ಲ್ಯಾಂಡರ್ 
ವಿಜ್ಞಾನ-ತಂತ್ರಜ್ಞಾನ

ಚಂದ್ರನ ದಕ್ಷಿಣ ಧ್ರುವದ ಮೇಲೆ ಲ್ಯಾಂಡರ್ ಇಳಿಕೆ ತುಂಬಾ ಕಷ್ಟ: ಯೂರೋಪ್ ಸಂಸ್ಥೆ

ಚಂದ್ರನ ದಕ್ಷಿಣ ಧ್ರುವದಲ್ಲಿ ಬಾಹ್ಯಾಕಾಶ ನೌಕೆಯ ಯಶಸ್ವಿ ಇಳಿಕೆ ಅಸಾಧ್ಯ ಎಂದು ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ ತಿಳಿಸಿದ್ದು, ಇಸ್ರೋ ಸಾಹಸವನ್ನು ಶ್ಲಾಘಿಸಿದೆ. 

ಮುಂಬೈ:ಚಂದ್ರನ ದಕ್ಷಿಣ ಧ್ರುವದಲ್ಲಿ ಬಾಹ್ಯಾಕಾಶ ನೌಕೆಯ ಯಶಸ್ವಿ ಇಳಿಕೆ ಅಸಾಧ್ಯ ಎಂದು ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ ತಿಳಿಸಿದ್ದು, ಇಸ್ರೋ ಸಾಹಸವನ್ನು ಶ್ಲಾಘಿಸಿದೆ. 

ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ-2 ರೀತಿಯ ಮಾನವ ರಹಿತ ಮಿಷನ್  ಯೋಜನೆಯನ್ನು ಕಳೆದ ವರ್ಷವೇ  ಹಾಕಿಕೊಂಡಿತ್ತು.ಚಂದ್ರನ  ದಕ್ಷಿಣ ಧ್ರುವದಲ್ಲಿ  ಬಾಹ್ಯಾಕಾಶ ನೌಕೆಯ ಲ್ಯಾಂಡಿಂಗ್ ಆಗುವ ಯೋಜನೆಗೆ ಅಗತ್ಯ ಪ್ರಮಾಣದ ಹಣಕಾಸು ದೊರೆಯದ  ಹಿನ್ನೆಲೆಯಲ್ಲಿ ಆ ಯೋಜನೆಯನ್ನು ರದ್ದುಗೊಳಿಸಲಾಗಿತ್ತು.

ಯೋಜನೆಯ ಹಂತದಲ್ಲಿ ಚಂದ್ರನ ದಕ್ಷಿಣ ಧ್ರುವದಲ್ಲಿ ಬಾಹ್ಯಾಕಾಶ ನೌಕೆಯ ಇಳಿಕೆ ಅಸಾಧ್ಯ ಎಂಬಂತಹ ವರದಿಯನ್ನು ತಯಾರಿಸಲಾಗಿತ್ತು.ಚಂದ್ರನ ದಕ್ಷಿಣ ಧ್ರುವದಲ್ಲಿ ವಾತವಾರಣ ಸಂಕೀರ್ಣತೆಯಿಂದ ಕೂಡಿದ್ದು,  ಕಣಗಳು ಹಾಗೂ ವಿಕಿರಣತೆಗಳು ಚಂದ್ರನ ಮೇಲಿನ ದೂಳನ್ನು ಸಂಪರ್ಕಿಸುತ್ತವೆ. ಇದರಿಂದಾಗಿ ಅಪಾಯವಾಗಲಿದೆ ಎಂದು ವರದಿಯಲ್ಲಿ ಹೇಳಲಾಗಿತ್ತು. 

ಚಂದ್ರನಲ್ಲಿನ ದೂಳು ಉಪಕರಣಗಳ ಮೇಲೆ ಅಂಟಿಕೊಂಡು ಯಂತ್ರೋಪಕರಣಗಳಿಗೆ ಹಾನಿಯಾಗಲಿದೆ. ಸೌರ ಫಲಕ ಹಾಗೂ ಇನ್ನಿತರ ಮೇಲ್ಮೈಗಳ  ದಕ್ಷತೆ ಕ್ಷೀಣಿಸಲಿದೆ. ಬಾಹ್ಯಾಕಾಶ ನೌಕೆ ಇಳಿಯುವಾಗ  ಸೌರ ಶಕ್ತಿ ಉತ್ಪಾದನೆ ಬಂದ್ ಆಗದಂತೆ  ಹದ್ದಿನ ಕಣ್ಣಿಡಬೇಕಾಗುತ್ತದೆ ಎಂದು ತಿಳಿಸಲಾಗಿತ್ತು. 

2020ರ ವೇಳೆಗೆ ಚಂದ್ರನ ದಕ್ಷಿಣ ಧ್ರುವದಲ್ಲಿ ರೊಬೊಟಿಕ್ ಮಿಷನ್  ಸಿದ್ಧತಾ ಕಾರ್ಯದಲ್ಲಿ ಕೆನಡಾ, ಜಪಾನ್ ಬಾಹ್ಯಾಕಾಶ ಸಂಸ್ಥೆಗಳೊಂದಿಗೆ ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ಈ ಪ್ರದೇಶದಲ್ಲಿ ಬಾಹ್ಯಾಕಾಶ ನೌಕೆಯನ್ನು ಇಳಿಸಲು 17 ವಿಧದ ತೊಂದರೆಗಳನ್ನು ಎದುರಿಸಬೇಕಾಗುತ್ತದೆ ಎಂದು ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT