಅಡಿಯಲ್ಲಿ ಚಂದ್ರನನ್ನು  ಆರ್ಬಿಟರ್ ಲ್ಯಾಂಡರ್, ರೋವರ್ ಎಂಬ ವೈಜ್ಞಾನಿಕ ಪರಿಕರಗಳು ಅಧ್ಯಯನ ನಡೆಸಲಿವೆ. 
ಇಲ್ಲಿ ಲ್ಯಾಂಡರ್ ಗೆ  ವಿಕ್ರಮ್ ಸಾರಾಭಾಯ್ ಹೆಸರಿಡಲಾಗಿದ್ದು, ರೋವರ್ ಗೆ ಪ್ರಜ್ಞಾನ ಎಂಬ ಹೆಸರಿಡಲಾಗಿದೆ. ಇವೆಲ್ಲವನ್ನೂ ಜಿಎಸ್ ಎಲ್ ವಿಎಂಕೆ 2 ಎಂಬ ರಾಕೆಟ್ ಹೊತ್ತೊಯ್ಯಲಿದೆ. ಇದಕ್ಕೆ ಬಾಹುಬಲಿ ಎಂಬ ಅಡ್ಡ ಹೆಸರು ಇಡಲಾಗಿದೆ ಎಂದು ಇಸ್ರೋ ವಿಜ್ಞಾನಿಗಳು ತಿಳಿಸಿದ್ದಾರೆ.
ಚಂದ್ರಯಾನ -2 ಭಾರತದ ಪ್ರತಿಷ್ಠಿತ ಯಾನಗಳಲ್ಲಿ ಒಂದಾಗಿದೆ.  ದೇಶಿಯ ತಂತ್ರಜ್ಞಾನದಿಂದ ಇದನ್ನು ಅಭಿವೃದ್ಧಿಪಡಿಸಲಾಗಿದ್ದು, ವಿಕ್ರಮ್  ಲ್ಯಾಂಡರ್  ಆರ್ಬಿಟರ್ ನಿಂದ ಪ್ರತ್ಯೇಕಗೊಂಡು ಚಂದ್ರನ ಮೇಲೆ ಇಳಿಯುವ ಕ್ಷಣ ಇಸ್ರೋ ವಿಜ್ಞಾನಿಗಳಿಗೆ ಹೆಚ್ಚಿನ ಕುತೂಹಲ ಮಿಶ್ರಿತ ಭಯದ ಕ್ಷಣವಾಗಲಿದೆ ಎಂದು ಇಸ್ರೋ ಮುಖ್ಯಸ್ಥ ಕೆ. ಶಿವಾನಿ ಹೇಳಿದ್ದಾರೆ.
ಚಂದ್ರಯಾನದ ಉದ್ದೇಶಗಳು:  ಚಂದ್ರಯಾನ -2ರಿಂದ ಚಂದ್ರ ನ ಮೂಲದ ಇನ್ನಷ್ಟು ಮಾಹಿತಿ ಸಿಗಲಿದೆ. ಚಂದ್ರನ ಮೇಲ್ಮೆನಲ್ಲಿ ನೀರಿನ ಕಣಗಳ ಹಂಚಿಕೆ ಹಾಗೂ ಪ್ರಸರಣವನ್ನು ಸಂಶೋಧನೆಯಿಂದ ತಿಳಿದುಕೊಳ್ಳಬೇಕಿದೆ.
ಮೇಲ್ಮೆ, ಮೇಲ್ಮೆ ಕೆಳಭಾಗ ಹಾಗೂ ಬಾಹ್ಯಾಗೋಳದಲ್ಲಿ ನೀರಿನ ಅಣುಗಳ ಇರುವಿಕೆ ಕುರಿತು ನಡೆಯುವ ಸಂಶೋಧನೆಯು, ಗ್ರಹದ ನೀರಿನ ಮೂಲ ತಿಳಿಯಲು ಸಹಕಾರಿಯಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT