ಸಂಗ್ರಹ ಚಿತ್ರ 
ವಿಜ್ಞಾನ-ತಂತ್ರಜ್ಞಾನ

ಗಗನಯಾನ: ಭಾರತದ 12 ಗಗನಯಾನಿಗಳಿಗೆ ರಷ್ಯಾ ತರಬೇತಿ: ಇಸ್ರೋ

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ತನ್ನ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಗಗನಯಾನಕ್ಕೆ ಈಗಾಗಲೇ ಸಜ್ಜಾಗುತ್ತಿದ್ದು, ಯೋಜನೆ ನಿಮಿತ್ತ ಭಾರತದ 12 ಗಗನಯಾನಿಗಳನ್ನು ತರಬೇತಿಗಾಗಿ ರಷ್ಯಾಗೆ ಕಳುಹಿಸಲು ನಿರ್ಧರಿಸಿದೆ.

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ತನ್ನ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಗಗನಯಾನಕ್ಕೆ ಈಗಾಗಲೇ ಸಜ್ಜಾಗುತ್ತಿದ್ದು, ಯೋಜನೆ ನಿಮಿತ್ತ ಭಾರತದ 12 ಗಗನಯಾನಿಗಳನ್ನು ತರಬೇತಿಗಾಗಿ ರಷ್ಯಾಗೆ ಕಳುಹಿಸಲು ನಿರ್ಧರಿಸಿದೆ.

ಇಸ್ರೋ ಮೂಲಗಳ ಪ್ರಕಾರ 2020ರ ಡಿಸೆಂಬರ್ ವೇಳೆಗೆ ಭಾರತದ ಗಗನ ಯಾತ್ರಿಗಳನ್ನು ಬಾಹ್ಯಾಕಾಶಕ್ಕೆ ರವಾನೆ ಮಾಡಲು ಯೋಜನೆ ರೂಪಿಸಿದ್ದು, ಅದರಂತೆ ಗಗನಯಾತ್ರಿಗಳನ್ನು ತರಬೇತಿ ನಿಮಿತ್ತ ರಷ್ಯಾಗೆ ಕಳುಹಿಸಲಾಗುತ್ತಿದೆ. ಭಾರತದ ಒಟ್ಟು 12 ಗಗನಯಾತ್ರಿಗಳು ರಷ್ಯಾ ಬಾಹ್ಯಾಕಾಶ ಕೇಂದ್ರಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.

ಈ ಕುರಿತಂತೆ ಇಸ್ರೋ ಅಧ್ಯಕ್ಷ ಕೆ ಶಿವನ್ ಅವರು ಮಾಹಿತಿ ನೀಡಿದ್ದು, ಅಹ್ಮದಾಬಾದ್ ನಲ್ಲಿರುವ ಸ್ಪೇಸ್ ಅಪ್ಲಿರೇಶನ್ ಸೆಂಟರ್ ನಲ್ಲಿ ಮಾತನಾಡಿದ ಅವರು, ಗಗನಯಾನ ಯೋಜನೆ ನಿಮಿತ್ತ ಒಟ್ಟು 12 ಗಗನಯಾತ್ರಿಗಳನ್ನುರಷ್ಯಾಗೆ ತರಬೇತಿಗಾಗಿ ಕಳುಹಿಸಲಾಗುತ್ತಿದೆ. ಆದರೆ ಈ 12 ಗಗನ ಯಾತ್ರಿಗಳ ಆಯ್ಕೆ ಪ್ರಕ್ರಿಯೆ ಶೀಘ್ರವೇ ನಡೆಯಲಿದೆ ಎಂದು ಹೇಳಿದರು. ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ರಷ್ಯಾ ಬಾಹ್ಯಾಕಾಶ ಸಂಸ್ಥೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ತರಬೇತಿ ಕುರಿತು ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗುತ್ತದೆ. ಭಾರತದ ಗಗನಯಾತ್ರಿಗಳು ರಷ್ಯಾದಲ್ಲಿ ಸುಮಾರು 1 ತಿಂಗಳ ಕಾಲ ತರಬೇತಿ ಪಡೆಯಲಿದ್ದಾರೆ ಎಂದು ಶಿವನ್ ಮಾಹಿತಿ ನೀಡಿದರು.

ಇನ್ನು ಭಾರತದ ಮೊದಲ ಮಾನವ ರಹಿತ ಗಗನಯಾನ ಯೋಜನೆ 2020ರ ಡಿಸೆಂಬರ್ ನಲ್ಲಿ ಉಡಾವಣೆಯಾಗಲಿದ್ದು, 2ನೇ ಉಡಾವಣೆ 2021ರ ಜುಲೈನಲ್ಲಿ ಉಡಾವಣೆಯಾಗಲಿದೆ. ಅದೇ ವರ್ಷದ ಡಿಸೆಬಂರ್ ನಲ್ಲಿ ಭಾರತದ ಮೊಟ್ಟ ಮೊದಲ ಮಾನವ ಸಹಿತ ಗಗನಯಾನ ಯೋಜನೆ ಉಡಾವಣೆಯಾಗಲಿದೆ ಎಂದು ಶಿವನ್ ಹೇಳಿದರು.

ಅಂತೆಯೇ ಗಗನಯಾತ್ರಿಗಳ ತಂಡದಲ್ಲಿ ಮಹಿಳೆ ಇರಲಿದ್ದಾರೆ ಎಂಬ ಊಹಾಪೋಹಕ್ಕೆ ಸ್ಪಷ್ಟನೆ ನೀಡಿದ ಶಿವನ್, ಈ ವರೆಗೂ ಈ ಕುರಿತ ಚರ್ಚೆ ಉದ್ಭವಿಸಿಲ್ಲ. ಒಂದು ವೇಳೆ ಮಹಿಳೆ ಆಯ್ಕೆಯಾಗುವುದಾದರೆ ನಾವೂ ಕೂಡ ಖುಷಿ ಪಡುತ್ತೇವೆ. ನಮಗೆ ಸಮರ್ಥ ಗಗನಯಾತ್ರಿಗಳು. ಇದರಲ್ಲಿ ಯಾವುದೇ ರೀತಿಯ ಲಿಂಗ ಬೇದವಿಲ್ಲ ಎಂದು ಶಿವನ್ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್