ವಿಂಗ್ ಕಮಾಂಡರ್ ಅರುಣ್ ಕುಮಾರ್ 
ವಿಶೇಷ

ರಾಫೆಲ್‌ ಯುದ್ಧ ವಿಮಾನ ಹಾರಿಸಿಕೊಂಡು ಬಂದಿದ್ದು 'ಹೆಮ್ಮೆಯ ಕನ್ನಡಿಗ'

ಫ್ರಾನ್ಸ್ ನಿಂದ ಭಾರತಕ್ಕೆ ಆಗಮಿಸಿರುವ ಐದು ರಾಫೆಲ್ ಯುದ್ಧ ವಿಮಾನಗಳ ಪೈಕಿ ಒಂದು ಯುದ್ಧ ವಿಮಾನವನ್ನು ಚಲಾಯಿಸಿಕೊಂಡು ಬಂದಿದ್ದು ಓರ್ವ 'ಹೆಮ್ಮೆಯ ಕನ್ನಡಿಗ'.

ವಿಜಯಪುರ: ಫ್ರಾನ್ಸ್ ನಿಂದ ಭಾರತಕ್ಕೆ ಆಗಮಿಸಿರುವ ಐದು ರಾಫೆಲ್ ಯುದ್ಧ ವಿಮಾನಗಳ ಪೈಕಿ ಒಂದು ಯುದ್ಧ ವಿಮಾನವನ್ನು ಚಲಾಯಿಸಿಕೊಂಡು ಬಂದಿದ್ದು ಓರ್ವ 'ಹೆಮ್ಮೆಯ ಕನ್ನಡಿಗ'.

ಹೌದು.. ತೀವ್ರ ಕುತೂಹಲ ಕೆರಳಿಸಿದ್ದ ರಾಫೆಲ್ ಯುದ್ಧ ವಿಮಾನದ ಆಗಮನ ಪೂರ್ಣವಾಗಿದ್ದು, ಈ ಐದು ಯುದ್ಧ ವಿಮಾನಗಳ ಪೈಲಟ್ ಗಳ ತಂಡದಲ್ಲಿ ಕರ್ನಾಟಕ ಮೂಲದ ಓರ್ವ ಪೈಲಟ್ ಕೂಡ ಇದ್ದಾರೆ. ಕರ್ನಾಟಕದ ವಿಜಯಪುರ ಮೂಲದ ಸೈನಿಕರೊಬ್ಬರು ಭಾರತಕ್ಕೆ ರಾಫೆಲ್ ಯುದ್ಧ ವಿಮಾನವನ್ನು ಚಲಾಯಿಸಿಕೊಂಡು ಬಂದಿದ್ದಾರೆ. 

ವಿಜಯಪುರ ಸೈನಿಕ ಶಾಲೆಯಲ್ಲಿ ಅಭ್ಯಾಸ ಪಡೆದ 35 ವರ್ಷದ ವಿಂಗ್‌ ಕಮಾಂಡರ್‌ ಅರುಣ್‌ ಕುಮಾರ್ ಅವರು ರಾಫೆಲ್ ಯುದ್ಧ ವಿಮಾನವನ್ನು ಭಾರತಕ್ಕೆ ಚಲಾಯಿಸಿಕೊಂಡು ಬಂದಿದ್ದಾರೆ. 

ಮಾಧ್ಯಮವೊಂದು ವರದಿ ಮಾಡಿರುವಂತೆ ಅರುಣ್‌ ಕುಮಾರ್‌ 1995ರಿಂದ 2001ರ ವರೆಗೆ ವಿಜಯಪುರದ ಸೈನಿಕ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. ಸೈನಿಕ ಶಾಲೆಯಲ್ಲಿನ ಇವರ ನೋಂದಣಿ ಸಂಖ್ಯೆ 2877 ಆಗಿತ್ತು ಎನ್ನಲಾಗಿದೆ. ಬಳಿಕ 2002ರಲ್ಲಿ ನ್ಯಾಷನಲ್ ಡಿಫೆನ್ಸ್ ಆರ್ಮಿಗೆ ಸೇರ್ಪಡೆಯಾಗಿ ಈಗ ದೇಶ ಸೇವೆ ಸಲ್ಲಿಸುತ್ತಿದ್ದಾರೆ. 

ಅರುಣ್ ಕುಮಾರ್ ಅವರ ತಂದೆ ಎನ್ ಪ್ರಸಾದ್‌ ಸಹ ಏರ್ಫೋರ್ಸ್ ನಲ್ಲಿ ವಾರಂಟ್ ಆಫೀಸರ್ ಆಗಿ ಸೇವೆ ಸಲ್ಲಿಸಿದ್ದರು. ಪುತ್ರ ಅರುಣ್ ಅವರ ಸಾಧನೆಗೆ ಅವರ ತಂದೆ ಪ್ರಸಾದ್ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಬರವಣಿಗೆಯಲ್ಲಿ ಖುಷಿ ಕಂಡ ಪೊಲೀಸ್ ಅಧಿಕಾರಿ: 'ಬಸವಣ್ಣನ ವಚನ' ಗಳನ್ನು ಇಂಗ್ಲೀಷ್ ಗೆ ಅನುವಾದ ಮಾಡ್ತಿರೋ DYSP ಬಸವರಾಜ್ ಯಲಿಗಾರ್!

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

SCROLL FOR NEXT