ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಂದ ಪ್ರಶಸ್ತಿ ಸ್ವೀಕರಿಸುತ್ತಿರುವ ಸಂಸ್ಥೆಯ ನಿರ್ದೇಶಕರಲ್ಲೊಬ್ಬರಾದ ಕೆ ಮೊಹಮ್ಮದ್ ಹ್ಯಾರಿಸ್ 
ವಿಶೇಷ

ಮುಕ್ಕ ಸೀಫುಡ್ ಸಂಸ್ಥೆಗೆ ಜಾಗತಿಕ ಪ್ರಶಸ್ತಿ

ಮೀನು ಆಹಾರ ಅಂದ್ರೆ ಯಾರ ಬಾಯಲ್ಲಿ ನೀರೂರುವುದಿಲ್ಲ?

ಮಂಗಳೂರು: ಮೀನು ಆಹಾರ ಅಂದ್ರೆ ಯಾರ ಬಾಯಲ್ಲಿ ನೀರೂರುವುದಿಲ್ಲ? ಮೀನು ಎಣ್ಣೆ ಮತ್ತು ಮೀನು ಆಹಾರದಲ್ಲಿ ತಾಜಾತನ ಮತ್ತು ಗುಣಮಟ್ಟಕ್ಕೆ ಹೆಚ್ಚಿನ ಬೇಡಿಕೆ. ಇಂತಹ ಗುಣಮಟ್ಟದ ಮೀನು ಎಣ್ಣೆ ಮತ್ತು ಮೀನು ಆಹಾರವನ್ನು ರಫ್ತು ಮಾಡುವುದಕ್ಕಾಗಿ, ಮಂಗಳೂರಿನ ಮುಕ್ಕಾ ಸೀ ಫುಡ್ ಸಂಸ್ಥೆಗೆ ಜಾಗತಿಕ ಮನ್ನಣೆ ದೊರೆತಿದೆ. ಈ ಸಂಸ್ಥೆ ರಫ್ತು ಮಾಡುವ ಮೀನು ಮತ್ತು ಶೀತಲೀಕರಿಸಿದ ಹಾಗೂ ಸಂಸ್ಕರಿಸಿದ ಮೀನು ಉತ್ಪನ್ನಗಳನ್ನು ಪರೀಕ್ಷಿಸುವ ರಫ್ತು ಪರೀಕ್ಷಾ ಏಜೆನ್ಸಿಯಿಂದ (ಎಕ್ಸ್ಪೋರ್ಟ್ ಇನ್ಸ್ಪೆಕ್ಷನ್ ಏಜೆನ್ಸಿ) ಇಂದ ಮಾನ್ಯತೆ ಪಡೆದಿರುವ ಏಕೈಕ ದಕ್ಷಿಣ ಭಾರತದ ಸಂಸ್ಥೆಯಾಗಿದೆ.

ಈ ಸಂಸ್ಥೆಗೆ ಎಪ್ ಕೆ ಸಿ ಸಿ ಐ ನಿಂದ ೨೦೧೧ ಮತ್ತು ೨೦೧೩ ರಲ್ಲಿ ಎಕ್ಸ್ಪೋರ್ಟ್ ಎಕ್ಸಲೆನ್ಸ್ ಅವಾರ್ಡ್ ಕೂಡ ದೊರೆತಿದೆ. ಈ ಸಂಸ್ಥೆಯ ಉತ್ಪನ್ನಗಳು ಆಸ್ಟ್ರೇಲಿಯಾ, ಥಾಯ್ಲೆಂಡ್, ಕೊರಿಯಾ, ಬಾಂಗ್ಲ, ತೈವಾನ್, ಚಿಲಿ, ಟರ್ಕಿ, ಜಪಾನ್, ದಕ್ಷಿಣ ಅಮೇರಿಕಾ, ವಿಯೆಟ್ನಾಂ ಮುಂತಾದ ದೇಶಗಳಿಗೆ ರಫ್ತಾಗುತ್ತದೆ. ದಕ್ಷಿಣ ಭಾರತದಲ್ಲೂ ಈ ಸಂಸ್ಥೆಯ ಉತ್ಪನ್ನಗಳು ಜನಪ್ರಿಯತೆ ಗಳಿಸಿವೆ.

ಸಂಸ್ಥೆಯ ಗುಣಮಟ್ಟ ಕಾಯ್ದುಕೊಳ್ಳುವುದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎನ್ನುತ್ತಾರೆ ಸಂಸ್ಥೆಯ ನಿರ್ದೇಶಕರಲ್ಲೊಬ್ಬರಾದ ಕೆ ಮೊಹಮ್ಮದ್ ಹ್ಯಾರಿಸ್.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT