ಪೊಲೀಸ್ ಮನೋಜ್ 
ವಿಶೇಷ

ನದಿಗೆ ಹಾರಿ ವ್ಯಕ್ತಿಯೊಬ್ಬನ ಜೀವ ರಕ್ಷಿಸಿದ ಪೊಲೀಸ್

ಸೇತುವೆಯಿಂದ ಜಿಗಿದು ಆತ್ಮಹತ್ಯೆ ಯತ್ನಿಸಿದ ವ್ಯಕ್ತಿಯನ್ನು ಕಾಪಾಡಲು ತನ್ನ ಜೀವವನ್ನೆ ಲೆಕ್ಕಿಸದೇ, ನದಿಗೆ ಹಾರಿದ...

ಮಹಾರಾಷ್ಟ್ರ: ಸೇತುವೆಯಿಂದ ಜಿಗಿದು ಆತ್ಮಹತ್ಯೆ ಯತ್ನಿಸಿದ ವ್ಯಕ್ತಿಯನ್ನು ಕಾಪಾಡಲು ತನ್ನ ಜೀವವನ್ನೆ ಲೆಕ್ಕಿಸದೇ, ನದಿಗೆ ಹಾರಿದ ಪೊಲೀಸ್ ಆತನನ್ನು ಕಾಪಾಡುವಲ್ಲಿ ಯಶಸ್ವಿಯಾಗಿದ್ದಾನೆ.

ನಾಸಿಕ್ ಕುಂಭಮೇಳದ ಹಿನ್ನಲೆಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಈ ವೇಳೆ ನಾಸಿಕ್ ನ ಅಮರ್ ಧಾಮ್ ಸೇತುವೆ ಮೇಲೆ ಪೊಲೀಸರು ಗಸ್ತು ತಿರುಗುತ್ತಿದ್ದರು. ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬ 20 ಅಡಿ ಎತ್ತರದ ಸೇತುವೆಯಿಂದ ನದಿಗೆ ಹಾರಲು ಯತ್ನಿಸಿದ್ದ. ಅವನನ್ನು ತಡೆಯಲು ಪೊಲೀಸರು ಯತ್ನಿಸುತ್ತಿದ್ದರಾದರೂ, ಪೊಲೀಸರನ್ನು ತಳ್ಳಿ ಆತ ನದಿಗೆ ಹಾರಿದ್ದಾನೆ. ತಕ್ಷಣ ಆ ಗುಂಪಿನಲ್ಲಿದ್ದ ಯುವ ಪೊಲೀಸ್ ತಮ್ಮ ಪ್ರಾಣ ಲೆಕ್ಕಿಸದೇ ಆತನನ್ನು ರಕ್ಷಿಸಲು ನದಿಗೆ ಹಾರಿದ್ದಾರೆ. ಈ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿದೆ.

ನದಿಗೆ ಹಾರಿದ 24 ವರ್ಷದ ಮನೋಜ್ ಆ ವ್ಯಕ್ತಿಯ ಪ್ರಾಣ ಕಾಪಾಡಿದ್ದು, ತಮ್ಮ ಸಾಹಸ ಮೆರೆದಿದ್ದಾರೆ. ಇವರ ಈ ಸಾಹಸಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಆತ ನಮ್ಮ ಮಾತು ಕೇಳದೇ ನೀರಿಗೆ ಹಾರಿಬಿಟ್ಟ. ನನಗೆ ಬೇರೆ ದಾರಿ ಕಾಣದೆ ಆತನನ್ನು ರಕ್ಷಿಸಬೇಕು ಎಂದು ನೀರಿಗೆ ಹಾರಿ ಆತನ ಪ್ರಾಣ ಕಾಪಾಡಿದೆ ಎಂದು ಟ್ರೈನಿ ಪೊಲೀಸ್ ಕಾನ್ಸ್ ಟೇಬಲ್ ಮನೋಜ್ ತಿಳಿಸಿದ್ದಾರೆ.

ಯುವ ಪೊಲೀಸ್ ಕಾನ್ಸಟೇಬಲ್ ಮನೋಜ್ ಧೈರ್ಯದ ಕೆಲಸವನ್ನು ಶ್ಲಾಘಿಸಿರುವ ಕಮಿಷನರ್ ಪ್ರವೀಣ್ ಟ್ವೀಟರ್ ನಲ್ಲಿ ಆತನ ಫೋಟೊವನ್ನು ಪೋಸ್ಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT