ಇಸ್ರೊ ಕೇಂದ್ರಕ್ಕೆ ಭೇಟಿ ನೀಡಲಿರುವ ನಾಸಾ ಮುಖ್ಯಸ್ಥ 
ವಿಜ್ಞಾನ-ತಂತ್ರಜ್ಞಾನ

ನಾಸಾ ಮುಖ್ಯಸ್ಥರು ಇಂದು ಇಸ್ರೊ ಕೇಂದ್ರಕ್ಕೆ ಭೇಟಿ: ಸಾಥ್ ನೀಡಲಿದ್ದಾರೆ ಭಾರತದ ಮೊದಲ ಗಗನಯಾತ್ರಿ ರಾಕೇಶ್ ಶರ್ಮ

ನಾಸಾ ನಿರ್ವಾಹಕ ಬಿಲ್ ನೆಲ್ಸನ್ ಅವರು ಇಂದು ಗುರುವಾರ ಇಸ್ರೊ ಕೇಂದ್ರಕ್ಕೆ ಭೇಟಿ ನೀಡಲಿದ್ದು, ಕಡಿಮೆ ಭೂ ಕಕ್ಷೆಯ  ವೀಕ್ಷಣಾಲಯವಾದ NISAR ನ್ನು ವೀಕ್ಷಿಸಲಿದ್ದಾರೆ. ಇವರೊಂದಿಗೆ ಭಾರತದ ಮೊದಲ ಗಗನಯಾತ್ರಿ ರಾಕೇಶ್ ಶರ್ಮಾ ಕೂಡ ಇರಲಿದ್ದಾರೆ.

ಬೆಂಗಳೂರು: ನಾಸಾ ನಿರ್ವಾಹಕ ಬಿಲ್ ನೆಲ್ಸನ್ ಅವರು ಇಂದು ಗುರುವಾರ ಇಸ್ರೊ ಕೇಂದ್ರಕ್ಕೆ ಭೇಟಿ ನೀಡಲಿದ್ದು, ಕಡಿಮೆ ಭೂ ಕಕ್ಷೆಯ  ವೀಕ್ಷಣಾಲಯವಾದ NISAR ನ್ನು ವೀಕ್ಷಿಸಲಿದ್ದಾರೆ. ಇವರೊಂದಿಗೆ ಭಾರತದ ಮೊದಲ ಗಗನಯಾತ್ರಿ ರಾಕೇಶ್ ಶರ್ಮಾ ಕೂಡ ಇರಲಿದ್ದಾರೆ.

ನೆಲ್ಸನ್ ಬೆಂಗಳೂರಿನಲ್ಲಿರುವ ಯುಆರ್ ರಾವ್ ಉಪಗ್ರಹ ಕೇಂದ್ರಕ್ಕೆ (URSC) ಭೇಟಿ ನೀಡಲಿದ್ದಾರೆ, ಅಲ್ಲಿ ನಾಸಾ-ಇಸ್ರೋ ಸಿಂಥೆಟಿಕ್ ಅಪರ್ಚರ್ ರಾಡಾರ್ (NISAR) ಉಪಗ್ರಹವು 2024 ರಲ್ಲಿ ನಿಗದಿತ ಉಡಾವಣೆಗೂ ಮುನ್ನ ಪರೀಕ್ಷೆಗೆ ಒಳಗಾಗುತ್ತಿದೆ.

ನಿನ್ನೆ ಭಾರತಕ್ಕೆ ಆಗಮಿಸಿರುವ ನಾಸಾ ಮುಖ್ಯಸ್ಥರು ಬೆಂಗಳೂರಿನ ವಿಶ್ವೇಶ್ವರಯ್ಯ ಇಂಡಸ್ಟ್ರಿಯಲ್ ಮತ್ತು ಟೆಕ್ನಾಲಜಿಕಲ್ ಮ್ಯೂಸಿಯಂ (ವಿಐಟಿಎಂ) ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. 2024 ರಲ್ಲಿ ಉಡಾವಣೆ ಮಾಡಲು ಯೋಜಿಸಿರುವ ಮುಂಬರುವ ಜಂಟಿ NISAR ಮಿಷನ್ ಹೇಗೆ ಬಾಹ್ಯಾಕಾಶದಲ್ಲಿ ಅಮೆರಿಕ ಮತ್ತು ಭಾರತದ ಪಾಲುದಾರಿಕೆಯು ಭೂಮಿಯ ಮೇಲಿನ ಜನರಿಗೆ ಹೇಗೆ ಸಹಾಯ ಮಾಡಲಿದೆ ಎಂದು ಉದಾಹರಣೆ ಸಹಿತ ವಿವರಿಸಿದರು.

ನಿಸಾರ್ ಅಂಕಿಅಂಶಗಳು ಪ್ರಪಂಚದಾದ್ಯಂತದ ಜನರಿಗೆ ನೈಸರ್ಗಿಕ ಸಂಪನ್ಮೂಲಗಳು ಮತ್ತು ಅಪಾಯಗಳನ್ನು ಉತ್ತಮವಾಗಿ ನಿರ್ವಹಿಸಲು ಸಹಾಯ ಮಾಡುತ್ತದೆ, ಜೊತೆಗೆ ಹವಾಮಾನ ಬದಲಾವಣೆಯ ಪರಿಣಾಮಗಳು ಮತ್ತು ವೇಗವನ್ನು ಚೆನ್ನಾಗಿ ಅರ್ಥಮಾಡಿಕೊಳ್ಳಲು ವಿಜ್ಞಾನಿಗಳಿಗೆ ಮಾಹಿತಿಯನ್ನು ಒದಗಿಸುತ್ತದೆ.

2024 ರ ಅಂತ್ಯದ ವೇಳೆಗೆ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ISS) ಭಾರತೀಯ ಗಗನಯಾತ್ರಿಗಳಿಗೆ ತರಬೇತಿ ನೀಡಲು ಮತ್ತು ಕಳುಹಿಸಲು ಅಮೆರಿಕ ಸಹಾಯ ಮಾಡುತ್ತದೆ ಎಂದು ನೆಲ್ಸನ್ ಘೋಷಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT