ಸಂಗ್ರಹ ಚಿತ್ರ 
ವಿಜ್ಞಾನ-ತಂತ್ರಜ್ಞಾನ

ಕಂಕಣ ಸೂರ್ಯಗ್ರಹಣ ವೀಕ್ಷಣೆಯಿಂದ ಯಾವುದೇ ದೋಷ, ಅವಘಡ ಸಂಭವಿಸುವುದಿಲ್ಲ: ವಿಜ್ಞಾನ ಪರಿಷತ್

ಜೂನ್ 21ರ ಭಾನುವಾರ ಸಂಭವಿಸಲಿರುವ ಕಂಕಣ ಸೂರ್ಯಗ್ರಹಣ ವೀಕ್ಷಣೆಯಿಂದ ಯಾವುದೇ ದೋಷ ಅಥವಾ ಅವಘಡ ಸಂಭವಿಸುವುದಿಲ್ಲ ಎಂದು ರಾಜ್ಯ ವಿಜ್ಞಾನ ಪರಿಷತ್ ತಿಳಿಸಿದೆ.

ಬೆಂಗಳೂರು: ಜೂನ್ 21 ರ ಭಾನುವಾರ ಸಂಭವಿಸಲಿರುವ ಕಂಕಣ ಸೂರ್ಯಗ್ರಹಣ ವೀಕ್ಷಣೆಯಿಂದ ಯಾವುದೇ ದೋಷ ಅಥವಾ ಅವಘಡ ಸಂಭವಿಸುವುದಿಲ್ಲ ಎಂದು ರಾಜ್ಯ ವಿಜ್ಞಾನ ಪರಿಷತ್ ತಿಳಿಸಿದೆ.

'ಈ ವಿದ್ಯಮಾನ ನೋಡುವುದರಿಂದ ಯಾವುದೇ ರೀತಿಯ ಅವಘಡಗಳು ಸಂಭವಿಸುವುದಿಲ್ಲ. ಪ್ರಕೃತಿಯ ಮೇಲೆ ಯಾವ ಅಡ್ಡ ಪರಿಣಾಮಗಳೂ ಇದರಿಂದ ಉಂಟಾಗುವುದಿಲ್ಲ. ಯಾವುದೇ ಭಯವಿಲ್ಲದೆ, ಈ ಎಲ್ಲ ಪ್ರಕ್ರಿಯೆ ವೀಕ್ಷಿಸಬಹುದು. ಎಂದು ಹೇಳಿದೆ.

ಇದೊಂದು ಖಗೋಳ ಮಂಡಲದಲ್ಲಿ ನಡೆಯುವ ಸಹಜ ಪಕ್ರಿಯೆಯಾಗಿದ್ದು, ವೈಯಕ್ತಿಕವಾಗಿ ಯಾರಿಗೂ ಯಾವ ದೋಷಗಳು ಸಂಭವಿಸುವುದಿಲ್ಲ ಯಾರೂ ಮೂಢನಂಬಿಕೆಗಳಿಗೆ ಬಲಿಯಾಗಬಾರದು ಎಂದು ವಿಜ್ಞಾನ ಪರಿಷತ್ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದೆ.

'ಕಂಕಣ ಸೂರ್ಯ ಗ್ರಹಣ ’ಮುಖ್ಯವಾಗಿ ಜಾರ್ಖಂಡ್, ಉತ್ತರಾಖಂಡ, ದೆಹಲಿ, ಜೋಧಪುರ ಪ್ರದೇಶಗಳಲ್ಲಿ ಸಂಪೂರ್ಣ ಉಂಗುರ ಗ್ರಹಣವಾಗಿ ಗೋಚರಿಸಲಿದೆ. ದಕ್ಷಿಣ ಭಾರತದ ಕೆಲ ಪ್ರದೇಶಗಳಲ್ಲಿ ಶೇ೦.೪೦ರಷ್ಟು ಮಾತ್ರ ಕಾಣಲಿದೆ. ಈ ಪ್ರದೇಶಗಳಲ್ಲಿ ಬೆಳಿಗ್ಗೆ ೧೦.೧೩ರಿಂದ ಆರಂಭವಾಗಿ ಮಧ್ಯಾಹ್ನ ೧.೩೫ಕ್ಕೆ ಕೊನೆಗೊಳ್ಳಲಿದೆ.

'ಈ ಸೂರ್ಯಗ್ರಹಣದ ವಿಶೇಷವೆಂದರೆ, ಹಗಲಿನ ಅವಧಿ ಹೆಚ್ಚಾಗಿದೆ. ಸೂರ್ಯ ಉತ್ತರದಿಂದ ದಕ್ಷಿಣಕ್ಕೆ ತನ್ನ ಪಯಣ ಆರಂಭಿಸುತ್ತಾನೆ. ಇದನ್ನು ಬೈನಾಕ್ಯುಲರ್ ಇಲ್ಲವೆ ದೂರದರ್ಶಕ ಇದ್ದಲ್ಲಿ ಬಿಳಿಗೋಡೆಯ ಅಥವಾ ಬಿಳಿಹಾಳೆಯ ಮೇಲೆ ಪ್ರತಿಬಿಂಬವನ್ನು ಮೂಡಿಸಿ ನೋಡಬಹುದು ಎಂದು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ನ ಕಾರ್ಯಕಾರಿ ಸಮಿತಿ ಸದಸ್ಯ ಎ.ಎನ್. ಮಹೇಶ್ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT