ಯುವತಿಗೆ ಯುವಕನ ಕೈಗಳ ಕಸಿ 
ವಿಶೇಷ

ವೈದ್ಯ ಲೋಕದ ಅಚ್ಚರಿ! ಯುವತಿಗೆ ಯುವಕನ ಕೈಗಳ ಕಸಿ

ಅಪಘಾತದಲ್ಲಿ ಎರಡು ಕೈಗಳನ್ನು ಕಳೆದುಕೊಂಡಿದ್ದ ಯುವತಿಗೆ ಯುವಕನೋರ್ವನ ಕೈಗಳನ್ನು ವೈದ್ಯರು ಯಶಸ್ವಿಯಾಗಿ ಜೋಡಿಸಿದ್ದಾರೆ.

ಕೊಚ್ಚಿ: ಅಪಘಾತದಲ್ಲಿ ಎರಡು ಕೈಗಳನ್ನು ಕಳೆದುಕೊಂಡಿದ್ದ ಯುವತಿಗೆ ಯುವಕನೋರ್ವನ ಕೈಗಳನ್ನು ವೈದ್ಯರು ಯಶಸ್ವಿಯಾಗಿ ಜೋಡಿಸಿದ್ದಾರೆ. 
ಉಡುಪಿಯ ಮಣಿಪಾಲ ಶಿಕ್ಷಣ ಸಂಸ್ಥೆಯಲ್ಲಿ ವ್ಯಾಸಂಗ ಮಾಡುತಿದ್ದ 19 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶ್ರೇಯಾ ಸಿದ್ದನಗೌಡ ಕಳೆದ ವರ್ಷ ನಡೆದ ರಸ್ತೆ ಅಪಘಾತದಲ್ಲಿ ತನ್ನ ಎರಡೂ ಕೈಗಳನ್ನು ಕಳೆದುಕೊಂಡಿದ್ದಳು. ಆದರೆ ಈಗ ಕೇರಳದ ಕೊಚ್ಚಿ ಅಮೃತಾ ವೈದ್ಯ ವಿಜ್ಞಾನ ಸಂಸ್ಥೆಯ ವೈದ್ಯರು ಯುವತಿಗೆ ಯುವಕನ ತೋಳುಗಳನ್ನು ಕಸಿ ಮಾಡಿ ಜೋಡಿಸಿದ್ದಾರೆ.
ಪುಣೆಯ ಟಾಟಾ ಮೋಟರ್ಸ್ ಕಂಪೆನಿಯ ಹಿರಿಯ ವ್ಯವಸ್ಥಾಪಕ ಫಕೀರಗೌಡ ಮತ್ತು ಸುಮಾ ನುಗ್ಗಿಹಳ್ಳಿ ದಂಪತಿಯ ಪುತ್ರಿ ಶ್ರೇಯಾ ಮಣಿಪಾಲ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಕೆಮಿಕಲ್ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದಾರೆ.
ಹಿಂದಿನ ವರ್ಷದಲ್ಲಿ ಒಮ್ಮೆ ಪುಣೆಯಿಂದ ಮಣಿಪಾಲಕ್ಕೆ ಬಸ್‍ನಲ್ಲಿ ಬರುತ್ತಿದ್ದಾಗ ಬಸ್ ಅಪಘಾತಕ್ಕೀಡಾಗಿತ್ತು. ಶ್ರೇಯಾ ಬಸ್ ನ  ಕೆಳಗಡೆ ಸಿಲುಕಿದ್ದಳು. ಅಪಘಾತದ ಕಾರಣ ಆಕೆ ತನ್ನ ಎರಡು ಕೈಗಳನ್ನು ಕಳೆದುಕೊಂಡಿದ್ದರು.
ಕೈಗಳ ದಾನ 
ಕೇರಳದ ಎರ್ನಾಕುಲಂನ ರಾಜಗಿರಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ ಸಚಿನ್ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಚಿನ್ ಅವರ ಮೆದುಳು ನಿಷ್ಕ್ರಿಯವಾಯಿತು. 
ಆ ಸಂದರ್ಭದಲ್ಲಿ ಕೈಗಳ ಮರು ಜೋದನೆ ಅಥವಾ ಕೈಗಳ ಕಸಿ ಶಸ್ತ್ರಚಿಕಿತ್ಸೆ ಕುರಿತು ವೈದ್ಯರು ಸಚಿನ್ ಪೋಷಕರಲ್ಲಿ ಮಾಹಿತಿ ನೀಡಿದರು. ಇದಕ್ಕೆ ಸ್ಪಂದಿಸಿದ ಸಚಿನ್ ಪೋಷಕರು ಕೈಗಳನ್ನು ದಾನ ನೀದಲು ಅನುಮತಿಸಿದರು.ಇದೀಗ ಸಚಿನ್ ಅವರ ಕೈಗಳನ್ನು ಶ್ರೇಯಾಗೆ ಯಶಸ್ವಿಯಾಗಿ ಜೋಡಿಸಲಾಗಿದೆ. 
ಶ್ರೇಯಾ ದೇಹವು ಕಸಿ ಮಾಡಿದ ಕೈಗಳಿಗೆ ಒಗ್ಗಿದೆ. ಶ್ರೇಯಾಳಲ್ಲಿ  ಉತ್ತಮ ಚೇತರಿಕೆ ಲಕ್ಷಣಗಳು ಕಂಡುಬರುತ್ತಿವೆ. ಪ್ರಸ್ತುತ ಶ್ರೇಯಾಳ ಬೆರಳುಗಳು, ಮಣಿಕಟ್ಟುಗಳು ಹಾಗೂ ಭುಜಗಳ ಚಲನೆ ಸಾಧ್ಯವಾಗುತ್ತಿದೆ. ಮುಂದಿನ ಒಂದೂವರೆ ವರ್ಷದಲ್ಲಿ ಶ್ರೇಯಾಳ ಕೈಗಳು ಶೇ.85 ರಷ್ಟು ಸುಧಾರಣೆ ಆಗಲಿದೆ ಎಂದು ವೈದ್ಯರು ಹೇಳಿದ್ದಾರೆ.
ಇದುವರೆಗೆ ಇಂತಹ 9 ಕಸಿಗಳು ವಿಶ್ವದಾದ್ಯಂತ ನಡೆದಿವೆ. ಆದರೆ ಏಷ್ಯಾದಲ್ಲಿ ಇಂತಹಾ ಒಂದು ಶಸ್ತ್ರಚಿಕಿತ್ಸೆ ನಡೆದಿರುವುದು ಇದೇ ಮೊದಲಬಾರಿಯಾಗಿದೆ. ಹುಡುಗನ ತೋಳುಗಳನ್ನು ಯುವತಿಯೊಬ್ಬಳಿಗೆ ಜೋಡಿಸಿರುವುದು ಇದೇ ಪ್ರಥಮ ಎನ್ನಲಾಗಿದೆ.
ಡಾ. ಸುಬ್ರಹ್ಮಣ್ಯ ಅಯ್ಯರ್ ನೇತೃತ್ವದ 20 ವೈದ್ಯರ ತಂಡ ದೊಡನೆ 16 ಅರವಳಿಕೆ ತಜ್ಞರು ಸೇರಿ ಈ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಶಸ್ತ್ರಚಿಕಿತ್ಸೆ ಪೂರ್ಣಗೊಳ್ಳಲು ಸುಮಾರು 13 ಗಂಟೆಗಳ ಕಾಲ ಹಿಡಿದಿದೆ.
"ಅವಳು (ಶ್ರೇಯಾ)  ಇಲ್ಲಿನ ವೈದ್ಯರ ಜೊತೆ ಚೆನ್ನಾಗಿ ಹೊಂದಿಕೊಂಡಿದ್ದಾಳೆ. ವೈದ್ಯರಿಗೂ ಅವಳ ವೈದ್ಯಕೀಯ ಮೆಡಿಕಲ್ ಹಿಸ್ಟರಿ ಗೊತ್ತು. ಹೀಗಾಗಿ ಅವರೂ ಅವರಿಗೆ ಹೆಚ್ಚು ಸಹಕಾರ ನೀಡುತ್ತಾ ಬಂದಿದ್ದಾರೆ. ಇನ್ನು ಮುಂದೆ ನಿರ್ಣಾಯಕ ದಿನಗಳು ಅವಳಿಗೆ ಎದುರಾಗಲಿವೆ, ಆದರೆ ನಾವು ಅವಳೊಂದಿಗೆ ಸಹಜ ರೀತಿಯಲ್ಲಿಯೇ ವರ್ತಿಸುತ್ತೇವೆ" ಶ್ರೇಯಾಳ ತಾಯಿ ಸುಮಾ ತಿಳಿಸಿದ್ದಾರೆ. 
ಒಟ್ಟಾರೆ  ವೈದ್ಯಲೋಕದಲ್ಲಿ ಅಚ್ಚರಿ ಎನ್ನವಹುದಾದ ಶಸ್ತ್ರಚಿಕಿತ್ಸೆಯೊಂದು ಯಶಸ್ವಿಯಾಗಿ ಪೂರೈಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT