ವಿಶೇಷ

ಗಂಗಾವತಿ ತಾ. ಆಸ್ಪತ್ರೆಯ ಯಶೋಗಾಥೆ: ಆಯುಷ್ಮಾನ್ ಭಾರತ್ ಅಡಿಯಲ್ಲಿ ಉಚಿತ ಬೆನ್ನುಹುರಿ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯರು

ಗಂಗಾವತಿಯ ತಾಲೂಕು ಆಸ್ಪತ್ರೆಯಲ್ಲಿ ಬಳ್ಲಾರಿ ಜಿಲ್ಲೆ ನೆಲ್ಲೋಡಿ ಗ್ರಾಮಸ್ಥನೊಬ್ಬರಿಗೆ ಬೆನ್ನುಹುರಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ವಿಶೇಷವೆಂದರೆ ಈ ಶಸ್ತ್ರಚಿಕಿತ್ಸೆಯು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿತ್ತು. ಇಂತಹಾ ಮಹತ್ವದ ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿಯಾದ ರಾಜ್ಯದ ಪ್ರಥಮ ಆಸ್ಪತ್ರೆ ತಮ್ಮದಾಗಿದೆ ಎ

ಕೊಪ್ಪಳ: ಗಂಗಾವತಿಯ ತಾಲೂಕು ಆಸ್ಪತ್ರೆಯಲ್ಲಿ ಬಳ್ಲಾರಿ ಜಿಲ್ಲೆ ನೆಲ್ಲೋಡಿ ಗ್ರಾಮಸ್ಥನೊಬ್ಬರಿಗೆ ಬೆನ್ನುಹುರಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ವಿಶೇಷವೆಂದರೆ ಈ ಶಸ್ತ್ರಚಿಕಿತ್ಸೆಯು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿತ್ತು. ಇಂತಹಾ ಮಹತ್ವದ ಶಸ್ತ್ರಚಿಕಿತ್ಸೆ ನಡೆಸಿ ಯಶಸ್ವಿಯಾದ ರಾಜ್ಯದ ಪ್ರಥಮ ಆಸ್ಪತ್ರೆ ತಮ್ಮದಾಗಿದೆ ಎಂದು ದು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಈಶ್ವರ ಸವದಿ ಹೇಳಿದ್ದಾರೆ.

ವೈದ್ಯರಾದ ಸಲಾವುದ್ದೀನ್ ಖಾಲಿದ್, ಎಂ ಡಿ ರೇಣುಕರಾಧ್ಯ, ಸುಜಾತಾ ಮತ್ತು ಶಿವರಾಜ್ ಪಾಟೀಲ್ ಈ ಪ್ರಕ್ರಿಯೆಯನ್ನು ನಿರ್ವಹಿಸಿದ್ದು ಖಾಸಗಿ ಆಸ್ಪತ್ರೆಯೊಂದರಲ್ಲಿ ಈ ಶಸ್ತ್ರಚಿಕಿತ್ಸೆಗಾಗಿ ರೋಗಿಯು ಲಕ್ಷಾಂತರ ರುಪಾಯಿ ಖರ್ಚು ಮಾಡಬೇಕಾಗಿತ್ತು.

ಶಸ್ತ್ರಚಿಕಿತ್ಸೆ ಪಡೆದಿರುವ ನೆಲ್ಲೋಡಿ ಗ್ರಾಮದ 24 ವರ್ಷದ ಹೊಸಕೆರಪ್ಪನವರು ಇದೀಗ ಉತ್ತಮವಾಗಿ ಚೇತರಿಸಿಕೊಂಡಿದ್ದು ಕೆಲ ದಿನಗಳ ವಿಶೇಷ ಗಮನದ ನಂತರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗುವುದು.

ಇನ್ನೂ ಒಂದು ಸಂಗತಿ ಎಂದರೆ ಇದೇ ಆಸ್ಪತ್ರೆಯ ವೈದ್ಯರು ಈ ತಿಂಗಳ ಎರಡನೇ ವಾರದಲ್ಲಿ ಇನ್ನೋರ್ವ ರೋಗಿಗೆ ಮೊಣಕಾಲು ಹಾಗೂ ಸೊಂಟದ ಬದಲಿ ಕೀಲು ಜೋಡಣೆ ಚಿಕಿತ್ಸೆಯನ್ನು ಸಹ ಯಶಸ್ವಿಯಾಗಿ ಪೂರೈಸಿದ್ದಾರೆ. ಇನ್ನು ಕೊಪ್ಪಳದ ಜಿಲ್ಲಾ  ಗಂಗಾವತಿಯ ಜೆಎಂಎಫ್‌ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರಾದ  ಅನಿತಾ ಜಿ 100 ಹಾಸಿಗೆಗಳ ಈ ಆಸ್ಪತ್ರೆಯಲ್ಲಿ ಗರ್ಭಾಶಯ ಶಸ್ತ್ರಚಿಕಿತ್ಸ ಮಾಡಿಸಿಕೊಂಡಿದ್ದರು.

ರಾಜ್ಯದ ತಾಲೂಕು ಆಸ್ಪತ್ರೆಗಳಲ್ಲಿ ಗಂಗಾವತಿ ಅತಿ ಹೆಚ್ಚು ಸುರಕ್ಷಿತವಾಗಿದ್ದು ಸುರಕ್ಷಿತ ಜನನ ಹೆರಿಗೆಗಳ ಅಂಕಿ ಅಂಶವನ್ನೂ ದಾಖಲಿಸಿದೆ. ಗಣ್ಯರಿಗೆ ಮಾತ್ರವಲ್ಲದೆ ಸಾಮಾನ್ಯ ಜನರಿಗೆ ಗುಣಾತ್ಮಕ ಸೇವೆ ಒದಗಿಸಲು ಆಸ್ಪತ್ರೆಯು ಉದ್ದೇಶಿಸಿದೆ ಎಂದು ಡಾ. ಸವದಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಕುರ್ಚಿ ಕಸರತ್ತು: ಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ, ರಾಹುಲ್-ಸೋನಿಯಾ ಜೊತೆ ಚರ್ಚಿಸಿ ಗೊಂದಲ ಬಗೆಹರಿಸುವೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ: ಸಿದ್ದುಗೆ ಪರೋಕ್ಷ ಟಾಂಗ್ ಕೊಟ್ಟರೇ ಡಿಕೆಶಿ..?

ಮೊದಲು ಪರಮೇಶ್ವರ್ ಕೂಲಿ ಚುಕ್ತಾ ಮಾಡಲಿ: ನಂತರ ವಿಧಾನಸಭೆ ವಿಸರ್ಜಿಸಿ ಡಿಕೆಶಿ ನೇತೃತ್ವದಲ್ಲೇ ಚುನಾವಣೆಗೆ ಹೋಗೋಣ!

ನಾವು ಬಿಟ್ಟರು ಧರ್ಮ, ಜಾತಿ ನಮ್ಮನ್ನು ಬಿಡುವುದಿಲ್ಲ: ಒಕ್ಕಲಿಗನಾಗಿ ಹುಟ್ಟಿದ್ದೇನೆ; ಅಶೋಕಣ್ಣನಿಗೆ ಬ್ಯಾಡ್ಜ್ ಕಳಿಸುತ್ತೇನೆ ಹಾಕಿಕೊಳ್ಳಲಿ; DKS

ಅಮೆರಿಕ ಶಕ್ತಿ ಕೇಂದ್ರ ಶ್ವೇತಭವನ ಬಳಿ ಇಬ್ಬರು ಯುಎಸ್ ರಾಷ್ಟ್ರೀಯ ಗಾರ್ಡ್ ಗಳ ಮೇಲೆ ಗುಂಡಿನ ದಾಳಿ: ಶಂಕಿತನ ಗುರುತು ಪತ್ತೆ

SCROLL FOR NEXT