ಅಂಚಟಗೇರಿ 
ವಿಶೇಷ

ಧಾರವಾಡ ಜಿಲ್ಲೆಯ ಈ ಗ್ರಾಮ ಸಂಪೂರ್ಣ ಪ್ಲಾಸ್ಟಿಕ್ ಮುಕ್ತ, ಅ. 2ರಂದು ಪ್ರಧಾನಿ ಮೋದಿಯಿಂದ ಪ್ರಶಸ್ತಿ

ಸಾಮಾನ್ಯವಾಗಿ ಉತ್ತರ ಕರ್ನಾಟಕ ಎಂದ ತಕ್ಷಣ ಹಿಂದೂಳಿದ ಪ್ರದೇಶ ಎಂದು ಭಾವಿಸುತ್ತೇನೆ. ಆದರೆ ಧಾರವಾಡ ಜಿಲ್ಲೆಯ ಅಂಚಟಗೇರಿ ಗ್ರಾಮಕ್ಕೆ ಭೇಟಿ ನೀಡಿದರೆ ನಮ್ಮ ಗ್ರಹಿಕೆಯ ತಪ್ಪು ಎಂಬುದು ಗೊತ್ತಾಗುತ್ತದೆ...

ಧಾರವಾಡ: ಸಾಮಾನ್ಯವಾಗಿ ಉತ್ತರ ಕರ್ನಾಟಕ ಎಂದ ತಕ್ಷಣ ಹಿಂದೂಳಿದ ಪ್ರದೇಶ ಎಂದು ಭಾವಿಸುತ್ತೇವೆ. ಆದರೆ ಧಾರವಾಡ ಜಿಲ್ಲೆಯ ಅಂಚಟಗೇರಿ ಗ್ರಾಮಕ್ಕೆ ಭೇಟಿ ನೀಡಿದರೆ ನಮ್ಮ ಗ್ರಹಿಕೆ ತಪ್ಪು ಎಂಬುದು ಗೊತ್ತಾಗುತ್ತದೆ. ಸುಮಾರು 6 ಸಾವಿರ ಜನಸಂಖ್ಯೆ ಹೊಂದಿರುವ ಈ ಗ್ರಾಮ ವೈಫೈ, ಸೋಲಾರ್ ವಿದ್ಯುತ್ ಮತ್ತು ಹಲವು ಪ್ರಮುಖ ರಸ್ತೆಗಳಲ್ಲಿ ಸಿಸಿಟಿವಿಗಳನ್ನು ಸಹ ಕಾಣಬಹುದು.

ಗ್ರಾಮ ಪಂಚಾಯತ್ ಕಚೇರಿ ಮತ್ತು ಉತ್ತಮ ಸರ್ಕಾರಿ ಶಾಲೆಗಳನ್ನು ಹೊಂದಿರುವ ಈ ಗ್ರಾಮ ಸಂಪೂರ್ಣ ಪ್ಲಾಸ್ಟಿಕ್ ಮುಕ್ತವಾಗುವ ಮೂಲಕ ದೇಶದ ಗಮನ ಸೆಳೆದಿದ್ದು, ಇದಕ್ಕಾಗಿ ಅಕ್ಟೋಬರ್ 2ರಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 150ನೇ ಜನ್ಮದಿನದಂದು ಪ್ರಧಾನಿ ನರೇಂದ್ರ  ಮೋದಿ ಅವರಿಂದ ಪ್ರಶಸ್ತಿ ಸ್ವೀಕರಿಸಲಿದೆ.

ಸ್ವಚ್ಛ ಹಿ ಸೇವಾ ಕಾರ್ಯಕ್ರಮದಡಿ ಈ ಗ್ರಾಮವನ್ನು ಕೇಂದ್ರ ಸರ್ಕಾರ ಗುರುತಿಸಿದ್ದು, ಅಕ್ಟೋಬರ್ 2ರಂದು ಗುಜರಾತ್ ನ ಅಹಮದಾಬಾದ್ ನ ಸಬರಮತಿ ಆಶ್ರಮದಲ್ಲಿ ನಡೆಯುವ ಮಹಾತ್ಮ ಗಾಂಧಿ ಅವರ 150ನೇ ಜಯಂತಿ ಕಾರ್ಯಕ್ರಮದಲ್ಲಿ ಸ್ವಚ್ಛತಾ ಅಭಿಯಾನದ ಯಶಸ್ಸಿಗೆ ಶ್ರಮಿಸಿದ ಅಂಚಟಗೇರಿ ಗ್ರಾಮ ಪಂಚಾಯತಿ ಅಧ್ಯಕ್ಷ ಬಸವರಾಜ್ ಬಿಡ್ನಾಳ್ ಹಾಗೂ ಗುತ್ತಿಗೆ ಪೌರಕಾರ್ಮಿಕ ಕರಿಬಸಪ್ಪ ಗುಡಿಸಲಮನಿ ಅವರನ್ನು ಪ್ರಧಾನಿ ಮೋದಿ ಸನ್ಮಾನಿಸಲಿದ್ದಾರೆ.

ಅಂಚಟಗೇರಿ ಗ್ರಾಮ 2017ರಲ್ಲಿ ಬಯಲು ಶೌಚ ಮುಕ್ತ ಗ್ರಾಮ ಎಂಬ ಗೌರವಕ್ಕೆ ಪಾತ್ರವಾಗಿತ್ತು. ಈಗ ಪ್ಲಾಸ್ಟಿಕ್ ಮುಕ್ತ ಗ್ರಾಮ ಎಂಬ ಗೌರವಕ್ಕೆ ಪಾತ್ರವಾಗಿದ್ದು, ಈ ಗ್ರಾಮದ ಜನತೆ ಯಾವುದೇ ರೀತಿಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವುದಿಲ್ಲ. ಈ ಮೂಲಕ ಇತರೆ ಗ್ರಾಮಗಳಿಗೆ ಮಾದರಿಯಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT