ಪಿ ಪೊನ್ ಮರಿಯಪ್ಪನ್ ತನ್ನ ಸಲೂನ್ ನಲ್ಲಿ 
ವಿಶೇಷ

ಸಲೂನ್ ನಲ್ಲಿ ಗ್ರಂಥಾಲಯ: ತಮಿಳು ನಾಡಿನ ತೂತುಕುಡಿಯ ಕ್ಷೌರಿಕನಿಗೆ ಪ್ರಧಾನಿ ಮೋದಿ ಶ್ಲಾಘನೆ

ಸಲೂನ್ ಅಥವಾ ಕ್ಷೌರದಂಗಡಿಗೆ ಪುರುಷರು ಹೋದಾಗ ಕಾಣಸಿಗುವುದೇನು, ಬಾಚಣಿಗೆ, ಶೇವಿಂಗ್ ಕ್ರೀಮ್, ಕತ್ತರಿ ಇತ್ಯಾದಿ, ಸಲೂನ್ ನಲ್ಲಿ ಇವೆಲ್ಲವುಗಳ ಜೊತೆಗೆ ಸುಮಾರು 1500 ಪುಸ್ತಕಗಳನ್ನು ಹೊಂದಿರುವ ಲೈಬ್ರೆರಿಯಿದೆ ಎಂದರೆ ನಂಬುತ್ತೀರಾ!

ತೂತುಕುಡಿ: ಸಲೂನ್ ಅಥವಾ ಕ್ಷೌರದಂಗಡಿಗೆ ಪುರುಷರು ಹೋದಾಗ ಕಾಣಸಿಗುವುದೇನು, ಬಾಚಣಿಗೆ, ಶೇವಿಂಗ್ ಕ್ರೀಮ್, ಕತ್ತರಿ ಇತ್ಯಾದಿ, ಸಲೂನ್ ನಲ್ಲಿ ಇವೆಲ್ಲವುಗಳ ಜೊತೆಗೆ ಸುಮಾರು 1500 ಪುಸ್ತಕಗಳನ್ನು ಹೊಂದಿರುವ ಲೈಬ್ರೆರಿಯಿದೆ ಎಂದರೆ ನಂಬುತ್ತೀರಾ!.

ಹೌದು ತಮಿಳು ನಾಡಿನ ತೂತುಕುಡಿಯ ಮಿಲ್ಲರ್ ಪುರಂ ಎಂಬಲ್ಲಿ 39ರ ಹರೆಯದ ಪಿ ಪೊನ್ ಮರಿಯಪ್ಪನ್ ಅವರ ಸಲೂನ್ ಇದೆ, ಅವರ ಸಲೂನ್ ನಲ್ಲಿ ಲೈಬ್ರೆರಿಯಿದೆ, ಅಲ್ಲಿ ಹೋಗಿ ಪುಸ್ತಕ ಓದಿ ಸಲೂನ್ ಮಾಡಿಸಿಕೊಂಡರೆ ಗ್ರಾಹಕರಿಗೆ ಡಿಸ್ಕೌಂಟ್ ಕೂಡ ಇದೆ.

ಇವರು 2015ರಲ್ಲಿ ಗ್ರಂಥಾಲಯವನ್ನು ಆರಂಭಿಸಿದರು, ಸಾಹಿತ್ಯ, ಓದಿನಲ್ಲಿ ಆಸಕ್ತಿ ಇರುವ ಮರಿಯಪ್ಪನ್ ತನ್ನ ಸಲೂನ್ ಗೆ ಬರುವ ಗ್ರಾಹಕರು ಕಾಯುತ್ತಿರುವ ವೇಳೆ ಸಮಯ ಸದುಪಯೋಗ ಮಾಡಿಕೊಂಡು ಪುಸ್ತಕ ಓದಲಿ ಎಂಬ ನಿಲುವು ಅವರದ್ದು.

ಮನ್ ಕಿ ಬಾತ್ ನಲ್ಲಿ ಪ್ರಸ್ತಾಪ: ದೂರದರ್ಶನ ವಾಹಿನಿಯ ಸಿಬ್ಬಂದಿ ಅವರನ್ನು ಈ ಬಗ್ಗೆ ಮಾತನಾಡಲು ಸ್ಟುಡಿಯೊಗೆ ಕರೆದಿದ್ದರು. ಆಗ ಸ್ವತಃ ಮರಿಯಪ್ಪನ್ ಗೆ ಇದು ಇಷ್ಟು ದೊಡ್ಡ ಸುದ್ದಿಯಾಗುತ್ತದೆ ಎಂದು ಗೊತ್ತಿರಲಿಲ್ಲ. ದೂರದರ್ಶನ ಸಿಬ್ಬಂದಿ ಮರಿಯಪ್ಪನ್ ನ್ನು ಮಾತನಾಡಿಸಿ ರೆಕಾರ್ಡ್ ಮಾಡಿಕೊಂಡಿದ್ದರು.

ಕಳೆದ ಭಾನುವಾರ ತಮ್ಮ ಮನದಾಳದ ಮಾತು ರೇಡಿಯೊ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮರಿಯಪ್ಪನ್ ಅವರ ಕೆಲಸವನ್ನು ಮೆಚ್ಚಿ ಮಾತುಗಳನ್ನಾಡಿದ್ದರು, ಅದು ಮನ್ ಕಿ ಬಾತ್ ನಂತರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಯಿತು.

ತಮ್ಮ ಕೆಲವನ್ನು ಗುರುತಿಸಿ ಮೆಚ್ಚಿ ಪ್ರಧಾನಿ ಆಡಿದ ಮೆಚ್ಚುಗೆಯ ಮಾತುಗಳಿಂದ ಮರಿಯಪ್ಪನ್ ತುಂಬಾ ಸಂತೋಷಗೊಂಡಿದ್ದಾರೆ. ನನಗೆ ಪ್ರಧಾನಿಯವರ ಮೆಚ್ಚುಗೆ ನುಡಿ ಇನ್ನಷ್ಟು ಕೆಲಸ ಮಾಡಲು ಉತ್ತೇಜನ ಸಿಕ್ಕಿದಂತಾಗಿದೆ ಎಂದರು.

ಲೈಬ್ರೆರಿ ಸ್ಥಾಪಿಸಲು ನಿಮಗೆ ಪ್ರೇರಣೆ ಏನು ಎಂದು ಪ್ರಧಾನಿಯವರು ಕೇಳಿದ್ದಾಗ ಮರಿಯಪ್ಪನ್, ಬಡತನದಿಂದಾಗಿ ತಮಗೆ ಶಾಲೆಗೆ ಹೋಗಲು ಸಾಧ್ಯವಾಗದೆ ಓದನ್ನು ಅರ್ಧಕ್ಕೆ ನಿಲ್ಲಿಸಬೇಕಾಯಿತು. ನನಗೆ ಉತ್ತಮ ವಿದ್ಯಾಭ್ಯಾಸ ಪಡೆಯಲು ಸಾಧ್ಯವಾಗಲಿಲ್ಲ ಎಂಬ ವಿಷಾದವಿದೆ. ಹೀಗಾಗಿ ಸಲೂನ್ ನಲ್ಲಿ ಗ್ರಂಥಾಲಯ ಸ್ಥಾಪಿಸಿ ಓದಿನ ರುಚಿಯನ್ನು ನಾನು ಹಚ್ಚಿಕೊಳ್ಳುವುದರ ಜೊತೆಗೆ ಬೇರೆಯವರಿಗೂ ಓದಲು ಪ್ರೇರೇಪಿಸುತ್ತೇನೆ. ನನಗೆ ತಿರುಕ್ಕುರಲ್ ಪುಸ್ತಕವೆಂದರೆ ಬಹಳ ಇಷ್ಟ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT