ಸಂಗ್ರಹ ಚಿತ್ರ 
ವಿಜ್ಞಾನ-ತಂತ್ರಜ್ಞಾನ

ಖಗೋಳ ವಿಸ್ಮಯ: ಆಗಸದಲ್ಲಿಂದು ಮಂಗಳ ಗ್ರಹಣ!

ಖಗೋಳದಲ್ಲಿ ಸೂರ್ಯಗ್ರಹಣ, ಚಂದ್ರಗ್ರಹಣಗಳು ಸಂಭವಿಸುವುದನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಆದರೆ ನಾಳೆ ನಡೆಯಲಿರುವುದು ಸೂರ್ಯಗ್ರಹಣವೂ ಅಲ್ಲ, ಚಂದ್ರಗ್ರಹಣವೂ ಅಲ್ಲ, ಬದಲಾಗಿ ಮಂಗಳನ ಮೇಲೆ ಚಂದ್ರನ ನೆರಳು ಬೀಳುವ ಮೂಲಕ ಉಂಟಾಗುವ ಮಂಗಳ ಗ್ರಹಣ.

ಉಡುಪಿ: ಖಗೋಳದಲ್ಲಿ ನಡೆಯುವ ವಿಸ್ಮಯದ ವಿದ್ಯಮಾನಗಳು ಹಲವು. ಅವುಗಳ ಪೈಕಿ ಸೂರ್ಯಗ್ರಹಣ, ಚಂದ್ರಗ್ರಹಣಗಳು ಸಂಭವಿಸುವುದನ್ನು ನಾವು ನೋಡಿದ್ದೇವೆ, ಕೇಳಿದ್ದೇವೆ. ಆದರೆ ನಾಳೆ ನಡೆಯಲಿರುವುದು ಸೂರ್ಯಗ್ರಹಣವೂ ಅಲ್ಲ, ಚಂದ್ರಗ್ರಹಣವೂ ಅಲ್ಲ, ಬದಲಾಗಿ ಮಂಗಳನ ಮೇಲೆ ಚಂದ್ರನ ನೆರಳು ಬೀಳುವ ಮೂಲಕ ಉಂಟಾಗುವ ಮಂಗಳ ಗ್ರಹಣ.

ಇಂದು ಸಂಜೆ 5 ಗಂಟೆಯಿಂದ ಅಕಾಶದಲ್ಲಿ ಮಂಗಳ ಗ್ರಹಣ ಸಂಭವಿಸಲಿದೆ. ಕಳೆದ ಕೆಲವು ತಿಂಗಳುಗಳಿಂದ ಈ ವಿದ್ಯಾಮಾನ ಸಂಭವಿಸುತ್ತಿದ್ದರೂ, ಭಾರತೀಯರಿಗೆ ಅದನ್ನು ವೀಕ್ಷಿಸಲು ಸಾಧ್ಯವಾಗಿರಲಿಲ್ಲ. ಇಂದು ಆ ಅವಕಾಶ ಲಭ್ಯವಾಗಲಿದೆ ಎಂದು ಉಡುಪಿಯ ಪೂರ್ಣಪ್ರಜ್ಞ ಹವ್ಯಾಸಿ ಖಗೋಳ ವೀಕ್ಷಕರ ಸಂಘದ ಅತುಲ್ ಭಟ್ ಮಾಹಿತಿ ನತೀಡಿದ್ದಾರೆ. 

ಸಂಜೆ 5ರ ಸುಮಾರಿಗೆ ಅಕಾಶವನ್ನು ಗಮನಿಸಿದರೆ, ಚಂದ್ರನಿಗೆ ಬಹಳ ಹತ್ತಿರದಲ್ಲಿ ಹೊಳೆಯುವ ಒಂದು ಸಣ್ಣ ಚುಕ್ತಿಯಂತೆ ಮಂಗಳಗ್ರಹ ಅಥವಾ ಕೆಂಪು ಗ್ರಹ ಕಾಣುತ್ತದೆ. 

ನಂತರ ಕೆಲವೇ ನಿಮಿಷಘಳಲ್ಲಿ ಈ ಗ್ರಹ ಅಲ್ಲಿಂದ ಮಾಯವಾಗಲಿದೆ. ಅಂದರೆ ಮಂಗಳಗ್ರಹ ಮತ್ತು ಭೂಮಿಯ ನಡುವೆ ಬರಲಿದ್ದು, ಸುಮಾರು 1.30 ಗಂಟೆಗಳ ಕಾಲ ಮಂಗಳ ಗ್ರಹ ಚಂದ್ರನ ಹಿಂದೆ ಮರೆಯಾಗುತ್ತದೆ. ಇದೇ ಮಂಗಳ ಗ್ರಹಣವಾಗಿದೆ. 

ಕಳೆದ ಕೆಲವು ತಿಂಗಳುಗಳಲ್ಲಿ ಮಂಗಳವು ಚಂದ್ರನ ಹಿಂದೆ ಮರೆಯಾಗುವ ವಿದ್ಯಾಮಾನ ನಡೆಯುತ್ತಿದೆ. ಆದರೆ, ಅದು ಭೂಮಿಯ ಕೆಲವೇ ಭಾಗಗಳಲ್ಲಿ ಗೋಚರಿಸುತ್ತಿದೆ. ಈ ತಿಂಗಳು ಭಾರತದಲ್ಲಿ ಗೋಚರಿಸುತ್ತದೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಂಜೆ 5.08ರ ಸುಮಾರಿಗೆ ಮಂಗಳ ಗ್ರಹಣವು ಕಾಣಿಸುತ್ತದೆ. ಸಂಜೆ 6.55ರ ಸುಮಾರಿಗೆ ಮಂಗಳ ಗ್ರಹವು ಚಂದ್ರನ ಇನ್ನೊಂದು ಭಾಗದಿಂದ ಹೊರಗೆ ಬಂದು ಗ್ರಹಣವು ಪೂರ್ಣಗೊಳ್ಳುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT