ಬಾಹುಬಲಿ 
ವಿಜ್ಞಾನ-ತಂತ್ರಜ್ಞಾನ

ತಾಂತ್ರಿಕ ದೋಷ ಹಿನ್ನೆಲೆ: ಬಹು ನಿರೀಕ್ಷಿತ 'ಚಂದ್ರಯಾನ-2' ಮುಂದೂಡಿಕೆ-ಇಸ್ರೋ

ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ಚಂದ್ರಯಾನ-2 ಉಡ್ಡಯನವನ್ನು ಮುಂದೂಡಲಾಗಿದೆ ಎಂದು ಇಸ್ರೋ ತಿಳಿಸಿದೆ.

ಬೆಂಗಳೂರು: ತಾಂತ್ರಿಕ ದೋಷ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ಚಂದ್ರಯಾನ-2 ಉಡ್ಡಯನವನ್ನು ಮುಂದೂಡಲಾಗಿದೆ ಎಂದು ಇಸ್ರೋ ತಿಳಿಸಿದೆ. 
ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ  ಇಂದು ಮುಂಜಾನೆ 2.51ರಲ್ಲಿ ಚಂದ್ರಯಾನ ಉಡ್ಡಯನ ನಡೆಯಬೇಕಿತ್ತು. ಆದರೆ, ಅದಕ್ಕೂ 56 ನಿಮಿಷಗಳ ಮುಂಚಿತವಾಗಿ 978 ಕೋಟಿ ರೂಪಾಯಿ ವೆಚ್ಚದ ಯೋಜನೆಯನ್ನು ರದ್ದುಗೊಳ್ಳಿಸಲಾಯಿತು.
ಕವಾಟದಲ್ಲಿನ ಇಂಧನ ಸೋರಿಕೆಯೇ ಉಡಾವಣೆಯ ಮುಂದೂಡಿಕೆಗೆ ಕಾರಣ ಎಂದು ಊಹಿಸಲಾಗಿದೆ. ಆದರೆ, ಇದನ್ನು ಪರಿಶೀಲಿಸಲಾಗುತ್ತಿದೆ. ಉಡ್ಡಯನಕ್ಕೂ ಮುಂಚಿನ 56 ನಿಮಿಷಗಳಲ್ಲಿ ಉಡಾವಣಾ ವಾಹಕದಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಮುನ್ನೆಚ್ಚರಿಕೆಯ ಕ್ರಮವಾಗಿ ಚಂದ್ರಯಾನ-2 ಉಡಾವಣೆಯನ್ನು ನಿಲ್ಲಿಸಲಾಗಿದೆ. ಪರಿಷ್ಕೃತ ಉಡಾವಣಾ ದಿನಾಂಕವನ್ನು ತದನಂತರ ಪ್ರಕಟಿಸಲಾಗುವುದು ಎಂದು ಇಸ್ರೋ ವಕ್ತಾರರು ತಿಳಿಸಿದ್ದಾರೆ.
ತಾಂತ್ರಿಕ ದೋಷವೇ ಉಡಾವಣೆ ಮುಂದೂಡಿಕೆ ಕಾರಣ ಎಂದು ಇಸ್ರೋ ಅಧಿಕಾರಿಗಳು ಹೇಳಿದ್ದಾರೆ. ಆದರೆ, ಮುಂದಿನ ದಿನಾಂಕವನ್ನು ಘೋಷಿಸಿಲ್ಲ. ಜುಲೈ 16 ರಂದು ಉಡಾವಣೆ ನಡೆಯುವ ಸಾಧ್ಯತೆ ಇಲ್ಲ. ಯಾವ ದಿನಾಂಕದಿಂದ ಉಡಾವಣೆ ಮಾಡಬಹುದೆಂದು ಇಸ್ರೋ ವಿಜ್ಞಾನಿಗಳು ಲೆಕ್ಕಾಚಾರ ಮಾಡುತ್ತಿದ್ದಾರೆ.  ಜುಲೈ 9 ಮತ್ತು 16 ರ ನಡುವಿನ ಅವಧಿಯಲ್ಲಿ ಉಡಾವಣೆ ಮಾಡಲು ಇಸ್ರೋ ಈ ಹಿಂದೆ ನಿರ್ಧರಿಸಿತ್ತು.
ಚಂದ್ರಯಾನ- 2 ಉಡಾವಣೆಯಿಂದ ಸೆಪ್ಟೆಂಬರ್ 6 ರಂದು ಚಂದ್ರನ ಮೈಲ್ಮೆ ಮೇಲೆ ರಾಕೆಟ್ ಇಳಿಸಲು ಚಿಂತಿಸಲಾಗಿತ್ತು. ಆದರೆ, ತಾಂತ್ರಿಕ ದೋಷದಿಂದ ಈಗ ಮುಂದೂಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT