ನೆಹರು ತಾರಾಲಯ 
ವಿಜ್ಞಾನ-ತಂತ್ರಜ್ಞಾನ

ಕಂಕಣ ಸೂರ್ಯ ಗ್ರಹಣ: ನೆಹರೂ ತಾರಾಲಯಕ್ಕಿಲ್ಲ ಪ್ರವೇಶ

ಇಂದು ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ ಪ್ರಯುಕ್ತ ನೆಹರು ತಾರಾಲಯದಲ್ಲಿ ಸೂರ್ಯಗ್ರಹಣ ವೀಕ್ಷಣೆಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಸೂರ್ಯ ಗ್ರಹಣ ನಿಮಿತ್ಯ ಕೇವಲ ಅಧ್ಯಯನದ ದೃಷ್ಟಿಯಿಂದ ಮಾತ್ರ‌ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 

ಬೆಂಗಳೂರು: ಇಂದು ರಾಹುಗ್ರಸ್ತ ಚೂಡಾಮಣಿ ಸೂರ್ಯಗ್ರಹಣ ಪ್ರಯುಕ್ತ ನೆಹರು ತಾರಾಲಯದಲ್ಲಿ ಸೂರ್ಯಗ್ರಹಣ ವೀಕ್ಷಣೆಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಸೂರ್ಯ ಗ್ರಹಣ ನಿಮಿತ್ಯ ಕೇವಲ ಅಧ್ಯಯನದ ದೃಷ್ಟಿಯಿಂದ ಮಾತ್ರ‌ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 

ಆದರೆ, ಕೊರೊನಾ ಭೀತಿ ಹಿನ್ನೆಲೆಯಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ‌ನಿಷೇಧಿಸಲಾಗಿದೆ. ಗ್ರಹಣ ವೀಕ್ಷಣೆಗೆ ಸಾರ್ವಜನಿಕರಿಗೆ ಅವಕಾಶ ನೀಡಿದರೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ತೀರ ಕಷ್ಟವಾಗಲಿದೆ. ಆದ್ದರಿಂದ ನೆಹರು ತಾರಾಲಯದ ವೆಬ್‌ಸೈಟ್‌ನಲ್ಲಿ ಗ್ರಹಣದ ನೇರ ಪ್ರಸಾರವಾಗಲಿದ್ದು, ಈ ಮೂಲಕ ಸಾರ್ವಜನಿಕರು ಗ್ರಹಣ ವೀಕ್ಷಿಸಬಹುದು ಎಂದು ನೆಹರು ತಾರಾಲಯದ ನಿರ್ದೇಶಕ ಡಾ.ಪ್ರಮೋದ್ ಗಲಗಲಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಶೇ.37 ರಷ್ಟು ಗ್ರಹಣ ಗೋಚರವಾಗುತ್ತದೆ. ಯಾವುದೇ ಕಾರಣಕ್ಕೂ ಬರಿಗಣ್ಣಿನಿಂದ ಸೂರ್ಯಗ್ರಹಣ ವೀಕ್ಷಣೆ ಮಾಡಬಾರದು ಎಂದು ನೆಹರೂ ತಾರಾಲಯದ ನಿರ್ದೇಶಕ ಪ್ರಮೋದ್ ಗಲಗಲಿತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT