ಹೊಸ ಪ್ರಭೇದದ ಬಿಲಗಪ್ಪೆ 
ವಿಶೇಷ

ಬೆಂಗಳೂರು ಹೊರವಲಯದಲ್ಲಿ ಹೊಸ ಪ್ರಭೇದದ ಬಿಲಗಪ್ಪೆ ಪತ್ತೆ!

ಬೆಂಗಳೂರಿನ ಹೊರವಲಯದಲ್ಲಿ ಹೊಸ ಪ್ರಭೇದದ ಬಿಲಗಪ್ಪೆಯನ್ನು ಪ್ರಾಣಿ ವಿಜ್ಞಾನಿಗಳು ಪತ್ತೆ ಹಚ್ಚಿದ್ದು, ಇದಕ್ಕೆ ಸ್ಪೆರೋಥೆಕಾ ಎಂದು ನಾಮಕರಣ ಮಾಡಿದ್ದಾರೆ. 

ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿ ಹೊಸ ಪ್ರಭೇದದ ಬಿಲಗಪ್ಪೆಯನ್ನು ಪ್ರಾಣಿ ವಿಜ್ಞಾನಿಗಳು ಪತ್ತೆ ಹಚ್ಚಿದ್ದು, ಇದಕ್ಕೆ ಸ್ಪೆರೋಥೆಕಾ ಎಂದು ನಾಮಕರಣ ಮಾಡಿದ್ದಾರೆ. 

ಹೊಸ ಪ್ರಭೇದವನ್ನು ಮೌಂಟ್ ಕಾರ್ಮೆಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಪಿ.ದೀಪಕ್ ಮತ್ತು ತಂಡ ಪತ್ತೆ ಮಾಡಿದೆ. ಅರಣ್ಯ ಪ್ರದೇಶದಲ್ಲಿ ಹೆಚ್ಚಾಗಿ ಉಭಯಚರಿಗಳನ್ನು ಪತ್ತೆ ಮಾಡಲಾಗುತ್ತದೆ. ಆದರೆ, ಬೆಂಗಳೂರಿನ ಹೊರವಲಯದಲ್ಲಿ ಉಭಯಚರಿಗಳನ್ನು ದಾಖಲಿಸುವ ಪ್ರಯತ್ನದಲ್ಲಿ ಹೊಸ ಜಾತಿಯ ಬಿಲಗಪ್ಪೆ ಪತ್ತೆಯಾಗಿದೆ.ಸಿಲಿಕಾನ್ ಸಿಟಿ ಬೆಂಗಳೂರಿನ ಗೌರವಾರ್ಥವಾಗಿ ಈ ಹೌಸ ಪ್ರಭೇದಕ್ಕೆ ಸ್ಪೆರೋಥೆಕಾ ಬೆಂಗಳೂರುಎಂದು ನಾಮಕರಣ ಮಾಡಲಾಗಿದೆ. 

ಈ ಹೊಸ ಪ್ರಭೇದವನ್ನು ದಕ್ಷಿಣ ಏಷ್ಯಾದಾದ್ಯಂತ ಕಂಡು ಬರುವ ಸ್ಪೆರೋಥಿಕಾ ಪ್ರಭೇದದ ಕಪ್ಪೆಗಳೊಂದಿಗೆ ಬಾಹ್ಯವಿಜ್ಞಾನ ಮತ್ತು ಅನುವಂಶಿಕ ವ್ಯತ್ಯಾಸಗಳ ಆಧಾರದ ಮೇಲೆ ವಿವರಿಸಲಾಗಿದೆ. ಪತ್ತೆಯಾಗಿರುವ ಬಿಲಗಪ್ಪೆಯ ಬಗ್ಗೆ ಅಂತರಾಷ್ಟ್ರೀಯ ಜರ್ನಲ್ ಆದ ನ್ಯೂಜಿಲ್ಯಾಂಡಿನ ಝೋಟಾಕ್ಸಾ ದಲ್ಲಿ ಪ್ರಕಟಿಸಲಾಗಿದೆ. 

ಬೆಂಗಳೂರು ನಗರೀಕರಣದ ಹೆಚ್ಚಳದಿಂದ ಇಲ್ಲಿನ ಜಲಮೂಲ ಮಲಿನಗೊಂಡಿರುವ ಪರಿಣಾಮ ಕಪ್ಪೆಗಳು ನಗರ ಪ್ರದೇಶಗಳಲ್ಲಿ ವಿನಾಶದ ಹಾದಿ ಹಿಡಿದಿವೆ. ಸ್ಪೆರೋಥೆಕಾ ಬೆಂಗಳೂರು ಕಪ್ಪೆಯ ವಾಸದ ವಿಸ್ತರಣಾ ವ್ಯಾಪ್ತಿ ಮತ್ತು ಸಂತಾನೋತ್ಪತ್ತಿ, ಇತಿಹಾಸದ ಬಗ್ಗೆ ಇನ್ನೂ ಹೆಚ್ಚಿನ ಅಧ್ಯಯನಗಳು ನಡೆಯಬೇಕಿದೆ ಎಂದು ಭಾರತೀಯ ಪ್ರಾಣಿ ಸಂಸ್ಥಾನದ ವಿಜ್ಞಾನಿ ಡಾ,ದಿನೇಶ್ ತಿಳಿಸಿದ್ದಾರೆ. 

ಹೊಸ ಪ್ರಭೇದದ ಪತ್ತೆಯನ್ನು ಪಿ.ದೀಪಕ್ ಅವರು, ಫ್ರಾನ್ಸ್'ನ ನ್ಯಾಷನಲ್ ಮ್ಯೂಸಿಯಂ ಆಫ್ ನ್ಯಾಚುರಲ್ ಹಿಸ್ಟರಿಯ ವಿಜ್ಞಾನಿ ಡಾ.ಅನ್ನೆಮರಿ ಓಹ್ಲರ್, ಐಐಎಸ್ಸಿ ಪ್ರೊಫೆಸರ್ ಡಾ.ಕಾರ್ತಿಕ್ ಶಂಕರ್, ಭಾರತೀಯ ಪ್ರಾಣಿ ಸಂಸ್ಥಾನದ ವಿಜ್ಞಾನಿಗಳಾದ ಡಾ.ದಿನೇಶ್, ಡಾ.ಬಿ.ಹೆಚ್.ಚನ್ನಕೇಶವಮೂರ್ತಿ, ಮೈಸೂರು ಯುವರಾಜ ಕಾಲೇಜಿನ ಪ್ರೊ.ಜೆ.ಎಸ್.ಆಶಾದೇವಿಯವರೊಂದಿಗೆ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT