ಸಾಂದರ್ಭಿಕ ಚಿತ್ರ 
ವಿಜ್ಞಾನ-ತಂತ್ರಜ್ಞಾನ

ನ.19ಕ್ಕೆ ಈ ಶತಮಾನದ ಸುದೀರ್ಘ ಚಂದ್ರಗ್ರಹಣ: ಎಲ್ಲೆಲ್ಲಿ ಗೋಚರಿಸಲಿದೆ!

ಬಾಹ್ಯಾಕಾಶ ಜಗತ್ತಿನಲ್ಲಿ ಆಸಕ್ತಿ ಹೊಂದಿರುವವರಿಗೆ ಒಂದು ಒಳ್ಳೆಯ ಸುದ್ದಿಯೊಂದಿದೆ. ಅದೇನಂದರೆ ನವೆಂಬರ್ 19 ರಂದು ಚಂದ್ರಗ್ರಹಣವಿದ್ದು ಈ ಚಂದ್ರಗ್ರಹಣ ಈ ಶತಮಾನದ ಸುದೀರ್ಘ ಚಂದ್ರಗ್ರಹಣವಾಗಿದೆ.

ಬಾಹ್ಯಾಕಾಶ ಜಗತ್ತಿನಲ್ಲಿ ಆಸಕ್ತಿ ಹೊಂದಿರುವವರಿಗೆ ಒಂದು ಒಳ್ಳೆಯ ಸುದ್ದಿಯೊಂದಿದೆ.

ಅದೇನಂದರೆ ನವೆಂಬರ್ 19 ರಂದು ಚಂದ್ರಗ್ರಹಣವಿದ್ದು ಈ ಚಂದ್ರಗ್ರಹಣ ಈ ಶತಮಾನದ ಸುದೀರ್ಘ ಚಂದ್ರಗ್ರಹಣವಾಗಿದೆ. ಅಂದ್ಹಾಗೆ ಈ ಚಂದ್ರಗ್ರಹಣ ಖಗೋಳಶಾಸ್ತ್ರಜ್ಞರಿಗೆ ಇದು ಉತ್ತಮ ಕ್ಷಣವಾಗಿದೆ.

ಇಂದಿನಿಂದ ಎರಡು ವಾರಗಳ ನಂತರ, ಭೂಮಿಯು ಸೂರ್ಯ ಮತ್ತು ಚಂದ್ರನ ನಡುವೆ ಹಾದುಹೋಗಿ ಚಂದ್ರನ ಮೇಲ್ಮೈಯಲ್ಲಿ ನೆರಳು ರೂಪಿತವಾಗುತ್ತದೆ.

ನಾಸಾ ಪ್ರಕಾರ, ಪೂರ್ಣ ಚಂದ್ರಗ್ರಹಣ (ಚಂದ್ರ ಗ್ರಹಣ 2021) ಮಧ್ಯಾಹ್ನ 1:30 ರ ನಂತರ ಉತ್ತುಂಗಕ್ಕೇರುತ್ತದೆ, ಆಗ ಭೂಮಿಯು 97 ಪ್ರತಿಶತದಷ್ಟು ಪೂರ್ಣ ಚಂದ್ರನನ್ನು ಸೂರ್ಯನ ಕಿರಣಗಳಿಂದ ಮರೆಮಾಡುತ್ತದೆ. ಇದು ಮೊದಲ ಬಾರಿಗೆ ಸಂಭವಿಸಲಿದೆ. ನವೆಂಬರ್ 19 ಕ್ಕೆ ಜನರು ಕಾತರದಿಂದ ಕಾಯುತ್ತಿದ್ದಾರೆ. ಈ ಅದ್ಭುತ ಆಕಾಶ ಘಟನೆಯ ಸಮಯದಲ್ಲಿ, ಚಂದ್ರನು ಕೆಂಪು ಬಣ್ಣಕ್ಕೆ ತಿರುಗುತ್ತಾನೆ.

ಶತಮಾನದ ಸುದೀರ್ಘ ಚಂದ್ರಗ್ರಹಣ ಜಗತ್ತಿನ ಹೊರತಾಗಿ ಭಾರತದ ಹಲವೆಡೆ ಚಂದ್ರಗ್ರಹಣ ಗೋಚರಿಸಲಿದೆ. ಮಾಹಿತಿಯ ಪ್ರಕಾರ, ಚಂದ್ರನು ದಿಗಂತದ ಮೇಲಿರುವ ಸ್ಥಳಗಳಲ್ಲಿ ಮಾತ್ರ ಚಂದ್ರಗ್ರಹಣ ಗೋಚರಿಸುತ್ತದೆ. ಅಸ್ಸಾಂ ಮತ್ತು ಅರುಣಾಚಲ ಪ್ರದೇಶ ಸೇರಿದಂತೆ ಭಾರತದ ಈಶಾನ್ಯ ರಾಜ್ಯಗಳ ಜನರು ಈ ಆಕಾಶ ವಿದ್ಯಮಾನವನ್ನು ವೀಕ್ಷಿಸಬಹುದು.

ಅಮೆರಿಕ ಮತ್ತು ಮೆಕ್ಸಿಕೋದ ಎಲ್ಲಾ 50 ರಾಜ್ಯಗಳಲ್ಲಿ ವಾಸಿಸುವ ಜನರು ಇದನ್ನು ನೋಡಲು ಸಾಧ್ಯವಾಗುತ್ತದೆ. ಇದು ಆಸ್ಟ್ರೇಲಿಯಾ, ಪೂರ್ವ ಏಷ್ಯಾ, ಉತ್ತರ ಯುರೋಪ್ ಮತ್ತು ಪೆಸಿಫಿಕ್ ಸಾಗರ ಪ್ರದೇಶದಲ್ಲಿಯೂ ಗೋಚರಿಸುತ್ತದೆ‌.ಈ ಅದ್ಭುತ ಕ್ಷಣಕ್ಕಾಗಿ ನೀವೂ ಕಾತರದಿಂದ ಕಾಯುತ್ತಿರುತ್ತೀರಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT