ಆದಿತ್ಯ ಎಲ್-1 
ವಿಜ್ಞಾನ-ತಂತ್ರಜ್ಞಾನ

ಆದಿತ್ಯ ಎಲ್ 1 ಅಂತಿಮ ಹಂತಕ್ಕೆ ಸಮೀಪದಲ್ಲಿದೆ: ಇಸ್ರೊ ಮುಖ್ಯಸ್ಥ ಎಸ್ ಸೋಮನಾಥ್

ಸೂರ್ಯನ ಕುರಿತು ಅಧ್ಯಯನ ಮಾಡುವ ಭಾರತದ ಮೊದಲ ಬಾಹ್ಯಾಕಾಶ-ಆಧಾರಿತ ಕಾರ್ಯಾಚರಣೆ ಆದಿತ್ಯ ಎಲ್1 (Aditya L1) ಬಾಹ್ಯಾಕಾಶ ನೌಕೆಯು ಅಂತಿಮ ಹಂತಕ್ಕೆ ಸಮೀಪದಲ್ಲಿದೆ.

ಬೆಂಗಳೂರು: ಸೂರ್ಯನ ಕುರಿತು ಅಧ್ಯಯನ ಮಾಡುವ ಭಾರತದ ಮೊದಲ ಬಾಹ್ಯಾಕಾಶ-ಆಧಾರಿತ ಕಾರ್ಯಾಚರಣೆ ಆದಿತ್ಯ ಎಲ್1 (Aditya L1) ಬಾಹ್ಯಾಕಾಶ ನೌಕೆಯು ಅಂತಿಮ ಹಂತಕ್ಕೆ ಸಮೀಪದಲ್ಲಿದೆ. ಎಲ್ 1 ಬಿಂದುವಿಗೆ ಪ್ರವೇಶಿಸಿ ಜನವರಿ 7, 2024 ರ ವೇಳೆಗೆ ಪಯಣ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಇಸ್ರೋ ಅಧ್ಯಕ್ಷ ಎಸ್ ಸೋಮನಾಥ್ ತಿಳಿಸಿದ್ದಾರೆ.  

ಫಸ್ಟ್ ಸೌಂಡಿಂಗ್ ರಾಕೆಟ್ ಲಾಂಚ್ ನ 60 ನೇ ವರ್ಷದ ಸ್ಮರಣಾರ್ಥ ವಿಎಸ್‌ಎಸ್‌ಸಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದ ಹೊರಗೆ ಸುದ್ದಿಗಾರರ ಜೊತೆ ಮಾತನಾಡಿದ ಇಸ್ರೋ ಅಧ್ಯಕ್ಷ ಸೋಮನಾಥ್ ಅವರು, ಪಿಟಿಐ ಸುದ್ದಿಸಂಸ್ಥೆ ಪ್ರತಿನಿಧಿಯೊಂದಿಗೆ ಮಾತನಾಡಿ, ಆದಿತ್ಯ ಎಲ್ 1 ಪಯಣ ಹಾದಿ ಸುಗಮವಾಗಿದೆ. ಬಹುತೇಕ ಅಂತಿಮ ಹಂತವನ್ನು ತಲುಪಿದೆ ಎಂದು ಭಾವಿಸುತ್ತೇವೆ ಎಂದರು. 

ಎಲ್ 1 ಪಾಯಿಂಟ್‌ಗೆ ಬಾಹ್ಯಾಕಾಶ ನೌಕೆಯ ಪ್ರವೇಶದ ಕೊನೆಯ ಸಿದ್ಧತೆಗಳು ಪ್ರಸ್ತುತ ಹಂತಹಂತವಾಗಿ ಸಾಗುತ್ತಿದೆ. ಬಹುಶಃ ಜನವರಿ 7 ರ ವೇಳೆಗೆ, ಎಲ್ 1 ಪಾಯಿಂಟ್‌ಗೆ ಪ್ರವೇಶಿಸಲು ಅಂತಿಮ ಕಾರ್ಯಾಚರಣೆ ನಡೆಯುತ್ತದೆ ಎಂದು ಅಂದುಕೊಂಡಿದ್ದೇವೆ ಎಂದರು. 

ಆದಿತ್ಯ ಎಲ್ 1ನ್ನು ಕಳೆದ ಸೆಪ್ಟೆಂಬರ್ 2 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ (SDSC) ಯಶಸ್ವಿಯಾಗಿ ಉಡಾವಣೆ ಮಾಡಲಾಯಿತು. ಬಾಹ್ಯಾಕಾಶ ನೌಕೆಯು ಭೂಮಿಯಿಂದ 125 ದಿನಗಳಲ್ಲಿ ಸುಮಾರು 1.5 ಮಿಲಿಯನ್ ಕಿಮೀ ಪ್ರಯಾಣಿಸಿದ ನಂತರ, ಸೂರ್ಯನಿಗೆ ಹತ್ತಿರವಿರುವ ಲಗ್ರಾಂಜಿಯನ್ ಪಾಯಿಂಟ್ ಎಲ್1 ಸುತ್ತ ಹಾಲೋ ಕಕ್ಷೆಯಲ್ಲಿ ಇರಿಸಲಾಗುವುದು ಎಂದು ಅಂದಾಜಿಸಲಾಗಿದೆ. 

ಆದಿತ್ಯ ಎಲ್ 1 ವೈಜ್ಞಾನಿಕ ಪ್ರಯೋಗಗಳಿಗೆ ಸೂರ್ಯನ ಚಿತ್ರಗಳನ್ನು ಸೆರೆಹಿಡಿದು ರವಾನಿಸುತ್ತದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!

ನೇಪಾಳದಲ್ಲಿ ಭೀಕರ ಪ್ರವಾಹ: ಬಿಹಾರ, ಉತ್ತರ ಪ್ರದೇಶದಲ್ಲಿ NDRF ಹೈ ಅಲರ್ಟ್; ನದಿ ಪಾತ್ರದಲ್ಲಿ ಕಟ್ಟೆಚ್ಚರ