ಸೂರ್ಯ ಗ್ರಹಣ 
ವಿಜ್ಞಾನ-ತಂತ್ರಜ್ಞಾನ

Solar Eclipse; ನಾಳೆ ವರ್ಷದ ಮೊದಲ ಸೂರ್ಯ ಗ್ರಹಣ: ಎಲ್ಲಿ, ಯಾವಾಗ ಗೋಚರ? ಇಲ್ಲಿದೆ ಮಾಹಿತಿ

2024 ವರ್ಷದ ಮೊದಲ ಸೂರ್ಯಗ್ರಹಣ ನಾಳೆ ಅಂದರೆ ಏಪ್ರಿಲ್ 8 ಸೋಮವಾರ ಸಂಭವಿಸುತ್ತಿದ್ದು, ಭಾರತದಲ್ಲಿ ಈ ಗ್ರಹಣ ಗೋಚರವಾಗುತ್ತಿಲ್ಲ ಎಂದು ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ.

ನವದೆಹಲಿ: 2024 ವರ್ಷದ ಮೊದಲ ಸೂರ್ಯಗ್ರಹಣ ನಾಳೆ ಅಂದರೆ ಏಪ್ರಿಲ್ 8 ಸೋಮವಾರ ಸಂಭವಿಸುತ್ತಿದ್ದು, ಭಾರತದಲ್ಲಿ ಈ ಗ್ರಹಣ ಗೋಚರವಾಗುತ್ತಿಲ್ಲ ಎಂದು ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ.

ಚಂದ್ರನ ನೆರಳು ಪೂರ್ತಿಯಾಗಿ ಸೂರ್ಯನ ಮೇಲೆ ಬಿದ್ದಾಗ ಸಂಪೂರ್ಣ ಸೂರ್ಯಗ್ರಹಣ ಸಂಭವಿಸುತ್ತದೆ. ಇದರ ಪರಿಣಾಮವಾಗಿ ಸೂರ್ಯನ ಬೆಳಕು ಭೂಮಿಯ ಮೇಲೆ ಬೀಳುವುದನ್ನು ತಡೆಯುತ್ತದೆ. ಚಂದ್ರನ ನೆರಳು ಭೂಮಿಯ ಮೇಲ್ಮೈಯಲ್ಲಿ ವೇಗವಾಗಿ ಚಲಿಸುವಾಗ ಸೂರ್ಯಗ್ರಹಣ ಗೋಚರವಾಗುತ್ತದೆ. ಸೂರ್ಯನ ಹೊರ ಪದರ ಚಂದ್ರನ ಮೇಲೆ ಸುತ್ತುವರಿದು ಸುಂದರವಾದ ಪ್ರಭಾವಲಯದಂತೆ ಹೊಳೆಯುತ್ತದೆ. ಇದು ನಿರ್ದಿಷ್ಟ ಅವಧಿಯವರೆಗೆ ಮಾತ್ರ ಸಂಭವಿಸುತ್ತದೆ.

ಎಲ್ಲೆಲ್ಲಿ ಗ್ರಹಣ ಗೋಚರ?

ಈ ಬಾರಿ ಸೂರ್ಯಗ್ರಹಣವು ಉತ್ತರ ಅಮೆರಿಕ (north america) ಖಂಡದಾದ್ಯಂತ ಕಾಣಿಸುತ್ತಿದ್ದು, ಮೆಕ್ಸಿಕೋ (Mexico), ಯುನೈಟೆಡ್ ಸ್ಟೇಟ್ಸ್ (United States) ಮತ್ತು ಕೆನಡಾದಲ್ಲಿ (Canada) ಸ್ಥಳೀಯ ಕಾಲಮಾನ ಬೆಳಗ್ಗೆ 11.07ರ ಸುಮಾರಿಗೆ ಸೂರ್ಯಗ್ರಹಣ ಪ್ರಾರಂಭವಾಗಲಿದೆ.

ಪೆಸಿಫಿಕ್ ಕರಾವಳಿಯ ಪ್ರದೇಶದ ಮೆಕ್ಸಿಕೋದಲ್ಲಿ ಮೊದಲು ಸೂರ್ಯಗ್ರಹಣ ಗೋಚರವಾಗಲಿದೆ. ಅಲ್ಲದೆ ಟೆಕ್ಸಾಸ್, ಒಕ್ಲಹೋಮ, ಅರ್ಕಾನ್ಸಾಸ್, ಮಿಸೌರಿ, ಇಲಿನಾಯ್ಸ್, ಕೆಂಟುಕಿ, ಇಂಡಿಯಾನಾ, ಓಹಿಯೋ, ಪೆನ್ಸಿಲ್ವೇನಿಯಾ, ನ್ಯೂಯಾರ್ಕ್, ವರ್ಮೊಂಟ್, ನ್ಯೂ ಹ್ಯಾಂಪ್‌ಶೈರ್ ಮತ್ತು ಮೈನೆ ಮೊದಲಾದ ರಾಜ್ಯಗಳಲ್ಲಿ ಸಂಪೂರ್ಣ ಸೂರ್ಯಗ್ರಹಣ ಗೋಚರವಾಗುವುದು.

ಟೆಕ್ಸಾಸ್‌ನಲ್ಲಿ ಆರಂಭವಾಗಿ ಮೆಕ್ಸಿಕೋ, ಯುಕಾಟಾನ್ ಪೆನಿನ್ಸುಲಾ, ಗ್ವಾಟೆಮಾಲಾ, ಹೊಂಡಾರುಸ್, ನಿಕರಾಗುವಾ, ಕೋಸ್ಟರಿಕಾದಲ್ಲಿ ಗೋಚರಿಸಿತ್ತು. ಪನಾಮ, ಮಧ್ಯ ಅಮೆರಿಕ, ಉತ್ತರ ಅಮೆರಿಕ, ಕೊಲಂಬಿಯಾ ಮತ್ತು ಬ್ರೆಜಿಲ್‌ನಲ್ಲೂ ಗೋಚರಿಸುವುದರ ಜತೆಗೆ ಅಲಾಸ್ಕಾ ಮತ್ತು ಅರ್ಜೆಂಟೀನಾದಲ್ಲೂ ಗ್ರಹಣ ಸಂಭವಿಸಿತ್ತು. ಹೀಗಾಗಿ ಈ ಭಾಗದಲ್ಲಿ ಮಾತ್ರ ಗ್ರಹಣ ಪರಿಣಾಮ ಉಂಟಾಗಿದೆ. ಭಾರತದಲ್ಲಿ ಇದರ ಪರಿಣಾಮ ಇರುವುದಿಲ್ಲ.

ಭಾರತದಲ್ಲಿ ಗೋಚರ ಇಲ್ಲ

ಈ ಬಾರಿ ಸೂರ್ಯಗ್ರಹಣವು ಭಾರತದಲ್ಲಿ ಗೋಚರವಾಗುವುದಿಲ್ಲ. ಯಾಕೆಂದರೆ ಸೂರ್ಯಗ್ರಹಣ ಸಂಭವಿಸಿದಾಗ ಭಾರತದಲ್ಲಿ ಮಧ್ಯರಾತ್ರಿಯಾಗಿರುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT