ಸಂಗ್ರಹ ಚಿತ್ರ 
ವಿಜ್ಞಾನ-ತಂತ್ರಜ್ಞಾನ

ಗಗನಯಾನ: ಭಾರತದ 12 ಗಗನಯಾನಿಗಳಿಗೆ ರಷ್ಯಾ ತರಬೇತಿ: ಇಸ್ರೋ

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ತನ್ನ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಗಗನಯಾನಕ್ಕೆ ಈಗಾಗಲೇ ಸಜ್ಜಾಗುತ್ತಿದ್ದು, ಯೋಜನೆ ನಿಮಿತ್ತ ಭಾರತದ 12 ಗಗನಯಾನಿಗಳನ್ನು ತರಬೇತಿಗಾಗಿ ರಷ್ಯಾಗೆ ಕಳುಹಿಸಲು ನಿರ್ಧರಿಸಿದೆ.

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ತನ್ನ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಗಗನಯಾನಕ್ಕೆ ಈಗಾಗಲೇ ಸಜ್ಜಾಗುತ್ತಿದ್ದು, ಯೋಜನೆ ನಿಮಿತ್ತ ಭಾರತದ 12 ಗಗನಯಾನಿಗಳನ್ನು ತರಬೇತಿಗಾಗಿ ರಷ್ಯಾಗೆ ಕಳುಹಿಸಲು ನಿರ್ಧರಿಸಿದೆ.

ಇಸ್ರೋ ಮೂಲಗಳ ಪ್ರಕಾರ 2020ರ ಡಿಸೆಂಬರ್ ವೇಳೆಗೆ ಭಾರತದ ಗಗನ ಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ರವಾನೆ ಮಾಡಲು ಯೋಜನೆ ರೂಪಿಸಿದ್ದು, ಅದರಂತೆ ಗಗನಯಾತ್ರಿಗಳನ್ನು ತರಬೇತಿ ನಿಮಿತ್ತ ರಷ್ಯಾಗೆ ಕಳುಹಿಸಲಾಗುತ್ತಿದೆ. ಭಾರತದ ಒಟ್ಟು 12 ಗಗನಯಾತ್ರಿಗಳು ರಷ್ಯಾ ಬಾಹ್ಯಾಕಾಶ ಕೇಂದ್ರಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತಂತೆ ಇಸ್ರೋ ಅಧ್ಯಕ್ಷ ಕೆ ಶಿವನ್ ಅವರು ಮಾಹಿತಿ ನೀಡಿದ್ದು, ಅಹ್ಮದಾಬಾದ್ ನಲ್ಲಿರುವ ಸ್ಪೇಸ್ ಅಪ್ಲಿರೇಶನ್ ಸೆಂಟರ್ ನಲ್ಲಿ ಮಾತನಾಡಿದ ಅವರು, ಗಗನಯಾನ ಯೋಜನೆ ನಿಮಿತ್ತ ಒಟ್ಟು 12 ಗಗನಯಾತ್ರಿಗಳನ್ನುರಷ್ಯಾಗೆ ತರಬೇತಿಗಾಗಿ ಕಳುಹಿಸಲಾಗುತ್ತಿದೆ. ಆದರೆ ಈ 12 ಗಗನ ಯಾತ್ರಿಗಳ ಆಯ್ಕೆ ಪ್ರಕ್ರಿಯೆ ಶೀಘ್ರವೇ ನಡೆಯಲಿದೆ ಎಂದು ಹೇಳಿದರು. ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ರಷ್ಯಾ ಬಾಹ್ಯಾಕಾಶ ಸಂಸ್ಥೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ತರಬೇತಿ ಕುರಿತು ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ. ಭಾರತದ ಗಗನಯಾತ್ರಿಗಳು ರಷ್ಯಾದಲ್ಲಿ ಸುಮಾರು 1 ತಿಂಗಳ ಕಾಲ ತರಬೇತಿ ಪಡೆಯಲಿದ್ದಾರೆ ಎಂದು ಶಿವನ್ ಮಾಹಿತಿ ನೀಡಿದರು.

ಇನ್ನು ಭಾರತದ ಮೊದಲ ಮಾನವ ರಹಿತ ಗಗನಯಾನ ಯೋಜನೆ 2020ರ ಡಿಸೆಂಬರ್ ನಲ್ಲಿ ಉಡಾವಣೆಯಾಗಲಿದ್ದು, 2ನೇ ಉಡಾವಣೆ 2021ರ ಜುಲೈನಲ್ಲಿ ಉಡಾವಣೆಯಾಗಲಿದೆ. ಅದೇ ವರ್ಷದ ಡಿಸೆಬಂರ್ ನಲ್ಲಿ ಭಾರತದ ಮೊಟ್ಟ ಮೊದಲ ಮಾನವ ಸಹಿತ ಗಗನಯಾನ ಯೋಜನೆ ಉಡಾವಣೆಯಾಗಲಿದೆ ಎಂದು ಶಿವನ್ ಹೇಳಿದರು.

ಅಂತೆಯೇ ಗಗನಯಾತ್ರಿಗಳ ತಂಡದಲ್ಲಿ ಮಹಿಳೆ ಇರಲಿದ್ದಾರೆ ಎಂಬ ಊಹಾಪೋಹಕ್ಕೆ ಸ್ಪಷ್ಟನೆ ನೀಡಿದ ಶಿವನ್, ಈ ವರೆಗೂ ಈ ಕುರಿತ ಚರ್ಚೆ ಉದ್ಭವಿಸಿಲ್ಲ. ಒಂದು ವೇಳೆ ಮಹಿಳೆ ಆಯ್ಕೆಯಾಗುವುದಾದರೆ ನಾವೂ ಕೂಡ ಖುಷಿ ಪಡುತ್ತೇವೆ. ನಮಗೆ ಸಮರ್ಥ ಗಗನಯಾತ್ರಿಗಳು. ಇದರಲ್ಲಿ ಯಾವುದೇ ರೀತಿಯ ಲಿಂಗ ಬೇದವಿಲ್ಲ ಎಂದು ಶಿವನ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT