ಮಿಜೋರಂನ ಬಾಲಕ 
ವಿಶೇಷ

ಸೈಕಲ್ ಚಕ್ರಕ್ಕೆ ಸಿಕ್ಕ ಕೋಳಿ ಮರಿಯನ್ನು ಆಸ್ಪತ್ರೆಗೆ ತಂದ ಬಾಲಕನಿಗೆ 'ಪೇಟಾ'ದಿಂದ ಸಹಾನುಭೂತಿಯ ಮಗು ಪ್ರಶಸ್ತಿ!

ಪುಟ್ಟ ಬಾಲಕ ಆಟವಾಡುವಾಗ ಆಕಸ್ಮಿಕವಾಗಿ ಅವನ ಸೈಕಲ್ ಚಕ್ರಕ್ಕೆ ಸಿಕ್ಕಿಹಾಕಿಕೊಂಡ ...

ಮಿಜೋರಾಂ: ಪುಟ್ಟ ಬಾಲಕ ಆಟವಾಡುವಾಗ ಆಕಸ್ಮಿಕವಾಗಿ ಅವನ ಸೈಕಲ್ ಚಕ್ರಕ್ಕೆ ಸಿಕ್ಕಿಹಾಕಿಕೊಂಡ ಕೋಳಿಮರಿಯನ್ನು ಆಸ್ಪತ್ರೆಗೆ ಕೊಂಡೊಯ್ಡು ಪೇಟಾ ಸಂಘಟನೆಯಿಂದ ಪ್ರಶಸ್ತಿ ಗಳಸಿದ್ದಲ್ಲದೆ ಇಂಟರ್ನೆಟ್ ನಲ್ಲಿ ಈ ಪುಟ್ಟ ಬಾಲಕನ ಕೆಲಸಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಕೋಳಿ ಮರಿಗೆ ತುರ್ತಾಗಿ ಚಿಕಿತ್ಸೆ ಕೊಡಿಸಲು ಒಂದು ಕೈಯಲ್ಲಿ ಕೋಳಿ ಮರಿ ಹಾಗೂ ಇನ್ನೊಂದು ಕೈಯಲ್ಲಿ 10 ರೂಪಾಯಿ ನೋಟು ಹಿಡಿದುಕೊಂಡು ಬಾಲಕ ಒಬ್ಬನೇ ಆಸ್ಪತ್ರೆಗೆ ಹೋಗಿದ್ದಾನೆ.
ದಯೆ ಮತ್ತು ಮಾನವೀಯತೆಯ ಸಾಕ್ಷಿಯೆಂಬಂತೆ ಬಾಲಕನ ಈ ಚಿತ್ರವಿದ್ದು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಭಾರತೀಯ ಪೇಟಾ ಸಂಘಟನೆ ಬಾಲಕ ಡೆರೆಕ್ ಸಿ ಲಾಲ್ಚಾನಿಹಿಮಾಗೆ ಸಹಾನುಭೂತಿಯ ಮಗು ಪ್ರಶಸ್ತಿ ನೀಡಿ ಗೌರವಿಸಿದ್ದು ಬೇರೆ ಮಕ್ಕಳಿಗೆ ಅದು ಸ್ಫೂರ್ತಿಯಾಗಲಿದೆ ಎಂದು ಹೇಳಿದೆ.
ಸಂಗಾ ಸೇಸ್ ಎಂಬ ಪ್ರೊಫೈಲ್ ನಲ್ಲಿ ಬಾಲಕನ ಫೋಟೋ ಶೇರ್ ಆಗಿದೆ. ಮಿಜೋರಾಂನ ಸೈರಾಂಗ್ ಪ್ರದೇಶದ ಈ ಬಾಲಕ ತನ್ನ ಮನೆಯ ಮುಂದೆ ಸೈಕಲ್ ಓಡಿಸುತ್ತಿರುವಾಗ ಆಕಸ್ಮಿಕವಾಗಿ ಸೈಕಲ್ ನ ಚಕ್ರ ನೆರೆಮನೆಯವರ ಕೋಳಿಮರಿಯ ಮೇಲೆ ಹಾದುಹೋಗಿದೆ.  ತಕ್ಷಣವೇ ಬಾಲಕ ಸೈಕಲ್ ನ್ನು ಅಲ್ಲಿ ಬಿಸಾಕಿ ಕೋಳಿಮರಿಯನ್ನು ಕೈಗೆತ್ತಿಕೊಂಡು ತನ್ನ ಮನೆಯಲ್ಲಿ ಸಿಕ್ಕಿದ ಹಣವನ್ನು ಎತ್ತಿಕೊಂಡು ನೇರವಾಗಿ ಹತ್ತಿರದ ಆಸ್ಪತ್ರೆಗೆ ಓಡಿಹೋಗಿದ್ದಾನೆ. ಈ ಫೋಟೋ ನೋಡುವಾಗ ನಗು, ಅಳು ಎರಡೂ ಒಟ್ಟಿಗೆ ನನಗೆ ಬರುತ್ತಿರುತ್ತದೆ ಎಂದು ಸಂಗಾ ಬರೆದುಕೊಂಡಿದ್ದಾರೆ.
ಸಂಗಾ ಅವರ ಪ್ರೊಫೈಲ್ ನಿಂದ ಫೋಟೋ ವೈರಲ್ ಆಗಿದೆ. ಬಹುತೇಕರು ಇದನ್ನು ಶೇರ್ ಮಾಡಿ ಕಮೆಂಟ್ ಮಾಡಿದ್ದಾರೆ. ಬಾಲಕನ ತಂದೆ ತಮ್ಮ ಸ್ನೇಹಿತ ಎಂದು ಸಂಗಾ ಮಾಧ್ಯಮಗಳಿಗೆ ಹೇಳಿದ್ದಾರೆ.
ಬಾಲಕನ ಸೈಕಲ್ ಚಕ್ರ ಕೋಳಿಮರಿ ಮೇಲೆ ಹಾದುಹೋಗಿ ಅದು ಅಲ್ಲಿಯೇ ಮೃತಪಟ್ಟಿತ್ತು. ಅದನ್ನು ಮನೆಗೆ ತಂದು ತಂದೆ-ತಾಯಿಗೆ ತೋರಿಸಿದ್ದಾನೆ. ಅವರು ಕೋಳಿಮರಿ ಸತ್ತಿದೆ ಎಂದು ಹೇಳಿದ್ದಾರೆ. ಆದರೆ ಬಾಲಕ ಸಮಾಧಾನವಾಗದೆ ಹಣ ಹಿಡಿದುಕೊಂಡು ಆಸ್ಪತ್ರೆಗೆ ಕೊಂಡೊಯ್ದಿದ್ದಾನೆ. ಅಲ್ಲಿ ಕೋಳಿ ಮರಿ ಸತ್ತುಹೋಗಿದೆ, ಮನೆಗೆ ತೆಗೆದುಕೊಂಡು ಹೋಗು ಎಂದಿದ್ದಾರೆ. ಆದರೆ ಮನೆಗೆ ಬಂದವನೇ 100 ರೂಪಾಯಿ ತೆಗೆದುಕೊಂಡು ಮತ್ತೊಂದು ಆಸ್ಪತ್ರೆಗೆ ಹೋಗಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT