ಸಂಚಾರಿ ಡಿಸಿಪಿ ಅಂಕಿತ್ ಪಟೇಲ್   
ವಿಶೇಷ

ಬೀದಿಬದಿಯ ಮಕ್ಕಳಿಗಾಗಿ ಶಿಕ್ಷಣ ಕೇಂದ್ರಗಳನ್ನು ತೆರೆದ ಟ್ರಾಫಿಕ್ ಪೊಲೀಸ್!

ಬೀದಿ ಬದಿ ಭಿಕ್ಷೆ ಬೇಡುವ, ಚಿಂದಿ ಆಯ್ದು  ಬದುಕು ಸಾಗಿಸುವ ಸುಮಾರು 200 ಮಕ್ಕಳಿಗೆ ಸಂಚಾರಿ ಪೊಲೀಸರೊಬ್ಬರು ಉಚಿತವಾಗಿ ಶಿಕ್ಷಣ ನೀಡುತ್ತಿದ್ದಾರೆ.  ಬೀದಿ ಬದಿಯ ಮಕ್ಕಳ ಬದುಕಿನಲ್ಲಿ ಬದಲಾವಣೆ ತರುವ ಗುರಿಯೊಂದಿಗೆ ಒಂದೂವರೆ ವರ್ಷದ ಹಿಂದೆ ಪೊಲೀಸ್ ಪಾಠಶಾಲೆಯನ್ನು ಈ ಪೊಲೀಸ್ ಅಧಿಕಾರಿ ಪ್ರಾರಂಭಿಸಿದ್ದಾರೆ.

ಅಹ್ಮಮದಾಬಾದ್:  ಬೀದಿ ಬದಿ ಭಿಕ್ಷೆ ಬೇಡುವ, ಚಿಂದಿ ಆಯ್ದು  ಬದುಕು ಸಾಗಿಸುವ ಸುಮಾರು 200 ಮಕ್ಕಳಿಗೆ ಸಂಚಾರಿ ಪೊಲೀಸರೊಬ್ಬರು ಉಚಿತವಾಗಿ ಶಿಕ್ಷಣ ನೀಡುತ್ತಿದ್ದಾರೆ.  ಬೀದಿ ಬದಿಯ ಮಕ್ಕಳ ಬದುಕಿನಲ್ಲಿ ಬದಲಾವಣೆ ತರುವ ಗುರಿಯೊಂದಿಗೆ ಒಂದೂವರೆ ವರ್ಷದ ಹಿಂದೆ ಪೊಲೀಸ್ ಪಾಠಶಾಲೆಯನ್ನು ಈ ಪೊಲೀಸ್ ಅಧಿಕಾರಿ ಪ್ರಾರಂಭಿಸಿದ್ದಾರೆ.

ಸದ್ಯ ಇಂತಹ ಮೂರು ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಇಂತಹ ಇನ್ನೊಂದಿಷ್ಟು ಕೇಂದ್ರಗಳನ್ನು ತೆರೆಯುವ ಯೋಚನೆಯಲ್ಲಿರುವುದಾಗಿ ಅವರು ಹೇಳಿದ್ದಾರೆ.ಈ ಕೇಂದ್ರಗಳಿಗೆ ಉಚಿತ ಶಿಕ್ಷಣ ನೀಡುವುದರ ಜೊತೆಗೆ ಅವರು ಬರಲು ಉಚಿತ ವಾಹನದ ಸೌಲಭ್ಯವನ್ನು ಕಲ್ಪಿಸಲಾಗುತ್ತಿದೆ.ಮಕ್ಕಳನ್ನು ಈ ಕೇಂದ್ರಗಳಿಗೆ ಕರೆ ತರಲು ಸೈಕಲ್ ರಿಕ್ಷಾವನ್ನು ನಿಯೋಜಿಸಲಾಗುತ್ತಿದೆ. ಅಧ್ಯಯನದ ಅವಧಿಯಲ್ಲಿ ಉಚಿತವಾಗಿ ಊಟವನ್ನು ಸಹ  ನೀಡಲಾಗುತ್ತಿದೆ ಎಂದು ಟ್ರಾಫಿಕ್ ಪೊಲೀಸ್ ತಿಳಿಸಿದ್ದಾರೆ. 

ಬೀದಿ ಬದಿಯ ಮಕ್ಕಳಿಗೆ ಉತ್ತಮ ಜೀವನ ನೀಡುವ ನಿಟ್ಟಿನಲ್ಲಿ ಶಿಕ್ಷಣ ಕೇಂದ್ರಗಳನ್ನು ತೆರೆದಿರುವುದಾಗಿ ಸಂಚಾರಿ ಡಿಸಿಪಿ ಅಂಕಿತ್ ಪಟೇಲ್  ಸುದ್ದಿಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ. 


ಬೀದಿ ಬದಿಯ ಮಕ್ಕಳು ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದೇ ಹೆಚ್ಚು. ಆದ್ದರಿಂದ ಇಂತಹ ಮಕ್ಕಳ ಜೀವನದಲ್ಲಿ ಬದಲಾವಣೆ ತರಲು ಉತ್ತಮ ಶಿಕ್ಷಣ ನೀಡಲಾಗುತ್ತಿದೆ. ಈ ಕೇಂದ್ರಗಳಲ್ಲಿ ಮೂಲ ಜ್ಞಾನ ನೀಡಿದ ನಂತರ ಅವರನ್ನು ರೆಗ್ಯೂಲರ್ ಶಾಲೆಗಳಿಗೆ ಸೇರಿಸಲಾಗುವುದು ಎಂದು ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT