ಸಂಗ್ರಹ ಚಿತ್ರ 
ವಿಜ್ಞಾನ-ತಂತ್ರಜ್ಞಾನ

ಇಸ್ರೋ ಸೋಲಾರ್ ಮಿಶನ್: ಜನವರಿ 6ಕ್ಕೆ ಗಮ್ಯ ಸ್ಥಾನ ತಲುಪಲಿದೆ ಆದಿತ್ಯ ಎಲ್​1

ಭಾರತದ ಚೊಚ್ಚಲ ಸೌರ ಮಿಷನ್ ಆದಿತ್ಯ-ಎಲ್ 1 ತನ್ನ ಗಮ್ಯಸ್ಥಾನವನ್ನು, ಭೂಮಿಯಿಂದ 1.5 ಮಿಲಿಯನ್ ಕಿಮೀ ದೂರದಲ್ಲಿರುವ ಲಗ್ರಾಂಜಿಯನ್ ಪಾಯಿಂಟ್ (ಎಲ್ 1) ಅನ್ನು ಜನವರಿ 6 ರಂದು ತಲುಪಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಎಸ್ ಸೋಮನಾಥ್ ಅವರು ಶನಿವಾರ ಹೇಳಿದ್ದಾರೆ.

ಅಹಮದಾಬಾದ್: ಭಾರತದ ಚೊಚ್ಚಲ ಸೌರ ಮಿಷನ್ ಆದಿತ್ಯ-ಎಲ್ 1 ತನ್ನ ಗಮ್ಯಸ್ಥಾನವನ್ನು, ಭೂಮಿಯಿಂದ 1.5 ಮಿಲಿಯನ್ ಕಿಮೀ ದೂರದಲ್ಲಿರುವ ಲಗ್ರಾಂಜಿಯನ್ ಪಾಯಿಂಟ್ (ಎಲ್ 1) ಅನ್ನು ಜನವರಿ 6 ರಂದು ತಲುಪಲಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಅಧ್ಯಕ್ಷ ಎಸ್ ಸೋಮನಾಥ್ ಅವರು ಶನಿವಾರ ಹೇಳಿದ್ದಾರೆ.

ವಿಜ್ಞಾನ ಭಾರತಿ ಎಂಬ ಸ್ವಯಂ ಸೇವಾ ಸಂಸ್ಥೆ ಆಯೋಜಿಸಿದ್ದ ಭಾರತೀಯ ವಿಜ್ಞಾನ ಸಮ್ಮೇಳದಲ್ಲಿ ಈ ಕುರಿತು ಅವರು ಸೋಮನಾಥ್  ಮಾಹಿತಿ ನೀಡಿದರು.

ಸೂರ್ಯನ ಸಮಗ್ರ ಅಧ್ಯಯನಕ್ಕೆ ಇಸ್ರೋ ಆದಿತ್ಯ ಎಲ್1 ನೌಕೆಯನ್ನು ಸೆಪ್ಟೆಂಬರ್​ 2ರಂದು ಶ್ರೀಹರಿಕೋಟದಿಂದ ಉಡಾವಣೆ ಮಾಡಿತ್ತು. ಆದಿತ್ಯ-ಎಲ್​1 ಜನವರಿ 6ರಂದು ಎಲ್​1 ಪಾಯಿಂಟ್​​ ಪ್ರವೇಶಿಸಲಿದೆ. ಅದರ ಕುರಿತಂತೆ ನಿಖರ ಸಮಯವನ್ನು ಪ್ರಕಟಿಸಲಾಗುವುದು ಎಂದು ಹೇಳಿದರು.

ನೌಕೆ ಎಲ್​1 ಬಿಂದು ತಲುಪುತ್ತಿದ್ದಂತೆ ನಾವು ಮತ್ತೊಮ್ಮೆ ಇಂಜಿನ್​ ಅನ್ನು ಹೊತ್ತಿಸುತ್ತೇವೆ. ಮತ್ತೆ ಅದು ಎಲ್ಲಿಗೂ ಹೋಗಬಾರದೆಂದು ಹೀಗೆ ಮಾಡಲಾಗುತ್ತದೆ. ಇದು ಬಿಂದುವಿನ ಸ್ಥಾನಕ್ಕೆ ಹೋಗಲಿದ್ದು, ಒಮ್ಮೆ ಇದು ನಿರ್ದಿಷ್ಟ ಬಿಂದುವಿನ ಸ್ಥಳಕ್ಕೆ ತಲುಪಿದರೆ, ಅದರ ಸುತ್ತ ನೌಕೆಯು ಸುತ್ತಲಿದೆ ಎಂದು ತಿಳಿಸಿದರು.

ಆದಿತ್ಯ ಎಲ್​1 ತನ್ನ ನಿಗದಿತ ಸ್ಥಾನವನ್ನು ಒಮ್ಮೆ ತಲುಪಿದರೆ, ಮುಂದಿನ ಐದು ವರ್ಷ ಸೂರ್ಯನಲ್ಲಿ ಏನೆಲ್ಲಾ ಘಟನೆಗಳು ನಡೆಯಲಿದೆ ಎಂದು ಮಾಪನ ಮಾಡಲು ಸಹಾಯವಾಗಲಿದೆ. ನಿಗದಿತ ಸ್ಥಳಕ್ಕೆ ತಲುಪಿದರೆ, ಮುಂದಿನ ಐದು ವರ್ಷ ಅಲ್ಲಿಯೇ ಸ್ಥಿರವಾಗಿ ಇರಲಿದೆ. ಕೇವಲ ಭಾರತಕ್ಕೆ ಮಾತ್ರವಲ್ಲದೇ, ಜಗತ್ತಿಗೆ ಬೇಕಾದ ಎಲ್ಲಾ ದತ್ತಾಂಶಗಳನ್ನು ಸಂಗ್ರಹಿಸಲಿದೆ. ಈ ದತ್ತಾಂಶವೂ ಸೂರ್ಯನ ಡೈನಾಮಿಕ್ಸ್​ ಮತ್ತು ಅದು ನಮ್ಮ ಜೀವನದ ಮೇಲೆ ಬೀರುವ ಪರಿಣಾಮ ಅರಿಯಲು ಸಹಕಾರಿಯಾಗಲಿದೆ. ಈ ಮೂಲಕ ಭಾರತವು ಹೇಗೆ ತಾಂತ್ರಿಕವಾಗಿ ಶಕ್ತಿಶಾಲಿಯಾಗುತ್ತಿದೆ ಎಂಬುದು ತಿಳಿಯಲಿದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಸೂಚನೆಯಂತೆ ಅಮೃತ ಕಾಲದ ಸಮಯದಲ್ಲಿ 'ಭಾರತೀಯ ಬಾಹ್ಯಾಕಾಶ ನಿಲ್ದಾಣ' ನಿರ್ಮಿಸಲು ಇಸ್ರೋ ಯೋಜನೆ ರೂಪಿಸಿದೆ. ಭಾರತವು ಎಲ್ಲದರಲ್ಲೂ ನಾಯಕನಾಗಲು ಸಾಧ್ಯವಿಲ್ಲ. ಆದರೆ, ಸಾಧ್ಯವಿರುವ ಕ್ಷೇತ್ರಗಳ ಮೇಲೆ ನಾವು ಗಮನಹರಿಸಬೇಕು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT