ಟ್ವೀಟ್ ಗಳ ಆಧಾರದಲ್ಲಿ ಶೈಕ್ಷಣಿಕ ಪ್ರಗತಿ ತಿಳಿಸಲಿರುವ ಕೃತಕ ಬುದ್ಧಿಮತ್ತೆ! 
ವಿಜ್ಞಾನ-ತಂತ್ರಜ್ಞಾನ

ಕೃತಕ ಬುದ್ಧಿಮತ್ತೆ ಬಳಸಿ ಟ್ವೀಟ್ ಗಳ ಆಧಾರದ ಮೇಲೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ತಿಳಿಸಲು ಸಾಧ್ಯ!

ಈಗಿನ ಕಾಲದ ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲೇ ಹೆಚ್ಚು ಸಮಯ ಕಳೆಯುತ್ತಿರುತ್ತಾರೆ, ಓದಿನತ್ತ ಹೆಚ್ಚು ಗಮನ ಹರಿಸುವುದಿಲ್ಲ ಎಂಬ ಆರೋಪ ಕೇಳಿಬರುವುದು ಸಾಮಾನ್ಯ. ಆದರೆ ಮುಂದಿನ ದಿನಗಳಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ತಿಳಿಯುವುದಕ್ಕೆ ಇದೇ ಸಾಮಾಜಿಕ ಜಾಲತಾಣ ಸಹಕಾರಿಯಾಗಬಲ್ಲದು! 

ನವದೆಹಲಿ: ಈಗಿನ ಕಾಲದ ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲೇ ಹೆಚ್ಚು ಸಮಯ ಕಳೆಯುತ್ತಿರುತ್ತಾರೆ, ಓದಿನತ್ತ ಹೆಚ್ಚು ಗಮನ ಹರಿಸುವುದಿಲ್ಲ ಎಂಬ ಆರೋಪ ಕೇಳಿಬರುವುದು ಸಾಮಾನ್ಯ. ಆದರೆ ಮುಂದಿನ ದಿನಗಳಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ತಿಳಿಯುವುದಕ್ಕೆ ಇದೇ ಸಾಮಾಜಿಕ ಜಾಲತಾಣ ಸಹಕಾರಿಯಾಗಬಲ್ಲದು! 

ಇದೇನಪ್ಪ!!? ಅಂತ ಹುಬ್ಬೇರಿಸಬೇಡಿ, ಕೃತಕ ಬುದ್ಧಿಮತ್ತೆಯ ಮೂಲಕ ನಿಮ್ಮ ಮಗು ಶಿಕ್ಷಣದಲ್ಲಿ ಯಾವ ಮಟ್ಟದ ಪ್ರಗತಿ ಸಾಧಿಸಿದ ಎಂಬುದನ್ನು ಅಳೆಯುವುದಕ್ಕೆ ಸಾಮಾಜಿಕ ಜಾಲತಾಣಗಳ ಪೋಸ್ಟ್ ಗಳನ್ನೇ ಆಧಾರವಾಗಿರಿಸಿಕೊಳ್ಳುವ ತಂತ್ರಜ್ಞಾನವನ್ನು ರಷ್ಯಾದ ವಿಜ್ಞಾನಿಗಳು ಕಂಡುಕೊಂಡಿದ್ದಾರೆ.

ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಹೇಗೆಲ್ಲಾ ಪೋಸ್ಟ್ ಗಳನ್ನು ಹಾಕುತ್ತಾರೆ ಎಂಬುದರ ಆಧಾರದಲ್ಲಿ ಶೈಕ್ಷಣಿಕ ಪ್ರಗತಿಯನ್ನೂ ಅಳೆಯಲಾಗುತ್ತದೆ. ಮ್ಯಾಥಮೆಟಕಲ್ ಟೆಕ್ಚ್ಯುಯಲ್ ಅನಾಲಿಸಿಸ್ ನ್ನು ಬಳಸಿಕೊಂಡು ಪೋಸ್ಟ್ ಗಳಲ್ಲಿನ ಶಬ್ದಕೋಶಗಳನ್ನು ದಾಖಲಿಸಿ, ಪ್ರತಿಯೊಂದು ಪದ, ಚಿಹ್ನೆ, ಪೋಸ್ಟ್ ನ ಉದ್ದ ಹಾಗೂ ಪದಗಳ ರಚನೆಯನ್ನು ವಿಶ್ಲೇಷಿಸಿ ಮಕ್ಕಳ ಬುದ್ಧಿವಂತಿಕೆ ಹಾಗೂ ಪ್ರಗತಿಯನ್ನು ಅಂದಾಜಿಸಬಹುದಾಗಿದೆ.

ವೈಜ್ಞಾನಿಕ ಮತ್ತು ಸಾಂಸ್ಕೃತಿಕ ವಿಷಯಗಳು, ಆಂಗ್ಲ ಪದ ಹಾಗೂ ಶಬ್ದಗಳು ಹಾಗೂ ಈ ಕುರಿತು ಹೆಚ್ಚಿನ ಮಾಹಿತಿಯುಳ್ಳಾ ಪೋಸ್ಟ್ ಗಳಿದ್ದರೆ ಆ ಮಗು/ ವಿದ್ಯಾರ್ಥಿ ಶಿಕ್ಷಣದಲ್ಲಿ ಪ್ರಗತಿ ಹೊಂದಿದೆ ಎಂದು ನಿರ್ಧರಿಸಲಾಗುತ್ತದೆ ಎಂದು ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್ ಆಫ್ ಹೈಯರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿ ಮಾಸ್ಕೋದ ಸಂಶೋಧಕರಾದ ಇವಾನ್ ಸ್ಮಿರ್ನೋವ್ ಹೇಳಿದ್ದಾರೆ.

ರಷ್ಯಾದ 42 ಪ್ರದೇಶಗಳಲ್ಲಿ 4,400 ವಿದ್ಯಾರ್ಥಿಗಳ ವೃತ್ತಿ ಭವಿಷ್ಯವನ್ನು ಈ ವಿಧಾನದ ಮೂಲಕ ಅಂದಾಜಿಸುವ ಪ್ರಯತ್ನ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT