ಸತೀಶ್ ರೆಡ್ಡಿ 
ವಿಜ್ಞಾನ-ತಂತ್ರಜ್ಞಾನ

ಕ್ಷಿಪಣಿ ತಂತ್ರಜ್ಞಾನದ ಅಭಿವೃದ್ಧಿಗಾಗಿ ಡಿಆರ್ ಡಿಒ ಮುಖ್ಯಸ್ಥರಿಗೆ ಅಮೆರಿಕಾದ ಪ್ರತಿಷ್ಠಿತ ಪ್ರಶಸ್ತಿ

ಡಿಆರ್ ಡಿಒ ಮುಖ್ಯಸ್ಥ ಜಿ ಸತೀಶ್ ರೆಡ್ಡಿ ಭಾರತದಲ್ಲಿ ಕ್ಷಿಪಣಿ ಅಭಿವೃದ್ಧಿಯಲ್ಲಿ ನೀಡಿರುವ ಕೊಡುಗೆಗಾಗಿ ಅಮೆರಿಕಾದ ಎಐಎಎ ಸಂಸ್ಥೆಯಿಂದ 2019ರ ಪ್ರತಿಷ್ಠಿತ ಕ್ಷಿಪಣಿ ವ್ಯವಸ್ಥೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ನವದೆಹಲಿ:ಡಿಆರ್ ಡಿಒ ಮುಖ್ಯಸ್ಥ ಜಿ ಸತೀಶ್ ರೆಡ್ಡಿ ಭಾರತದಲ್ಲಿ  ಕ್ಷಿಪಣಿ ಅಭಿವೃದ್ಧಿಯಲ್ಲಿ ನೀಡಿರುವ ಕೊಡುಗೆಗಾಗಿ  ಅಮೆರಿಕಾದ ಎಐಎಎ ಸಂಸ್ಥೆಯಿಂದ 2019ರ ಪ್ರತಿಷ್ಠಿತ ಕ್ಷಿಪಣಿ ವ್ಯವಸ್ಥೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಕ್ಷಿಪಣಿ ತಂತ್ರಜ್ಞಾನ ವ್ಯವಸ್ಥೆಯ ಅಭಿವೃದ್ಧಿ ಹಾಗೂ ಅನುಷ್ಠಾನವನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಿರುವುದಾಗಿ ಎಐಎಎ ಸಂಸ್ಥೆ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದೆ.

ಭಾರತದಲ್ಲಿ ಸ್ವದೇಶಿ ನಿರ್ಮಿತ ಕ್ಷಿಪಣಿಗಳ ವಿನ್ಯಾಸ, ಅಭಿವೃದ್ಧಿ ಹಾಗೂ ಯುದ್ಧ ತಂತ್ರದ ವ್ಯವಸ್ಥೆಗಾಗಿ ಸುಮಾರು 30 ವರ್ಷಗಳ ಕಾಲ ಮಹತ್ವದ ಸೇವೆ ಸಲ್ಲಿಸಿರುವುದನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ  ಆಯ್ಕೆ ಮಾಡಿರುವುದಾಗಿ ಸೂಸೈಟಿ  ಹೇಳಿದೆ.

ಸತೀಶ್ ರೆಡ್ಡಿ ಡಿಆರ್ ಡಿ ಒ ಮುಖ್ಯಸ್ಥರಾಗುವ ಮುನ್ನ ಅಗ್ನಿ ಸರಣಿಯ ಅಣ್ವಸ್ತ್ರ ಪರಮಾಣುಗಳ ಕಾರ್ಯತಂತ್ರ ಕಾರ್ಯಕ್ರಮಗಳು ಸೇರಿದಂತೆ ಇಡೀ ಡಿಆರ್ ಡಿಒದ ಕ್ಷಿಪಣಿ ವಿಭಾಗದ ಮುಖ್ಯಸ್ಥರಾಗಿದ್ದರು. ಭೂಮಿಯಿಂದ ಆಕಾಶಕ್ಕೆ ವೇಗವಾಗಿ ಚಿಮ್ಮುವ ಕ್ಷಿಪಣಿ ವ್ಯವಸ್ಥೆ , ನಾಗ್  ಟ್ಯಾಂಕ್ ವಿರೋಧಿ ಯುದ್ದೋಪಕರಣಗಳ ಅಭಿವೃದ್ಧಿಯಲ್ಲಿ ಮಹತ್ವದ ಸೇವೆ ಸಲ್ಲಿಸಿದ್ದಾರೆ.

ಆಕಾಶ್ ವಾಯು ರಕ್ಷಣಾ ವ್ಯವಸ್ಥೆಯ ಅಭಿವೃದ್ದಿಯಲ್ಲೂ ಸತೀಶ್  ರೆಡ್ಡಿ ಅವರು ಪ್ರಮುಖವಾದ ಪಾತ್ರ ವಹಿಸಿದ್ದಾರೆ. ಇದರಿಂದಾಗಿ ವಿದೇಶಿ ವಿನಿಮಯ ಉಳಿತಾಯಕ್ಕೆ ನೆರವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT