ಗಗನಯಾತ್ರಿಗಳು 
ವಿಜ್ಞಾನ-ತಂತ್ರಜ್ಞಾನ

Axiom 4 mission: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನಕ್ಕೆ ಕೊನೆಗೂ ದಿನಾಂಕ ಫಿಕ್ಸ್; ಜೂನ್ 25ಕ್ಕೆ ಉಡಾವಣೆ

ಜೂನ್ 25ರಂದು ಆಕ್ಸಿಯಮ್-4 ಮಿಷನ್ ಉಡಾವಣೆ ಮಾಡಲಾಗುವುದು ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ತಿಳಿಸಿದೆ.

ಬೆಂಗಳೂರು: ಭಾರತದ ಬಾಹ್ಯಾಕಾಶ ಯಾನದಲ್ಲಿ ಒಂದು ದೊಡ್ಡ ಮತ್ತು ಐತಿಹಾಸಿಕ ದಿನ ಕೊನೆಗೂ ಹತ್ತಿರ ಬಂದಿದ್ದು, ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅವರು ಬುಧವಾರ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಲಿದ್ದಾರೆ.

ಜೂನ್ 25ರಂದು ಆಕ್ಸಿಯಮ್-4 ಮಿಷನ್ ಉಡಾವಣೆ ಮಾಡಲಾಗುವುದು ಎಂದು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ತಿಳಿಸಿದೆ.

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ನೇತೃತ್ವದ‌ ಆಕ್ಸಿಯಮ್‌-4 ಬಾಹ್ಯಾಕಾಶ ಯೋಜನೆ ಜೂನ್ 25 ರಂದು ಉಡಾವಣೆಗೊಳ್ಳಲಿದೆ ಎಂದು ನಾಸಾ ಮತ್ತು ಸ್ಪೇಸ್‌ಎಕ್ಸ್‌ ಜಂಟಿಯಾಗಿ ಭರವಸೆ ನೀಡಿದೆ.

ತಾಂತ್ರಿಕ ತೊಂದರೆಗಳ ಕಾರಣಕ್ಕೆ ಈಗಾಗಲೇ ಹಲವು ಬಾರಿ ಮುಂದೂಡಲ್ಪಟ್ಟಿದ್ದ ಆಕ್ಸಿಯಮ್-‌4 ಬಾಹ್ಯಾಕಾಶ ಕಾರ್ಯಾಚರಣೆಯನ್ನು ಎಲ್ಲಾ ತಾಂತ್ರಿಕ ದೋಷಗಳನ್ನು ನಿವಾರಣೆ ಮಾಡಿದ ಬಳಿಕ ಕಾರ್ಯಾಚರಣೆಗೆ ಸಿದ್ಧಪಡಿಸಲಾಗಿದ್ದು, ಬುಧವಾರ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ತಿಳಿಸಿದೆ.

ಆ್ಯಕ್ಸಿಯಂ–4 ಮಿಷನ್ ಜೂನ್ 25 ರಂದು ಬೆಳಗಿನ ಜಾವ 2:31ಕ್ಕೆ ಫ್ಲೊರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್‌ಎಕ್ಸ್‌ನ ಫಾಲ್ಕನ್ 9 ರಾಕೆಟ್‌ ಹಾರಾಟ ನಡೆಸಲಿದೆ ಎಂದು ಎಂದು ನಾಸಾ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಕಾರ್ಯಾಚರಣೆಯ ನೇರಪ್ರಸಾರವನ್ನು ಉಡಾವಣೆಗೆ ಸುಮಾರು ಎರಡು ಗಂಟೆಗಳ ಮೊದಲು ಪ್ರಾರಂಭಿಸಲಾಗುತ್ತದೆ. ಇದನ್ನು @SpaceX ಹ್ಯಾಂಡಲ್‌ನಲ್ಲಿ X-ಪ್ಲಾಟ್‌ಫಾರ್ಮ್‌ನಲ್ಲಿ ವೀಕ್ಷಿಸಬಹುದಾಗಿದೆ.

‌ಕಮಾಂಡರ್ ಪೆಗ್ಗಿ ವಿಟ್ಸನ್ ಅವರು, ಆ್ಯಕ್ಸಿಯಂ–4 ವಾಣಿಜ್ಯ ಕಾರ್ಯಾಚರಣೆಯ ನೇತೃತ್ವವಹಿಸಿದ್ದು, ಶುಕ್ಲಾ ಮಿಷನ್ ಪೈಲಟ್ ಆಗಿ, ಹಂಗೇರಿಯನ್ ಗಗನಯಾತ್ರಿ ಟಿಬೋರ್ ಕಾಪು ಮತ್ತು ಪೋಲೆಂಡ್‌ನ ಸ್ಲಾವೋಸ್ಜ್ ಉಜ್ನಾನ್ಸ್ಕಿ-ವಿಸ್ನಿಯೆವ್ಸ್ಕಿ ಮಿಷನ್ ತಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್