ಅಂಚಟಗೇರಿ 
ವಿಶೇಷ

ಧಾರವಾಡ ಜಿಲ್ಲೆಯ ಈ ಗ್ರಾಮ ಸಂಪೂರ್ಣ ಪ್ಲಾಸ್ಟಿಕ್ ಮುಕ್ತ, ಅ. 2ರಂದು ಪ್ರಧಾನಿ ಮೋದಿಯಿಂದ ಪ್ರಶಸ್ತಿ

ಸಾಮಾನ್ಯವಾಗಿ ಉತ್ತರ ಕರ್ನಾಟಕ ಎಂದ ತಕ್ಷಣ ಹಿಂದೂಳಿದ ಪ್ರದೇಶ ಎಂದು ಭಾವಿಸುತ್ತೇನೆ. ಆದರೆ ಧಾರವಾಡ ಜಿಲ್ಲೆಯ ಅಂಚಟಗೇರಿ ಗ್ರಾಮಕ್ಕೆ ಭೇಟಿ ನೀಡಿದರೆ ನಮ್ಮ ಗ್ರಹಿಕೆಯ ತಪ್ಪು ಎಂಬುದು ಗೊತ್ತಾಗುತ್ತದೆ...

ಧಾರವಾಡ: ಸಾಮಾನ್ಯವಾಗಿ ಉತ್ತರ ಕರ್ನಾಟಕ ಎಂದ ತಕ್ಷಣ ಹಿಂದೂಳಿದ ಪ್ರದೇಶ ಎಂದು ಭಾವಿಸುತ್ತೇವೆ. ಆದರೆ ಧಾರವಾಡ ಜಿಲ್ಲೆಯ ಅಂಚಟಗೇರಿ ಗ್ರಾಮಕ್ಕೆ ಭೇಟಿ ನೀಡಿದರೆ ನಮ್ಮ ಗ್ರಹಿಕೆ ತಪ್ಪು ಎಂಬುದು ಗೊತ್ತಾಗುತ್ತದೆ. ಸುಮಾರು 6 ಸಾವಿರ ಜನಸಂಖ್ಯೆ ಹೊಂದಿರುವ ಈ ಗ್ರಾಮ ವೈಫೈ, ಸೋಲಾರ್ ವಿದ್ಯುತ್ ಮತ್ತು ಹಲವು ಪ್ರಮುಖ ರಸ್ತೆಗಳಲ್ಲಿ ಸಿಸಿಟಿವಿಗಳನ್ನು ಸಹ ಕಾಣಬಹುದು.

ಗ್ರಾಮ ಪಂಚಾಯತ್ ಕಚೇರಿ ಮತ್ತು ಉತ್ತಮ ಸರ್ಕಾರಿ ಶಾಲೆಗಳನ್ನು ಹೊಂದಿರುವ ಈ ಗ್ರಾಮ ಸಂಪೂರ್ಣ ಪ್ಲಾಸ್ಟಿಕ್ ಮುಕ್ತವಾಗುವ ಮೂಲಕ ದೇಶದ ಗಮನ ಸೆಳೆದಿದ್ದು, ಇದಕ್ಕಾಗಿ ಅಕ್ಟೋಬರ್ 2ರಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 150ನೇ ಜನ್ಮದಿನದಂದು ಪ್ರಧಾನಿ ನರೇಂದ್ರ  ಮೋದಿ ಅವರಿಂದ ಪ್ರಶಸ್ತಿ ಸ್ವೀಕರಿಸಲಿದೆ.

ಸ್ವಚ್ಛ ಹಿ ಸೇವಾ ಕಾರ್ಯಕ್ರಮದಡಿ ಈ ಗ್ರಾಮವನ್ನು ಕೇಂದ್ರ ಸರ್ಕಾರ ಗುರುತಿಸಿದ್ದು, ಅಕ್ಟೋಬರ್ 2ರಂದು ಗುಜರಾತ್ ನ ಅಹಮದಾಬಾದ್ ನ ಸಬರಮತಿ ಆಶ್ರಮದಲ್ಲಿ ನಡೆಯುವ ಮಹಾತ್ಮ ಗಾಂಧಿ ಅವರ 150ನೇ ಜಯಂತಿ ಕಾರ್ಯಕ್ರಮದಲ್ಲಿ ಸ್ವಚ್ಛತಾ ಅಭಿಯಾನದ ಯಶಸ್ಸಿಗೆ ಶ್ರಮಿಸಿದ ಅಂಚಟಗೇರಿ ಗ್ರಾಮ ಪಂಚಾಯತಿ ಅಧ್ಯಕ್ಷ ಬಸವರಾಜ್ ಬಿಡ್ನಾಳ್ ಹಾಗೂ ಗುತ್ತಿಗೆ ಪೌರಕಾರ್ಮಿಕ ಕರಿಬಸಪ್ಪ ಗುಡಿಸಲಮನಿ ಅವರನ್ನು ಪ್ರಧಾನಿ ಮೋದಿ ಸನ್ಮಾನಿಸಲಿದ್ದಾರೆ.

ಅಂಚಟಗೇರಿ ಗ್ರಾಮ 2017ರಲ್ಲಿ ಬಯಲು ಶೌಚ ಮುಕ್ತ ಗ್ರಾಮ ಎಂಬ ಗೌರವಕ್ಕೆ ಪಾತ್ರವಾಗಿತ್ತು. ಈಗ ಪ್ಲಾಸ್ಟಿಕ್ ಮುಕ್ತ ಗ್ರಾಮ ಎಂಬ ಗೌರವಕ್ಕೆ ಪಾತ್ರವಾಗಿದ್ದು, ಈ ಗ್ರಾಮದ ಜನತೆ ಯಾವುದೇ ರೀತಿಯ ಪ್ಲಾಸ್ಟಿಕ್ ವಸ್ತುಗಳನ್ನು ಬಳಸುವುದಿಲ್ಲ. ಈ ಮೂಲಕ ಇತರೆ ಗ್ರಾಮಗಳಿಗೆ ಮಾದರಿಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT